1-2 ದಿನದಲ್ಲಿ ನಡೆಯಲಿದೆ ಜಲ್ಲಿಕಟ್ಟು -ಪನ್ನೀರ್ ಸೆಲ್ವಂ
ಚೆನ್ನೈ, ಜನವರಿ 20: ಜಲ್ಲಿಕಟ್ಟು ನಿಷೇಧ ವಾಪಸ್ ತೆಗೆದುಕೊಳ್ಳಲು ಕೇಂದ್ರ ಸರಕಾರ ತಿದ್ದುಪಡಿ ತರುವ ಸಾಧ್ಯತೆ ಇದೆ. ಒಂದೆರಡು ದಿನದಲ್ಲಿ ಜಲ್ಲಿಕಟ್ಟು ನಡೆಸಲು ಅನುವು ಮಾಡಿಕೊಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಹೇಳಿದ್ದಾರೆ.
ಒಂದರಿಂದ ಎರಡು ದಿನದಲ್ಲಿ ಜಲ್ಲಿಕಟ್ಟು ನಡೆಯುವ ಎಲ್ಲಾ ಸಾಧ್ಯತೆ ಇದೆ. ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯಿಂದ ಹಿಂದೆ ಸರಿಯಬೇಕು ಎಂದು ಪನ್ನೀರ್ ಸೆಲ್ವಂ ಹೇಳಿದ್ದಾರೆ.[ಸುಗ್ರೀವಾಜ್ಞೆ ಹೊರಡಿಸುವವರೆಗೆ ಜಲ್ಲಿಕಟ್ಟು ಪ್ರತಿಭಟನೆ ನಿಲ್ಲಲ್ಲ!]

"ಜಲ್ಲಿಕಟ್ಟು ನಡೆಸಲು ಕೇಂದ್ರ ಸರಕಾರ ತಿದ್ದುಪಡಿ ತರಬೇಕಾಗಿದ್ದು ಕರಡು ಸಿದ್ಧತೆ ನಡೆಯುತ್ತಿದೆ. ನಾನು ತಮಿಳುನಾಡಿನ ಹಿರಿಯ ಅಧಿಕಾರಿಗಳನ್ನು ಕೇಂದ್ರದ ಜತೆ ಸೇರಿ ಕರಡು ಸಿದ್ಧಪಡಿಸಲು ಕಳುಹಿಸಿಕೊಟ್ಟಿದ್ದೇನೆ. ತಮಿಳುನಾಡು ಸರಕಾರದ ಕಡೆಯಿಂದ ಕರಡು ಪ್ರತಿಯನ್ನು ಕೇಂದ್ರ ಗೃಹ ಇಲಾಖೆಗೆ ಇಂದು ಬೆಳಿಗ್ಗೆ ಕಳುಹಿಸಿಕೊಡಲಾಗಿದೆ. ನನ್ನ ಪ್ರಕಾರ ಒಂದೆರಡು ದಿನದಲ್ಲಿ ಕರಡು ಸಿದ್ಧವಾಗಲಿದೆ," ಎಂದು ಪನ್ನೀರ್ ಸೆಲ್ವಂ ಹೇಳಿದ್ದಾರೆ.[ಗ್ಯಾಲರಿ : ಜಲ್ಲಿಕಟ್ಟುಗಾಗಿ ಪ್ರತಿಭಟನೆ, ತಮಿಳರ ಅರ್ಭಟ]
ಹೀಗಾಗಿ ಪ್ರತಿಭಟನಾಕಾರರು ತಕ್ಷಣ ತಮ್ಮ ಪ್ರತಿಭಟನೆ ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪರಿಸರ ಸಚಿವರ ಭೇಟಿ
ಇದೇ ವೇಳೆ ಇಂದು ಪೊನ್ ರಾಧಾಕೃಷ್ಣನ್, ತಮಿಝಿಸಾಯಿ ಸುಂದರಾಜನ್ ಮತ್ತು ಜಲ್ಲಿಕಟ್ಟು ಒಕ್ಕೂಟದ ಅಧಿಕಾರಿಗಳು ಪರಿಸರ ಮತ್ತು ಅರಣ್ಯಖಾತೆ ರಾಜ್ಯ ದರ್ಜೆ ಸಚಿವ ಅನಿಲ್ ದವೆಯವರನ್ನು ಭೇಟಿಯಾಗಿ ತಮ್ಮ ಅಹವಾಲು ಮಂಡಿಸಲಿದ್ದಾರೆ.
ಇನ್ನು ಮಂಬಾಳಂನಲ್ಲಿ ಡಿಎಂಕೆ ಕಾರ್ಯಕರ್ತರು ಜಲ್ಲಿಕಟ್ಟು ನಡೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಕೂಡಾ ಭಾಗವಹಿಸಿದ್ದಾರೆ. ಅತ್ತ ಮರೀನಾ ಬೀಚಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications