ಜಯಲಲಿತಾ ಹುಟ್ಟುಹಬ್ಬದಂದು ಜನಿಸಿದ ಮಕ್ಕಳಿಗೆ ಚಿನ್ನದ ಉಂಗುರ ಗಿಫ್ಟ್
ಚೆನ್ನೈ, ಫೆಬ್ರವರಿ 25: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಹುಟ್ಟುಹಬ್ಬವನ್ನು ಫೆಬ್ರವರಿ 24ರಂದು ತಮಿಳುನಾಡಿನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಅಂದು ಹುಟ್ಟಿದ ಮಕ್ಕಳಿಗೆ ತಮಿಳುನಾಡು ಸರ್ಕಾರವು ಚಿನ್ನದುಂಗುರವನ್ನು ಉಡುಗೊರೆಯಾಗಿ ನೀಡಿದೆ. ಜಯಲಲಿತಾ ಅವರ ಹುಟ್ಟುಹಬ್ಬವನ್ನು ಸರ್ಕಾರದ ವತಿಯಿಂದಲೇ ಆಚರಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅಧಿವೇಶನದಲ್ಲಿ ಹೇಳಿದ್ದರು.
ಅಲ್ಲದೆ, ಜಯಲಲಿತಾ ಅವರ ಜನ್ಮದಿನವನ್ನು ಮಹಿಳಾ ಮತ್ತು ಮಕ್ಕಳ ಸುರಕ್ಷತಾ ದಿನ ಎಂದು ಘೋಷಿಸುವುದಾಗಿಯೂ ಹೇಳಿದ್ದರು. ಅದರಂತೆ ಇನ್ನು ಪ್ರತಿವರ್ಷವೂ ಫೆ. 24ನ್ನು ಸರ್ಕಾರಿ ದಿನವನ್ನಾಗಿ ಆಚರಿಸಲಾಗುತ್ತದೆ.

ಅಂತೆಯೇ ಜಯಲಲಿತಾ ಅವರ ಹುಟ್ಟುಹಬ್ಬವನ್ನು ಸೋಮವಾರ ಆಚರಿಸಲಾಯಿತು. ತಮಿಳುನಾಡಿನ ರಾಯಪುರಂನಲ್ಲಿರುವ ಆರ್ಎಸ್ಆರ್ಎಂ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಹುಟ್ಟಿದ ಮಕ್ಕಳಿಗೆ ಸಚಿವ ಡಿ. ಜಯಕುಮಾರ್ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಜಯಲಲಿತಾ ಅವರ ಹೆಸರಿನಲ್ಲಿ ಅನೇಕ ಯೋಜನೆಗಳನ್ನು ಕೂಡ ತಮಿಳುನಾಡು ಸರ್ಕಾರ ಘೋಷಿಸಿದೆ. ಮುಂದಿನ ವರ್ಷಗಳಲ್ಲೂ ಫೆ. 24ರಂದು ಜಯಲಲಿತಾ ಹುಟ್ಟುಹಬ್ಬದ ಪ್ರಯುಕ್ತ ಅಂದು ಜನಿಸಿದ ಮಕ್ಕಳಿಗೆ ಚಿನ್ನದ ಉಂಗುರಗಳನ್ನು ನೀಡುವುದಾಗಿ ಸರ್ಕಾರ ಘೋಷಿಸಿದೆ.
ಜಯಲಲಿತಾ ಸ್ಮರಣಾರ್ಥ ಎಐಎಡಿಎಂಕೆ ಪಕ್ಷ ಬಡವರಿಗೆ ನೆರವು ನೀಡಲು ಮತ್ತು ವೈದ್ಯಕೀಯ ಶಿಬಿರ ನಡೆಸಲು ಕಾರ್ಯಕರ್ತರಿಗೆ ಸೂಚನೆ ನೀಡಿತ್ತು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications