ಅಧಿಕಾರದಲ್ಲಿದ್ದಾಗಲೇ ನಿಧನ, ತಮಿಳುನಾಡಿನ ಮೂರನೇ ಸಿಎಂ ಜಯಾ
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾಗಲೇ ಜೆ ಜಯಲಲಿತಾ ಅವರು ಮೃತಪಟ್ಟಿದ್ದಾರೆ. ಅಧಿಕಾರದಲ್ಲಿದ್ದಾಗಲೇ ಜನಪ್ರಿಯ ಮುಖ್ಯಮಂತ್ರಿಯೊಬ್ಬರನ್ನು ಕಳೆದುಕೊಳ್ಳುವುದು ತಮಿಳುನಾಡಿನ ಜನತೆ ಪಾಲಿಗೆ ದುರಂತ ಸಂಗತಿಯಾಗಿ ಪರಿಣಮಿಸಿದೆ.
ಚೆನ್ನೈ, ಡಿಸೆಂಬರ್ 06: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾಗಲೇ ಜೆ ಜಯಲಲಿತಾ ಅವರು ಮೃತಪಟ್ಟಿದ್ದಾರೆ. ಡಿಸೆಂಬರ್ 05, 2016ರ ರಾತ್ರಿ 11.30 ರ ಸುಮಾರಿಗೆ ಹೃದಯಾಘಾತಕ್ಕೊಳಗಾಗಿ ಇಹಲೋಕ ವ್ಯಾಪಾರ ಮುಗಿಸಿದ್ದಾರೆ. 68 ವರ್ಷ ವಯಸ್ಸಿನ ಜಯಲಲಿತಾ ಅವರು ಸಾವಿನಲ್ಲೂ ತನ್ನ ಗುರುವಿನ ಹಾದಿಯನ್ನು ತುಳಿದಿದ್ದಾರೆ.
[ಗ್ಯಾಲರಿ: ಶೋಕಸಾಗರದಲ್ಲಿ 'ಅಮ್ಮ'ನ ಮಕ್ಕಳು]
ಅಧಿಕಾರದಲ್ಲಿದ್ದಾಗಲೇ ಜನಪ್ರಿಯ ಮುಖ್ಯಮಂತ್ರಿಯೊಬ್ಬರನ್ನು ಕಳೆದುಕೊಳ್ಳುವುದು ತಮಿಳುನಾಡಿನ ಜನತೆ ಪಾಲಿಗೆ ದುರಂತ ಸಂಗತಿಯಾಗಿ ಪರಿಣಮಿಸಿದೆ. ಮೊದಲಿಗೆ ಸಿ.ಎನ್ ಅಣ್ಣಾದೊರೈ ಅವರು ಕ್ಯಾನ್ಸರಿಗೆ ಬಲಿಯಾದರೆ, ನಂತರ ಎಐಎಡಿಎಂಕೆಯ ನಾಯಕ, ನಟ ಎಂಜಿ ರಾಮಚಂದ್ರನ್ ಅವರು ಹಾಗೂ ಈಗ ಪುರಚ್ಚಿ ತಲೈವಿ ಜಯಲಲಿತಾ ಅವರು ಈ ಹಾದಿ ಹಿಡಿದಿದ್ದಾರೆ.
ಅಣ್ಣಾ ಎಂದು ಕರೆಸಿಕೊಳ್ಳುತ್ತಿದ್ದ ದ್ರಾವಿಡ ಪಕ್ಷದ ನಾಯಕ ಸಿ.ಎನ್ ಅಣ್ಣಾದೊರೈ ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು. ಕಚೇರಿಗೆ ಹೋಗಬೇಡಿ ಎಂದು ವೈದ್ಯರ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಕಚೇರಿಗೆ ಹಾಜರಾಗುತ್ತಿದ್ದರು. ಫೆಬ್ರವರಿ 3, 1969ರಂದು ಮೃತಪಟ್ಟರು.

ಅಣ್ಣಾ ಡಿಎಂಕೆ ಪಕ್ಷವನ್ನು ಉತ್ತುಂಗ ಮಟ್ಟಕ್ಕೇರಿಸಿದ ಜನಪ್ರಿಯ ನಾಯಕ ಎಂಜಿ ರಾಮಚಂದ್ರನ್ ಅವರು ನಟನಾಗಿ, ಮುಖ್ಯಮಂತ್ರಿಯಾಗಿ ತಮಿಳರಿಗೆ ಆಪ್ತರಾದವರು. ರಾಜಕೀಯವಾಗಿ ಕೂಡಾ ಜಯಲಲಿತಾ ಅವರನ್ನು ಬೆಳೆಸಿದವರು. ಮಧುಮೇಹದಿಂದ ಬಳಲುತ್ತಿದ್ದ ರಾಮಚಂದ್ರನ್ ಅವರು ಕಿಡ್ನಿ ವೈಫಲ್ಯಕ್ಕೆ ತುತ್ತಾಗಿದ್ದರು. ಕೊನೆಗಳಿಗೆಯಲ್ಲಿ ಅಮೆರಿಕಕ್ಕೆ ಹಾರಿ ಚಿಕಿತ್ಸೆ ಪಡೆಯುವ ಯತ್ನ ಕೂಡಾ ಫಲಕಾರಿಯಾಗಲಿಲ್ಲ. ಡಿಸೆಂಬರ್ 24, 1987ರಂದು ಮೃತಪಟ್ಟರು. ಎಂಜಿಆರ್ ನಿಧನದ ಸುದ್ದಿ ಆಘಾತಕಾರಿಯಾಗಿ ಪರಿಣಮಿಸಿ ಅನೇಕ ಅಭಿಮಾನಿಗಳು ತಮ್ಮ ಸ್ಟಾರ್ ಸಿಎಂಗಾಗಿ ಪ್ರಾಣ ತೆತ್ತರು.
ನಂತರ ಅಧಿಕಾರಕ್ಕೆ ಬಂದ ಜಯಲಲಿತಾ ಅವರು ಜನಪ್ರಿಯ ಯೋಜನೆಗಳ ಮೂಲಕ ಜನಮನ್ನಣೆ ಗಳಿಸಿದರು. ಡಿಸೆಂಬರ್ 05, 2016ರಂದು ಕಿಡ್ನಿ ವೈಫಲ್ಯ, ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜಯಲಲಿತಾ ಅವರ ಪಾರ್ಥೀವ ಶರೀರವನ್ನು ರಾಜಾಜಿ ಹಾಲ್ ನಲ್ಲಿ ಇರಿಸಲಾಗುತ್ತಿದ್ದು, ಸಾರ್ವಜನಿಕರು ಅಂತಿಮ ದರ್ಶನ ಪಡೆದುಕೊಳ್ಳಬಹುದಾಗಿದೆ. ಅಂತ್ಯಕ್ರಿಯೆಯನ್ನು ಮಂಗಳವಾರ ಸಂಜೆ ವೇಳೆಗೆ ಮರೀನಾ ಬೀಚ್ ನಲ್ಲಿ ನೆರವೇರಿಸಲಾಗುವುದು, ಎಂಜಿಆರ್ ಅವರ ಸಮಾಧಿ ಪಕ್ಕದಲ್ಲೇ ಜಯಲಲಿತಾ ಅವರ ಸಮಾಧಿ ಸ್ಥಾಪಿಸಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ.(ಒನ್ ಇಂಡಿಯಾ ಸುದ್ದಿ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications