ಕ್ಲರ್ಕ್ ಆಗಿದ್ದ ಕಲ್ಕಿ ಭಗವಾನ್ ಸರ್ಕಾರಕ್ಕೆ ಕೋಟ್ಯಂತರ ಹಣ ವಂಚನೆ
ಚೆನ್ನೈ, ಅಕ್ಟೋಬರ್ 19: ಒಂದು ಕಾಲದಲ್ಲಿ ಸಾಮಾನ್ಯ ಕ್ಲರ್ಕ್ ಆಗಿದ್ದ ವಿಜಯ್ಕುಮಾರ್ ಆ ನಂತರ ಸ್ವಯಂ ಘೋಷಿತ ದೇವ ಮಾನವ ಕಲ್ಕಿ ಆಗಿ ಕೋಟ್ಯಂತರ ರೂಪಾಯಿ ಸಂಪಾದನೆ ಮಾಡಿದ್ದಲ್ಲದೆ, ಸರ್ಕಾರಕ್ಕೆ ಕೋಟ್ಯಂತರ ಹಣ ತೆರಿಗೆ ವಂಚನೆ ಮಾಡಿದ್ದಾನೆ.
ಸ್ವಯಂ ಘೋಷಿತ ದೇವಮಾನವ ಕಲ್ಕಿಯ ಚೆನ್ನೈ ಮತ್ತು ಆಂಧ್ರದ ಚಿತ್ತೂರು ಜಿಲ್ಲೆಯ ವರದೈಪಾಲಂ ಸೇರಿದಂತೆ ಹಲವು ಸ್ಥಳಗಳ ಮೇಲೆ ಐಟಿ ದಾಳಿ ನಡೆಸಿದ್ದು ಶೋಧ ಕಾರ್ಯ ಇನ್ನೂ ಮುಗಿದಿಲ್ಲ, ಈಗಾಗಲೇ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ, ಹಣ, ಆಭರಣಗಳನ್ನು ಐಟಿ ವಶಪಡಿಸಿಕೊಂಡಿದೆ.
ಕಲ್ಕಿ ಭಗವಾನ್ ಹೆಸರಿನಿಂದ ಪರಿಚಿತನಾಗಿರುವ ವಿಜಯ್ಕುಮಾರ್ ಆತನನ್ನು ದೇವರ ಅವಾತರವೆಂದು ಹೇಳಿಕೊಳ್ಳುತ್ತಾನೆ. ಆತನ ಮಡದಿಯೂ ಸಹ ದೇವರ ಅವತಾರವೆಂದು ಹೇಳಿಕೊಂಡು ಕೋಟ್ಯಂತರ ಭಕ್ತಾದಿಗಳನ್ನು ಸಂಪಾದಿಸಿದ್ದಾರೆ.

ಕಲ್ಕಿ ಸಂಬಂಧಿತ ಆಶ್ರಮ, ನಿವಾಸಗಳ ಮೇಲೆ ಕೆಲವು ದಿನಗಳ ಹಿಂದೆ ಐಟಿ ದಾಳಿ ನಡೆದಿದ್ದು, ನಿನ್ನೆಯ ವರೆಗೆ 500 ಕೋಟಿ ಅಕ್ರಮ ಹಣವನ್ನು ಪತ್ತೆ ಮಾಡಲಾಗಿದೆ. 88 ಕೆ.ಜಿ ಚಿನ್ನ, ಕೋಟ್ಯಂತರ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಲ್ಕಿ ಮಗ ಕೃಷ್ಣ ಮೇಲೂ ಐಟಿ ದಾಳಿ ಆಗಿದ್ದು ನಗದು, ಆಸ್ತಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. 2014-15 ರಿಂದಲೇ ಹಲವು ದಾಖಲೆಗಳಿಲ್ಲದ ಹಣಕಾಸು ವ್ಯವಹಾರ ನಡೆದಿರುವುದು ಗಮನಕ್ಕೆ ಬಂದಿದ್ದು, ತನಿಖೆ ಇನ್ನೂ ಚಾಲ್ತಿಯಲ್ಲಿದೆ.
ಕಲ್ಕಿ ಭಗವಾನ್ ಮೊದಲಿಗೆ ಎಲ್ಐಸಿ ಯಲ್ಲಿ ಸಾಮಾನ್ಯ ಕ್ಲರ್ಕ್ ಆಗಿದ್ದರು, ನಂತರ ಸ್ನೇಹಿತರೊಂದಿಗೆ ಸೇರಿ ವಸತಿ ಶಾಲೆ ಆರಂಭಿಸಿದರು. ನಂತರ ಆಶ್ರಮ ಸ್ಥಾಪಿಸಿ ದೇವ ಮಾನವನೆಂಬ ಪಟ್ಟ ಸಂಪಾದಿಸಿಕೊಂಡರು. ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ಹಲವು ಕಡೆ ಅವರಿಗೆ ಭಕ್ತರು ಇದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications