ಜಯಲಲಿತಾ ಘೋಷಣೆ ಮಾಡಿದ ಆಸ್ತಿ ಎಷ್ಟು ಗೊತ್ತಾ?
ಚೆನ್ನೈ, ಜೂ. 06 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ನಿಂದ ಖುಲಾಸೆಗೊಂಡಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಒಟ್ಟು ಆಸ್ತಿ ಮೌಲ್ಯ 117.13 ಕೋಟಿ ರೂ.ಗಳು. ನಾಲ್ಕು ವರ್ಷಗಳಲ್ಲಿ ಜಯಲಿತಾ ಅವರ ಆಸ್ತಿ ದುಪ್ಪಟ್ಟಾಗಿದೆ.
ಆರ್.ಕೆ.ನಗರ ಕ್ಷೇತ್ರದಿಂದ ವಿಧಾನಸಸಭೆ ಉಪ ಚುನಾವಣೆಗೆ ಸ್ಪರ್ಧಿಸುತ್ತಿರುವ ಜಯಲಲಿತಾ ಅವರು ಶುಕ್ರವಾರ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಅವರು ತಮ್ಮ ಬಳಿ 117.13 ಕೋಟಿ ರೂ. ಆಸ್ತಿ ಇದೆ ಎಂದು ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ. [ಅಕ್ರಮ ಆಸ್ತಿಗಳಿಕೆ ಪ್ರಕರಣ Timeline]

2011ಕ್ಕೆ ಹೋಲಿಕೆ ಮಾಡಿದಾಗ ಜಯಲಲಿತಾ ಅವರ ಆಸ್ತಿ ದುಪ್ಪಟ್ಟಾಗಿದೆ. 2011ರ ಚುನಾವಣೆಯಲ್ಲಿ ಶ್ರೀರಂಗಂನಿಂದ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ತಮ್ಮ ಬಳಿ 51.40 ಕೋಟಿ ಆಸ್ತಿ ಇದೆ ಎಂದು ಪ್ರಮಾಣ ಪತ್ರ ಸಲ್ಲಿಸಿದ್ದರು. 2015ಕ್ಕೆ ಈ ಆಸ್ತಿ ಪ್ರಮಾಣ 117.13 ಕೋಟಿ ರೂ. ಆಗಿದೆ. [ಜಯಲಲಿತಾ ವಿರುದ್ಧ ಮೇಲ್ಮನವಿ ಸಲ್ಲಿಸಲು 7 ಕಾರಣಗಳು!]
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ.ಜಯಲಲಿತಾ ಅವರು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಮೇ 11ರಂದು ತೀರ್ಪು ನೀಡಿದ್ದರು. ಮೇ.23ರಂದು ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಜೈಲು ಶಿಕ್ಷೆಯಾದಾಗ ಶಾಸಕ ಸ್ಥಾನಕ್ಕೆ ಜಯಲಲಿತಾ ಅವರು ರಾಜೀನಾಮೆ ನೀಡಿದ್ದರು. ಈಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆರು ತಿಂಗಳೊಳಗೆ ವಿಧಾನಸಭಾ ಕ್ಷೇತ್ರವೊಂದರಿಂದ ಅವರು ಶಾಸಕರಾಗಿ ಆಯ್ಕೆಯಾಗಬೇಕಾಗಿದೆ. ಅಮ್ಮನ ಕಟ್ಟಾ ಬೆಂಬಲಿಗ ಶಾಸಕ ಆರ್.ಕೆ.ನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಜಯಲಲಿತಾ ಅವರಿಗೆ ದಾರಿ ಮಾಡಿಕೊಟ್ಟಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications