ಚೆನ್ನೈ: ಟ್ರಾಫಿಕ್ ರಾಮಸ್ವಾಮಿ ಸೇರಿ 28 ಅಭ್ಯರ್ಥಿಗಳಿಗೆ ಸೋಲು
ಚೆನ್ನೈ, ಜೂ.30: ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರು ನಿರೀಕ್ಷೆಯಂತೆ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿ ಶಾಸಕಿ ಎನಿಸಿಕೊಂಡಿದ್ದಾರೆ.ಆರ್.ಕೆ.ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಸರಿ ಸುಮಾರು 1.6 ಲಕ್ಷ ಮತಗಳನ್ನು ಜಯಾ ಅವರು ಗಳಿಸಿದ್ದಾರೆ.
ಚೆನ್ನೈನ ರಾಣಿ ಮೇರಿ ಕಾಲೇಜಿನಲ್ಲಿ ಮಂಗಳವಾರ ನಡೆದ ಮತ ಎಣಿಕೆ ಕಾರ್ಯ ಇದೀಗ ಮುಕ್ತಾಯವಾಗಿದ್ದು, ಜಯಲಲಿತಾ ಅವರು ತಮ್ಮ ಎದುರಾಳಿಯನ್ನು 1.51 ಲಕ್ಷ ಮತಗಳ ಅಂತರದಿಂದ ಸುಲಭವಾಗಿ ಸೋಲಿಸಿದ್ದಾರೆ.[ಜಯಲಲಿತಾ ಘೋಷಣೆ ಮಾಡಿದ ಆಸ್ತಿ ಎಷ್ಟು ಗೊತ್ತಾ?]
15ನೇ ಸುತ್ತಿನ ಮತಎಣಿಕೆ(ಒಟ್ಟು 17 ಸುತ್ತು) ನಂತರ ಪ್ರತಿಸ್ಪರ್ಧಿ ಸಿಪಿಎಂನ ಅಭ್ಯರ್ಥಿ ಸಿ.ಮಹೇಂದ್ರನ್ ಅವರು ಕೇವಲ 8875 ಮತಗಳನ್ನು ಪಡೆದುಕೊಂಡರು. ಅಂತಿಮವಾಗಿ ಜಯಲಲಿತಾ 1,60,432 ಮತಗಳನ್ನು ಪಡೆದರೆ, ಸಿ ಮಹೇಂದ್ರನ್ 9,710 ಮತಗಳನ್ನು ಪಡೆದರು. ಅರ್ ಕೆ ನಗರ ವಿಧಾನಸಭಾ ಕ್ಷೇತ್ರದಲ್ಲಿ 2,45,000 ಮತಗಳಿತ್ತು.

2011ರಿಂದ ಎಲ್ಲಾ ಮಹಾ ಚುನಾವಣೆ, ಉಪ ಚುನಾವಣೆಗಳಲ್ಲಿ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಪಕ್ಷ ಜಯಭೇರಿ ಬಾರಿಸುತ್ತಾ ಬಂದಿದೆ.. ಫಲಿತಾಂಶ ಪ್ರಕಟಣೆಗೂ ಮುನ್ನವೇ ತಮಿಳುನಾಡಿನಾದ್ಯಂತ ಎಐಎಡಿಎಂಕೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ['ಮೆಟ್ರೋ ರೈಲು' ಬಿಟ್ಟ ಜಯಾ ]
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕದ ವಿಶೇಷ ಕೋರ್ಟಿನಿಂದ ಜಯಲಲಿತಾ ಅವರು ನಾಲ್ಕು ವರ್ಷ ಜೈಲು ಶಿಕ್ಷೆ ಗುರಿಯಾಗಿದ್ದರು. ಹೀಗಾಗಿ ಅವರ ವಿಧಾನಸಭೆ ಸದಸ್ಯತ್ವ ರದ್ದುಗೊಂಡಿತ್ತು. ಹೈಕೋರ್ಟ್ ನಿಂದ ಕ್ಲೀನ್ಚಿಟ್ ಪಡೆದ ಜಯಾ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.
ನಂತರ ಆರ್.ಕೆ.ನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದರು. ಜೂನ್ 27ರಂದು ಆರ್.ಕೆ. ನಗರ ವಿಧಾನಸಭೆಗೆ ಉಪ ಚುನಾವಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಸೇರಿದಂತೆ 28 ಅಭ್ಯರ್ಥಿಗಳು ಕಣದಲ್ಲಿದ್ದರು. 1,000ಕ್ಕೂ ಅಧಿಕ ನೋಟಾ ಮತಗಳು ಇದ್ದದ್ದು ವಿಶೇಷ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications