LIVE : ಕಡೆಗೂ ಕು. ಜಯಲಲಿತಾ ಸಾವಿಗೆ ಶರಣು
ಜಯಲಲಿತಾ ಅವರ ಆರೋಗ್ಯಸ್ಥಿತಿ ಗಂಭೀರವಾಗಿರುವುದರಿಂದ ಇಡೀ ತಮಿಳುನಾಡೇ ಸ್ಥಬ್ಧಗೊಂಡಿದೆ, ಅಘೋಷಿತ ಬಂದ್ ಹೇರಿದಂತಾಗಿದೆ. ಜಯಾ ಅವರ ಅಭಿಮಾನಿಗಳು ಮಾತ್ರವಲ್ಲ ಚಿಕಿತ್ಸೆ ನೀಡುತ್ತಿರುವ ತಜ್ಞ ವೈದ್ಯರು ಕೂಡ ದೇವರ ಮೊರೆ ಹೋಗಿದ್ದಾರೆ.
ಬೆಂಗಳೂರು, ಡಿಸೆಂಬರ್ 05 : ಸಾವು ಬದುಕಿನ ನಡುವೆ ಹೋರಾಟ ನಡೆಸಿ ತಮಿಳುನಾಡಿನ ಪುರಚ್ಚಿ ತಲೈವಿ ಅವರು ಡಿಸೆಂಬರ್ 5, ಸೋಮವಾರದಂದು 11.30ಕ್ಕೆ ಅಂತಿಮವಾಗಿ ಸಾವಿಗೆ ಶರಣಾಗಿದ್ದಾರೆ. ಮಂಗಳವಾರ ಅಂತಿಮ ಸಂಸ್ಕಾರ ನೆರವೇರಲಿದೆ.
ಹಿಂದಿನ ಸುದ್ದಿ : ಎಪ್ಪತ್ತೆರಡು ದಿನಗಳಿಂದ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡಿನ ಜನಪ್ರಿಯ ಮುಖ್ಯಮಂತ್ರಿ ಕುಮಾರಿ ಜೆ ಜಯಲಲಿತಾ (68) ಅವರಿಗೆ ಭಾನುವಾರ ಹೃದಯ ಸ್ಥಂಭನ ಸಂಭವಿಸಿರುವ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ತಾಜಾ ಸುದ್ದಿಸಂಗ್ರಹ ಇಲ್ಲಿದೆ.
ಜಯಲಲಿತಾ ಅವರ ಆರೋಗ್ಯಸ್ಥಿತಿ ಗಂಭೀರವಾಗಿರುವುದರಿಂದ ಇಡೀ ತಮಿಳುನಾಡೇ ಸ್ಥಬ್ಧಗೊಂಡಿದೆ, ಅಘೋಷಿತ ಬಂದ್ ಹೇರಿದಂತಾಗಿದೆ. ಜಯಾ ಅವರ ಅಭಿಮಾನಿಗಳು ಮಾತ್ರವಲ್ಲ ಚಿಕಿತ್ಸೆ ನೀಡುತ್ತಿರುವ ತಜ್ಞ ವೈದ್ಯರು ಕೂಡ ದೇವರ ಮೊರೆ ಹೋಗಿದ್ದಾರೆ. ಇದರಿಂದಾಗಿ ಸಹಜವಾಗಿ ಕರ್ನಾಟಕದ ಮೇಲೆಯೂ ಪರಿಣಾಮ ಬೀರಿದೆ. [ಜಯಾಗೆ ಆಗಿದ್ದು ಹೃದಯಾಘಾತವಲ್ಲ, ಹೃದಯ ಸ್ಥಂಭನ]

* ಜಯಲಲಿತಾ ಅಸುನೀಗಿದರು ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಸುದ್ದಿವಾಹಿನಿಗಳಲ್ಲಿ ಹಬ್ಬಿತ್ತು. ಎಐಎಡಿಎಂಕೆ ಕಚೇರಿಯ ಧ್ವಜವನ್ನು ಅರ್ಧಕ್ಕೆ ಇಳಿಸಲಾಗಿತ್ತು. ಆದರೆ, ಇದು ಗಾಳಿಸುದ್ದಿ, ಜಯಾ ಇನ್ನೂ ಬದುಕಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಪ್ರಕಟಣೆ ನೀಡಿದೆ.
* ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಆದರೆ, ಜಯಲಲಿತಾ ಅವರನ್ನು ಉಳಿಸಿಕೊಳ್ಳಲು ಸರ್ವರೀತಿಯ ಪ್ರಯತ್ನ ಮಾಡಲಾಗುತ್ತಿದೆ : ಲಂಡನ್ ವೈದ್ಯ ಡಾ. ರಿಚರ್ಡ್ ಬೇಲಿ. ದೇವರು ಕೂಡ ಕೈಚೆಲ್ಲಿದ್ದಾನೆ ಎಂಬಂಥ ಭಾವ!
* ಮೊದಲ ಹಂತದ ಶಸ್ತ್ರಚಿಕಿತ್ಸೆಯ ನಂತರ ಜಯಾ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಇಲ್ಲ. ಮತ್ತೊಂದು ಶಸ್ತ್ರಚಿಕಿತ್ಸೆ ಮಾಡುವುದು ಬಲು ಕಷ್ಟ ಅಂತಿದ್ದಾರೆ ದೆಹಲಿಯಿಂದ ಬಂದಿರುವ ನುರಿತ ತಜ್ಞರು. ಡಾ. ರಿಚರ್ಡ್ ಬೇಲಿ ಕೂಡ ಇದೇ ಮಾತನ್ನು ಹಿಂದೆ ಹೇಳಿದ್ದರು.
* ಶಸ್ತ್ರಚಿಕಿತ್ಸೆಯ ನಂತರವೂ ಜಯಲಲಿತಾ ಅವರ ಆರೋಗ್ಯ ಸ್ಥಿತಿ ತೀರ ಕಳವಳಕಾರಿಯಾಗಿದೆ, ಎಕ್ಮೋ ಮತ್ತು ಇತರ ಜೀವರಕ್ಷಕ ಸಾಧನ ವ್ಯವಸ್ಥೆಯನ್ನು ಅವರಿಗೆ ಅಳವಡಿಸಲಾಗಿದೆ ಎಂದು ಅಪೋಲೋ ಆಸ್ಪತ್ರೆಯ ವಕ್ತಾರ ಹೇಳಿಕೆ ನೀಡಿದ್ದಾರೆ.
Despite our best efforts, our beloved CM remains in a grave situation: Sangita Reddy, Exec Director Apollo Group #jayalalithaa
— ANI (@ANI_news) December 5, 2016
* ಜಯಲಲಿತಾ ಅವರ ಆರೋಗ್ಯದ ಬಗ್ಗೆ ನಿಖರ ಮಾಹಿತಿಗಾಗಿ ಕೌತುಕ ಹೆಚ್ಚುತ್ತಲೇ ಇದೆ. ಹನ್ನೆರಡು ಗಂಟೆಗೆ ನೀಡಬೇಕಿದ್ದ ಅಧಿಕೃತ ಪ್ರಕಟಣೆಯ ಸಮಯ ಈಗ ಸಂಜೆ 5 ಗಂಟೆಗೆ ನಿಗದಿಯಾಗಿದೆ.
* ಬೆಂಗಳೂರಿನಲ್ಲಿ ತಮಿಳರು ಹೆಚ್ಚು ವಾಸವಿರುವ ಬಡಾವಣೆಗಳಲ್ಲಿ ಹೆಚ್ಚಿದ ಪೊಲೀಸ್ ಬಂದೋಬಸ್ತ್. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿರುವುದಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ (ಬೆಂಗಳೂರು ಪಶ್ಚಿಮ) ಚರಣ್ ರೆಡ್ಡಿ ಹೇಳಿದ್ದಾರೆ. [ಜಯಾಗೆ ಅನಾರೋಗ್ಯ: ಬೆಂಗಳೂರು 'ಸೇಫ್' ಎಂದ ಪೊಲೀಸರು]
ನಗರದಲ್ಲಿ ಪರಿಸ್ಥಿತಿಯು ಎಂದಿನಂತೆ ಸಹಜವಾಗಿದೆ. ಯಾವುದೇ ಆಧಾರರಹಿತ ವದಂತಿಗಳಿಗೆ ಸಾರ್ವಜನಿಕರಿಗೆ ಕಿವಿಗೊಡದಿರಲು ಮನವಿ.. https://t.co/FOEQMiT0dQ
— BengaluruCityPolice (@BlrCityPolice) December 5, 2016
* ಅಪೋಲೋ ಆಸ್ಪತ್ರೆಯಲ್ಲಿರುವ ಜಯಾ ಸ್ನೇಹಿತೆ ಶಶಿಕಲಾ ಜೊತೆ ಮಾತನಾಡಿದ ನಟ ರಜನಿಕಾಂತ್. ಜಯಲಲಿತಾ ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ಹೇಳಿಕೆ ನೀಡಿದ್ದಾರೆ.
