ಕಪ್ಪು ಹಣದೊಂದಿಗೆ ಸಿಕ್ಕಿಬಿದ್ದ ಟಿಟಿಡಿ ಸದಸ್ಯ ಕಿಕ್ಡ್ ಔಟ್!
ಚೆನ್ನೈ, ಡಿಸೆಂಬರ್ 10: ವಾಹನದಲ್ಲಿ ಸಾಗಿಸುತ್ತಿದ್ದ ಇಪ್ಪತ್ನಾಲ್ಕು ಕೋಟಿ ರುಪಾಯಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶನಿವಾರ ವೇಲೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಲೆಕ್ಕಕ್ಕೆ ನೀಡದ, ಈ ಎಲ್ಲ ಹೊಸ ನೋಟುಗಳ ಹಣವು ಶೇಖರ್ ರೆಡ್ಡಿ ಎಂಬುವರಿಗೆ ಸೇರಿದ್ದು ಎಂದು ಆರೋಪಿಸಲಾಗಿದೆ.
ಈಚೆಗೆ ಚೆನ್ನೈನಲ್ಲಿ ಮೂವರು ವ್ಯಾಪಾರಸ್ಥರ ಮನೆ-ಕಚೇರಿ ಮೇಲೆ ಐಟಿ ದಾಳಿ ನಡೆದಿತ್ತು. ಆ ಮೂವರಲ್ಲಿ ಶೇಖರ್ ರೆಡ್ಡಿ ಕೂಡ ಒಬ್ಬರು. ಚೆನ್ನೈನ ಎಂಟು ಕಡೆ ಎರಡು ದಿನಗಳ ಕಾಲ ನಡೆದ ದಾಳಿಯಲ್ಲಿ 170 ಕೋಟಿ ನಗದು ಹಾಗೂ 130 ಕೆ.ಜಿ. ಚಿನ್ನ ಸಿಕ್ಕಿತ್ತು. ಈ ದಾಳಿಗಳಾದ ನಂತರ ತಿರುಮತಿ ತಿರುಮಲ ದೇವಸ್ಥಾನ ಮಂಡಳಿ ಸದಸ್ಯತ್ವ ಸ್ಥಾನದಿಂದ ಶೇಖರ್ ರೆಡ್ಡಿ ಅವರನ್ನು ಕಿತ್ತುಹಾಕಲಾಗಿದೆ.[ಭರವಸೆ ಕೊಡ್ತೀನಿ ಒಬ್ರನ್ನೂ ಬಿಡಲ್ಲ : ನರೇಂದ್ರ ಮೋದಿ]

ನೋಟು ರದ್ದು ನಿರ್ಧಾರದ ನಂತರ ಶೇಖರ್ ರೆಡ್ಡಿ ಮತ್ತಿಬ್ಬರು ವ್ಯಾಪಾರಿಗಳು ಹಣ ಬದಲಾವಣೆ ದಂಧೆಯಲ್ಲಿ ತೊಡಗಿಕೊಂಡಿದ್ದರು. ದೇಶದ ಇತರೆಡೆ ನಡೆದ ಆದಾಯ ತೆರಿಗೆ ಇಲಾಖೆ ದಾಳಿಗಳಿಗಿಂತ ಚೆನ್ನೈನಲ್ಲಿ ಅತಿ ಹೆಚ್ಚಿನ ಮೊತ್ತ ದೊರೆತಿದೆ. ಅಧಿಕಾರಿಗಳು ಅನುಮಾನ ಪಡುವಂತೆ, ಈ ಮೂವರು ಅದಾಗಲೇ ಹಣ ಬದಲಾವಣೆ ಮಾಡಿದ್ದರು. ನೋಟು ಅಪನಗದೀಕರಣದ ನಂತರ ಚೆನ್ನೈನಲ್ಲಿ ಸಿಕ್ಕಿದ್ದು ಅತಿ ಹೆಚ್ಚಿನ ಮೊತ್ತ ಇದಾಗಿತ್ತು.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications