ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಸ್ಪತ್ರೆಯ CCTV ಆಫ್ ಆಗಿದ್ದೇಕೆ? ಜಯಲಲಿತಾ ಪ್ರಕರಣಕ್ಕೆ ಹೊಸ ತಿರುವು?!

|
Google Oneindia Kannada News

ಚೆನ್ನೈ, ಅಕ್ಟೋಬರ್ 06: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನ ಆಸ್ಪತ್ರೆಯ ಸಿಸಿಟಿವಿಗಳನ್ನು ಆಫ್ ಮಾಡುವಂತೆ ಪೊಲೀಸರೇ ಸೂಚಿಸಿದ್ದರು ಎಂದು ಅಪೋಲೋ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

ಈ ಮೂಲಕ ಜಯಲಲಿತಾ ನಿಧನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಂತಾಗಿದೆ. ಜಯಲಲಿತಾ ಅವರ ನಿಧನಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ನೇಮಿಸಲಾದ ಆರ್ಮುಗಸ್ವಾಮಿ ಆಯೋಗಕ್ಕೆ ಅಪೋಲೋ ಆಸ್ಪತ್ರೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಈ ಹೇಳಿಕೆ ದಾಖಲಾಗಿದೆ.

ಜಯಾ ಆಸ್ಪತ್ರೆಯಲ್ಲಿದ್ದಾಗ 75 ದಿನಗಳೂ ಸಿಸಿಟಿವಿ ಸ್ವಿಚ್ಡ್ ಆಫ್ ಆಗಿದ್ದೇಕೆ? ಜಯಾ ಆಸ್ಪತ್ರೆಯಲ್ಲಿದ್ದಾಗ 75 ದಿನಗಳೂ ಸಿಸಿಟಿವಿ ಸ್ವಿಚ್ಡ್ ಆಫ್ ಆಗಿದ್ದೇಕೆ?

ಆಸ್ಪತ್ರೆಯ ಆಡಳಿತ ಮಂಡಳಿ ನೀಡಿದ ಈ ಹೇಳಿಕೆ ಜಯಲಲಿತಾ ಸಾವಿನ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಅಪೋಲೋ ಆಸ್ಪತ್ರೆ ಸಲ್ಲಿಸಿದ ಅಫಿಡವಿಟ್ ನಲ್ಲೇನಿದೆ?

ಅಪೋಲೋ ಆಸ್ಪತ್ರೆ ಸಲ್ಲಿಸಿದ ಅಫಿಡವಿಟ್ ನಲ್ಲೇನಿದೆ?

ಐಜಿ(ಗುಪ್ತಚರ ವಿಭಾಗ) ಕೆ ಎನ್ ಸತಿಯಮೂರ್ತಿ ಸೇರಿದಂತೆ ನಾಲ್ವರು ಉನ್ನತ ಪೊಲೀಸ್ ಅಧಿಕಾರಿಗಳೇ ಸಿಸಿಟಿವಿ ಕ್ಯಾಮರಾವನ್ನು ಆಫ್ ಮಾಡುವಂತೆ ಮನವಿ ಮಾಡಿಕೊಂಡಿದ್ದರು ಎಂದು ಅಪೋಲೋ ಆಸ್ಪತ್ರೆಯ ವ್ಯವಸ್ಥಾಪಕ ಮಂಡಳಿ ಹೇಳಿದೆ. ಜಯಲಲಿತಾ ಅವರನ್ನು ಆಸ್ಪತ್ರೆಗೆ ಕರೆತರುವಾಗ ಸಿಸಿತಿವಿ ಕ್ಯಾಮರಾವನ್ನು ಆಫ್ ಮಾಡಲಾಗಿತ್ತು. ನಂತರ ಅವರನ್ನು ಚಿಕಿತ್ಸೆಯ ಕೊಠಡಿಗೆ ಕರೆದೊಯ್ದ ನಂತರ ಸಿಸಿಟಿವಿಯನ್ನು ಆನ್ ಮಾಡಲಾಯಿತು ಎಂದು ಅದು ಹೇಳಿದೆ.

'ಅಮ್ಮಾ' ಕೊನೆಯ ಕ್ಷಣದ ಬಗ್ಗೆ 'ಚಿನ್ನಮ್ಮ' ಬಿಚ್ಚಿಟ್ಟ ಸ್ಫೋಟಕ ಸತ್ಯ!'ಅಮ್ಮಾ' ಕೊನೆಯ ಕ್ಷಣದ ಬಗ್ಗೆ 'ಚಿನ್ನಮ್ಮ' ಬಿಚ್ಚಿಟ್ಟ ಸ್ಫೋಟಕ ಸತ್ಯ!

ಪ್ರಕರಣಕ್ಕೆ ಹೊಸ ತಿರುವು?

ಪ್ರಕರಣಕ್ಕೆ ಹೊಸ ತಿರುವು?

ಇಂದಿನ ತಂತ್ರಜ್ಞಾನದ ಯುಗದಲ್ಲಿ ಯಾವುದೇ ತನಿಖೆಯ ಸಂದರ್ಭಗಳಲ್ಲೂ ಸಿಸಿಟಿವಿ ಕ್ಯಾಮರಾಗಳು ಬಹಳ ಮಹತ್ವದ ಪಾತ್ರ ವಹಿಸುತ್ತವೆ. ಅಪೋಲೋದಂಥ ಮಲ್ಟಿಸ್ಪೆಷಾಲಲಿಟಿ ಆಸ್ಪತ್ರೆಗಳಲ್ಲೂ ಆಗಿನ ಮುಖ್ಯಮಂತ್ರಿಗಳು ದಾಖಲಾಗಿದ್ದ ಸಮಯದಲ್ಲಿ ಸಿಸಿಟಿವಿ ಕ್ಯಾಮರಾ ಕೆಲಸ ನಿರ್ವಹಿಸುತ್ತಿರಲಿಲ್ಲ ಎಂಬುದು ಅನುಮಾನ ಹುಟ್ಟಿಸಿತ್ತು. ಆದರೆ ಸಿಸಿಟಿವಿ ಕ್ಯಾಮರಾ ಕೆಟ್ಟಿರಲಿಲ್ಲ. ಆದರೆ ಅದನ್ನು ಉದ್ದೇಶಪೂರ್ವಕವಾಗಿಯೇ ಆಫ್ ಮಾಡಲಾಗಿತ್ತು ಎಂಬುದು ಅಪೋಲೋ ಆಸ್ಪತ್ರೆಯ ಹೇಳಿಕೆಯಿಂದ ಸಾಬೀತಾಗಿದೆ. ಅಲ್ಲದೆ ಈ ಸಿಸಿಟಿವಿಗಳನ್ನು ಸ್ವತಃ ಪೊಲೀಸರೇ ಆಫ್ ಮಾಡಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಬೆಚ್ಚಿಬೀಳಿಸಿದೆ.

ಜಯಲಲಿತಾ ಕೊನೆಯ ದಿನಗಳ ಬಗ್ಗೆ ಕಾರು ಡ್ರೈವರ್ ಬಿಚ್ಚಿಟ್ಟ ಸತ್ಯ ಜಯಲಲಿತಾ ಕೊನೆಯ ದಿನಗಳ ಬಗ್ಗೆ ಕಾರು ಡ್ರೈವರ್ ಬಿಚ್ಚಿಟ್ಟ ಸತ್ಯ

ವೀರ ಹನುಮಾನ್ ಧಾರಾವಾಹಿ ವೀಕ್ಷಿಸಿದ್ದರು ಅಮ್ಮ!

ವೀರ ಹನುಮಾನ್ ಧಾರಾವಾಹಿ ವೀಕ್ಷಿಸಿದ್ದರು ಅಮ್ಮ!

ಜಯಲಲಿತಾ ಅವರು ಸಾಯುವ ಕೆಲವು ಕ್ಷಣ ಮೊದಲು ಟಿವಿಯಲ್ಲಿ ವೀರ ಹನುಮಾನ್ ಧಾರಾವಾಹಿ ವೀಕ್ಷಿಸುತ್ತಿದ್ದರು ಎಂದು ಇತ್ತೀಚೆಗಷ್ಟೇ ಆರ್ಮುಗಂಸ್ವಾಮಿ ಆಯೋಗಕ್ಕೆ ನೀಡಿದ ಅಫಿಡವಿಟ್ ನಲ್ಲಿ ಜಯಲಲಿತಾ ಅವರ ಸ್ನೇಹಿತೆ ಶಶಿಕಲಾ ನಟರಾಜನ್ ಹೇಳಿಕೆ ನೀಡಿದ್ದರು. ತೀವ್ರ ಹೃದಯಾಘಾತದಿಂದ ಜಯಲಲಿತಾ ಅವರು ಮೃತರಾದರು ಎಂದು ಶಶಿಕಲಾ ಹೇಳಿದ್ದರು. ಆದರೆ 75 ದಿನಗಳ ಜಯಲಲಿತಾ ಅವರ ಆಸ್ಪತ್ರೆ ವಾಸದಲ್ಲಿ ಒಂದು ದಿನವೂ ಅವರ ಚಿತ್ರವನ್ನು ಆಅಸ್ಪತ್ರೆ ಬಿಡುಗಡೆ ಮಾಡಿರಲಿಲ್ಲ. ಅವರ ಆರೋಗ್ಯದ ಕುರಿತ ಮಾಹಿತಿಯನ್ನೂ ಬಹಿರಂಗ ಪಡಿಸಿರಲಿಲ್ಲ. ಅವರ ಆರೋಗ್ಯದ ಕುರಿತ ಮಾಹಿತಿಯನ್ನು ಗೌಪ್ಯವಾಗಿಯೇ ಇಡಲು ಆಸ್ಪತ್ರೆಯ ಮೇಲೂ ಒತ್ತಡವಿತ್ತು ಎಂಬುದು ಮೂಲಗಳಿಂದ ಸಿಕ್ಕ ಮಾಹಿತಿ.

'ಅಮ್ಮಾ' ಉಸಿರಾಡುವ ಸ್ಥಿತಿಯಲ್ಲಿರಲಿಲ್ಲ! ಜಯಾ ಸಾವು ಬಗೆದಷ್ಟೂ ನಿಗೂಢ!'ಅಮ್ಮಾ' ಉಸಿರಾಡುವ ಸ್ಥಿತಿಯಲ್ಲಿರಲಿಲ್ಲ! ಜಯಾ ಸಾವು ಬಗೆದಷ್ಟೂ ನಿಗೂಢ!

ನಿಗೂಢತೆಯನ್ನೇ ಉಳಿಸಿಹೋದ 'ಅಮ್ಮಾ' ಸಾವು!

ನಿಗೂಢತೆಯನ್ನೇ ಉಳಿಸಿಹೋದ 'ಅಮ್ಮಾ' ಸಾವು!

ಲಕ್ಷಾಂತರ ತಮಿಳರ ಪಾಲಿನ 'ಅಮ್ಮಾ' ಯಜಲಲಿತಾ ಅವರ ಸಾವು ನಿಗೂಢತೆಯನ್ನೇ ಉಳಿಸಿಹೋಗಿದೆ. ಡೆಸೆಂಬರ್ 5 ರಂದು ರಾತ್ರಿ ಕೊನೆಯುಸಿರೆಳೆದ ಅವರು ಅದಕ್ಕೂ ಮುನ್ನ ಎರಡೂವರೆ ತಿಂಗಳುಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದರು. ಅವರ ಮನೆಯಲ್ಲಿ ಅವರ ಮೇಲೆ ಹಲ್ಲೆ ನಡೆದಿತ್ತು, ಆದ್ದರಿಂದಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಯ್ತು, ಅವರಿಗೆ ಸ್ಲೋ ಪಾಯ್ಸನ್ ನೀಡಲಾಗುತ್ತಿತ್ತು ಎಂಬಿತ್ಯಾದ ಸಾಕಷ್ಟು ಅಂತೆಕಂತೆಗಳು ಅವರ ಸಾವಿನ ಸುತ್ತ ಸುತ್ತಿಕೊಂಡವು. ಅವರ ಆಪ್ತ ಸ್ನೇಹಿತೆ ಶಶಿಕಲಾ ಅವರ ಮೇಲೆ ಅನುಮಾನ ಹುಟ್ಟಿಕೊಂಡಿತ್ತು. ಆದರೆ ಇದುವರೆಗೂ ಜಯಲಲಿತಾ ಅವರ ಸಾವಿನ ಕುರಿತು ಸ್ಪಷ್ಟ ಮಾಹಿತಿ ನೀಡಬಲ್ಲ ಯಾವ ಸಾಕ್ಷ್ಯವೂ ಸಿಕ್ಕಿಲ್ಲ.

English summary
Apollo Hospital in Chennai on Saturday submitted a five-page affidavit in which it said that the management had been requested to keep CCVTs in the hospital off each time Jayalalithaa was taken out of her room.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X