* ತಮಿಳುನಾಡಿನ ಕಡಲೂರು ತಾಲೂಕಿನಲ್ಲಿ ಎಐಎಡಿಎಂಕೆ ಕಾರ್ಯಕರ್ತ ಸನ್ಯಾಸಿಪೇಟೈ ಗ್ರಾಮದ ನೀಲಕಂಠನ್ ಹೃದಯಾಘಾತದಿಂದ ಹಠಾತ್ ಸಾವು. ಟಿವಿಯಲ್ಲಿ ಜಯಲಲಿತಾ ಸುದ್ದಿ ನೋಡುತ್ತಿದ್ದಾಗಲೇ ಅವರಿಗೆ ಹೃದಯಾಘಾತವಾಗಿದೆ.
* ಸುರಕ್ಷತಾ ದೃಷ್ಟಿಯಿಂದ ಬೆಂಗಳೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. 250 ಹೊಯ್ಸಳ ವಾಹನಗಳು, 400 ಚೀತಾಸ್ ವಾಹನಗಳು, 25 ಪೊಲೀಸ್ ಪಡೆಗಳು ನಗರದಲ್ಲಿ ಗಸ್ತು ತಿರುಗುತ್ತಿವೆ.
* ತಮಿಳುನಾಡಿನಲ್ಲಿ ಖಾಸಗಿ ಶಾಲಾ ಕಾಲೇಜುಗಳು ರಜಾ ಘೋಷಿಸಿದ್ದರೆ, ಸರಕಾರಿ ಶಾಲಾ ಕಾಲೇಜುಗಳು, ಕಚೇರಿಗಳು, ಬ್ಯಾಂಕ್ ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ.
* ಜಯಾಗೆ ಏನಾಗಿದೆಯೇನೋ ಎಂಬ ಆತಂಕ ಅವರ ಅಭಿಮಾನಿಗಳನ್ನು ಕಾಡುತ್ತಿದೆ. ಇದಕ್ಕೆ ಉತ್ತರವಾಗಿ, ಮಧ್ಯಾಹ್ನ 12 ಗಂಟೆಗೆ ಅಧಿಕೃತ ಪ್ರಕಟಣೆಯನ್ನು ಅಪೋಲೋ ಆಸ್ಪತ್ರೆಯ ವೈದ್ಯರು ಹೊರಡಿಸಲಿದ್ದಾರೆ.
* ತಮಿಳುನಾಡಿಗೆ ಸಂಚರಿಸಬೇಕಿದ್ದ 75ಕ್ಕೂ ಹೆಚ್ಚು ಕರ್ನಾಟಕದ ವಾಹನಗಳನ್ನು ತಡೆಹಿಡಿಯಲಾಗಿದೆ. ಕರ್ನಾಟಕದೊಳಗೆ ಬರುತ್ತಿದ್ದ ವಾಹನಗಳನ್ನೂ ವಾಪಸ್ ಕಳುಹಿಸಲಾಗುತ್ತಿದೆ. [ತಮಿಳುನಾಡಿಗೆ ತೆರಳುವ ಕೆಎಸ್ ಆರ್ ಟಿಸಿ ಬಸ್ ಸೇವೆ ರದ್ದು]
* ಅಪೋಲೋ ಆಸ್ಪತ್ರೆಯೆದುರಿಗೆ ಸಹಸ್ರಾರು ಅಭಿಮಾನಿಗಳು ನೆರೆಯುತ್ತಿರುವುದರಿಂದ ಚೆನ್ನೈ ಪೊಲೀಸರು ಭಾರೀ ಮುನ್ನೆಚ್ಚರಿಕೆ ವಹಿಸಿದ್ದಾರೆ, ಭಾರೀ ಬಂದೋಬಸ್ತ್ ಮಾಡಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications