ಮೇ.23ಕ್ಕೆ ಪುರಚ್ಚಿ ತಲೈವಿ ಜಯಾ ಮರು ಪಟ್ಟಾಭಿಷೇಕ
ಚೆನ್ನೈ, ಮೇ.20: ಅಕ್ರಮ ಆಸ್ತಿಗಳಿಕೆ ಪ್ರಕರಣದಿಂದ ಖುಲಾಸೆಗೊಂಡಿರುವ ತಮಿಳುನಾಡಿನ ಪುರಚ್ಚಿ ತಲೈವಿ ಎಐಎಡಿಎಂಕೆ ಮುಖ್ಯಸ್ಥೆ ಸೆಲ್ವಿ ಜಯಲಲಿತಾ ಅವರ ಮರು ಪಟ್ಟಾಭಿಷೇಕಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಲಭ್ಯ ಮಾಹಿತಿ ಪ್ರಕಾರ ಮೇ.23ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಿದೆ.
ಮೇ 22ರಂದು ಮುಖ್ಯಮಂತ್ರಿ ಓ ಪನ್ನೀರ್ ಸೇಲ್ವಂ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎಂದು ಎಐಎಡಿಎಂಕೆ ವಕ್ತಾರೆ ಸಿ.ಆರ್. ಸರಸ್ವತಿ ಅವರು ಹೇಳಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. [ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಟೈಮ್ ಲೈನ್]

ಮೇ. 22ರಂದು ಬೆಳಗ್ಗೆ 7 ಗಂಟೆಗೆ ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆ ನಡೆಸಲಾಗುತ್ತದೆ. ಜಯಲಲಿತಾ ಅವರನ್ನು ಶಾಸಕಾಂಗ ಪಕ್ಷದ ಮುಖಂಡರಾಗಿ ಆಯ್ಕೆ ಮಾಡಲಾಗುತ್ತದೆ. ಅಂದೇ ರಾಜ್ಯಪಾಲ ಕೆ.ರೋಶಯ್ಯ ಅವರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ಪನ್ನೀರ್ ಸೆಲ್ವಂ ಅವರು ರಾಜಿನಾಮೆ ನೀಡಲಿದ್ದಾರೆ ಎಂಬ ಸುದ್ದಿಯಿದೆ. [ಜಯಲಲಿತಾಗೆ ಜಾಮೀನು ಸಿಕ್ಕಿದ್ದೇಕೆ? ಆದೇಶ ಪ್ರತಿ ಓದಿ]
ಸುಮಾರು 19 ವರ್ಷಗಳ ಕಾನೂನು ಸಮರದ ಬಳಿಕ ಅಕ್ರಮ ಆಸ್ತಿ ಪ್ರಕರಣದಲ್ಲಿ 67 ವರ್ಷ ವಯಸ್ಸಿನ ಜಯಲಲಿತಾ ಮೇ.11, 2015ರಂದು ಶುಭ ಸುದ್ದಿ ಸಿಕ್ಕಿತ್ತು. [ಅನಿಶ್ಚಿತತೆಯಲ್ಲಿ ಜಯಾ ಪ್ರಮಾಣವಚನ?]
ಆಕ್ರಮ ಆಸ್ತಿ ಪ್ರಕರಣದಲ್ಲಿ ನಿರ್ದೋಷಿ ಎಂದು ಹೈಕೋರ್ಟ್ ಜಡ್ಜ್ ಸಿ.ಆರ್ ಕುಮಾರಸ್ವಾಮಿ ಅವರು ಎರಡು ಸಾಲಿನ ಆದೇಶ ನೀಡುತ್ತಿದ್ದಂತೆ ತಮಿಳುನಾಡಿನಲ್ಲಿ ಸಂಭ್ರಮ ಮನೆ ಮಾಡಿತ್ತು. ಇನ್ನು 10 ನಿಮಿಷದಲ್ಲೇ ಜಯಾ ಅಮ್ಮ ಸಿಎಂ ಆಗುತ್ತಾರೆ ಎಂದು ಜಯಾ ಪರ ವಕೀಲರು ಟಪ್ಪಾಂಗುಚ್ಚಿ ಡ್ಯಾನ್ಸ್ ಮಾಡಿದ್ದರು. ಅದರೆ, ಜ್ಯೋತಿಷಿಗಳ ಸಲಹೆ ಮೇರೆಗೆ ದಿನಶುದ್ಧಿ ಲೆಕ್ಕಾಚಾರ ಹಾಕಿ ಮೇ.23ರ ದಿನಾಂಕ ಫಿಕ್ಸ್ ಮಾಡಿದ್ದಾರಂತೆ. ಈ ಸುದ್ದಿಯನ್ನು ಕೇಳಿಸಿಕೊಳ್ಳಿ
(ಏಜೆನ್ಸೀಸ್)
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications