2 ಕೋಟಿ ಕಟ್ಟಿ ಐಟಿ ಕೇಸ್ ನಿಂದ ಜಯಾ ಮುಕ್ತ?
ಚೆನ್ನೈ, ಡಿ.1: ಸುಮಾರು 18 ವರ್ಷಗಳ ಹಿಂದಿನ ಆದಾಯ ತೆರಿಗೆ ಪ್ರಕರಣದಿಂದ ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರಿಗೆ ಮುಕ್ತಿ ಸಿಕ್ಕಿದೆ. ಬಾಕಿ ಉಳಿಸಿಕೊಂಡಿದ್ದ 1.99 ಕೋಟಿ ರು ಮೊತ್ತ ಪಾವತಿಸಿದ ನಂತರ ಕೇಸ್ ಹಿಂದಕ್ಕೆ ಪಡೆದುಕೊಳ್ಳಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಮತ್ತು ಅವರ ಗೆಳತಿ ಶಶಿಕಲಾ ಅವರ ಶಶಿ ಎಂಟರ್ಪ್ರೈಸೆಸ್ ಕಂಪೆನಿ ವಿರುದ್ಧ ವಿರುದ್ಧದ ಆದಾಯ ತೆರಿಗೆ ಕೇಸ್ ಕೇಸ್ ದಾಖಲಾಗಿತ್ತು. 1993-94 ಮತ್ತು 1996-97ರಲ್ಲಿ ಆದಾಯ ಕರ ಪಾವತಿಸದ ಕುರಿತು ನಾಲ್ಕು ಕೇಸ್ ದಾಖಲಾಗಿತ್ತು. [ಜೈಲು ಬಿಟ್ಟ ಜಯಾ, ನಿಟ್ಟುಸಿರು ಬಿಟ್ಟ ಬೆಂಗಳೂರು]
ಕಳೆದ ವಾರ ಆದಾಯ ಕರ ಇಲಾಖೆ ಕೇಂದ್ರ ಕಾನೂನು ಸಚಿವಾಲಯದ ಅಭಿಪ್ರಾಯ ಪಡೆದುಕೊಂಡು ಈ ಕೇಸ್ಗಳನ್ನು ಹಿಂದೆಗೆಯಲು ನಿರ್ಧರಿಸಿತ್ತು. ಇದಕ್ಕಾಗಿ 2 ಕೋ. ರೂ. ದಂಡ ವಸೂಲು ಮಾಡಿ ಹಿಂದೆಗೆದುಕೊಳ್ಳಲಾಗಿದೆ ಎಂದು ಆದಾಯ ಕರ ಇಲಾಖೆ ನ್ಯಾಯಾಲಯಕ್ಕೆ ತಿಳಿಸಿದೆ.

ಆರೋಪಿಗಳು ಬಾಕಿಯಿರುವ ತೆರಿಗೆ ಮೊತ್ತವನ್ನು ಬಡ್ಡಿ ಸಮೇತ ಪಾವತಿಸಲು ತಯಾರಾದರೆ ಕೇಸ್ ಹಿಂದೆಗೆದುಕೊಳ್ಳಲು ಅಡ್ಡಿಯಿಲ್ಲ ಎಂದು ಕಾನೂನು ಸಚಿವಾಲಯದ ತಿಳಿಸಿತ್ತು. ಅದರಂತೆ, ಜಯಲಲಿತಾ ಅವರು30,83,887 ಲಕ್ಷ ರು ಹಾಗೂ ಶಶಿಕಲಾ ಅವರು 28,07,972 ಲಕ್ಷ ರು ದಂಡ ಕಟ್ಟಿದ್ದಾರೆ. ವಾರ್ಷಿಕ ಐಟಿ ರಿಟರ್ನ್ಸ್ ಸಲ್ಲಿಸದ ಕಾರಣ ಇಬ್ಬರ ಮೇಲೆ ಪ್ರಕರಣ ದಾಖಲಾಗಿತ್ತು. ಒಟ್ಟಾರೆ ಶಶಿ ಎಂಟರ್ಪ್ರೈಸೆಸ್ ಕಂಪೆನಿ 1,99,90,000 ಹಣ ಪಾವತಿಸಿದೆ.
ಪ್ರಕರಣದ ವಿಚಾರಣೆಯನ್ನು ಜಡ್ಜ್ ಕಯಾಳ್ವಿಳಿ ಅವರು ಡಿ.11ಕ್ಕೆ ಮುಂದೂಡಿದ್ದಾರೆ.ಎಸಿಎಂಎಂ ನ್ಯಾಯಾಲಯದಲ್ಲಿ ಮುಂದಿನ ವಿಚಾರಣೆ ನಡೆಯಲಿದೆ. ಐಟಿ ರಿಟರ್ನ್ಸ್ ಸಲ್ಲಿಸದ ಜಯಲಲಿತಾ ಹಾಗೂ ಶಶಿಕಲಾ ವಿರುದ್ಧ ಐಟಿ ಇಲಾಖೆ ಕ್ರಿಮಿನಲ್ ಮೊಕದ್ದಮೆ ಹೂಡಿತ್ತು. ಇದನ್ನು ಪ್ರಶ್ನಿಸಿ ಜಯಾ ಅವರು ಹೈಕೋರ್ಟ್ ನಂತರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಜ.30 ರಂದು ವಿಚಾರಣೆಯನ್ನು ನಾಲ್ಕು ತಿಂಗಳಲ್ಲಿ ಮುಗಿಸುವಂತೆ ಕೆಳ ಹಂತದ ನ್ಯಾಯಾಲಯಕ್ಕೆ ಸುಪ್ರೀಂಕೋರ್ಟ್ ಆದೇಶಿಸಿತ್ತು. [ಜಯಲಲಿತಾಗೆ ಜಾಮೀನು ಸಿಕ್ಕಿದ್ದೇಕೆ? ಆದೇಶ ಪ್ರತಿ ಓದಿ]
ಹಲವು ಬಾರಿ ವಿಚಾರಣೆ ಮುಂದೂಡಿಕೆ ನಂತರ ಮತ್ತೆ ಕೇಸ್ ವಿಚಾರಣೆಗೆ ಬರುವಷ್ಟರಲ್ಲಿ ಅಕ್ರಮ ಆಸ್ತಿ ಪ್ರಕರಣದ ಅಪರಾಧಿಯಾಗಿ ಜಯಲಲಿತಾ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದರು. ಅ.18ರಂದು ಸುಪ್ರೀಂಕೋರ್ಟಿನಿಂದ ಜಾಮೀನು ಪಡೆದು ಚೆನ್ನೈಗೆ ಮರಳಿದರು. ಹೀಗಾಗಿ ಮೇಲ್ಕಂಡ ಪ್ರಕರಣ ಮುಂದೂಡಲ್ಪಟ್ಟು ಡಿ.1ಕ್ಕೆ ವಿಚಾರಣೆಗೆ ಬಂದಿತ್ತು. ಸೋಮವಾರ ಆರೋಪಿಗಳು ದಂಡ ಪಾವತಿಸಿದ ಹಿನ್ನೆಲೆಯಲ್ಲಿ ಐಟಿ ಇಲಾಖೆ ಕೇಸ್ ಹಿಂಪಡೆಯುವುದಾಗಿ ಕೋರ್ಟಿಗೆ ಹೇಳಿದ್ದಾರೆ.(ಪಿಟಿಐ)
-
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು?












Click it and Unblock the Notifications