ಜಯಲಲಿತಾ ಕ್ಷೇತ್ರದ ಮರುಚುನಾವಣೆ ಏ. 12ಕ್ಕೆ
ಕಳೆದ ವರ್ಷ ಡಿಸೆಂಬರ್ ನಲ್ಲಿ ಎಐಎಡಿಎಂಕೆ ಪಕ್ಷದ ನಾಯಕಿಯ ನಿಧನದಿಂದ ತೆರವಾಗಿದ್ದ ವಿಧಾನ ಸಭೆ ಕ್ಷೇತ್ರ; ನಿಯಮಗಳ ಪ್ರಕಾರ ಮರು ಚುನಾವಣೆ.
ಚೆನ್ನೈ, ಮಾರ್ಚ್ 9: ಎಐಎಡಿಎಂಕೆ ಪಕ್ಷದ ನಾಯಕಿ ಜಯಲಲಿತಾ ಅವರ ನಿಧನದಿಂದ ತೆರವಾಗಿದ್ದ ಚೆನ್ನೈನ ಉತ್ತರ ಭಾಗದಲ್ಲಿರುವ ಕೆ.ಆರ್. ನಗರ ವಿಧಾನ ಸಭೆ ಕ್ಷೇತ್ರದ ಉಪ ಚುನಾವಣೆ ಏಪ್ರಿಲ್ 16ರಂದು ನಡೆಯಲಿದೆ.
2016ರಲ್ಲಿ ನಡೆದಿದ್ದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಜಯಲಲಿತಾ ಅವರು ಈ ಕ್ಷೇತ್ರದಿಂದಲೇ ಸ್ಪರ್ಧಿಸಿ ವಿಜಯಿಯಾಗಿದ್ದರು.[ಜಯಾ ಸಾವಿನ ಬಗ್ಗೆ ತಮಿಳುನಾಡು ಸರಕಾರ ಸುಳ್ಳು ಹೇಳಿದೆಯಾ?]

ಇದೇ ತಿಂಗಳ 16ರಿಂದ (ಮಾ. 16) ಚುನಾವಣಾ ಅಭ್ಯರ್ಥಿಗಳ ನಾಮಪತ್ರಗಳ ಸ್ವೀಕಾರ ಪ್ರಕ್ರಿಯೆ ಆರಂಭವಾಗಲಿದ್ದು, ಮಾ. 23ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ.[ತಿರುವಾಂಕೂರು ಶ್ರೀಗಳೊಂದಿಗೆ ಮಾತನಾಡಿತಂತೆ ಜಯಲಲಿತಾ ಆತ್ಮ!]
ಮಾ. 24ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುತ್ತದೆ ಹಾಗೂ ನಾಮಪತ್ರಗಳನ್ನು ಹಿಂಪಡೆಯಲು ಮಾ. 23ರವರೆಗೆ ಸಮಯಾವಕಾಶವಿರುತ್ತದೆ.[ಜಯಲಲಿತಾ ಸಾವಿನ ರಹಸ್ಯ, ಪಾಂಡಿಯನ್ ಬಿಚ್ಚಿಟ್ಟ ಸ್ಫೋಟಕ ಮಾಹಿತಿ]
ಏಪ್ರಿಲ್ 12ರಂದು ಈ ಕ್ಷೇತದಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್ 17ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.












Click it and Unblock the Notifications