ಜಯಾ ಸೋದರಸೊಸೆ ದೀಪಾ ರಾಜಕೀಯ ಪ್ರವೇಶ, ಒಪಿಎಸ್ ಗೆ ಬೆಂಬಲ!
ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಸೋದರಸೊಸೆ ದೀಪಾ ಜಯಕುಮಾರ್ ಅಧಿಕೃತವಾಗಿ ಮಂಗಳವಾರ ತಮ್ಮ ರಾಜಕೀಯ ಪ್ರವೇಶ ಖಾತ್ರಿಪಡಿಸಿದ್ದಾರೆ. ಒ ಪನ್ನೀರ್ ಸೆಲ್ವಂಗೆ ತಮ್ಮ ಬೆಂಬಲ ಸೂಚಿಸಿದ್ದಾರೆ
ಚೆನ್ನೈ, ಫೆಬ್ರವರಿ 14: ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರ ಸೋದರನ ಮಗಳು ದೀಪಾ ಜಯಕುಮಾರ್ ಮಂಗಳವಾರ ಅಧಿಕೃತವಾಗಿ ತಮ್ಮ ರಾಜಕೀಯ ಪ್ರವೇಶವನ್ನು ಘೋಷಿಸಿದರು. ಚೆನ್ನೈನ ಮರೀನಾ ಬೀಚ್ ನಲ್ಲಿರುವ ಜಯಲಲಿತಾ ಸಮಾಧಿ ಬಳಿ ಪನ್ನೀರ್ ಸೆಲ್ವಂ ಅವರನ್ನು ಭೇಟಿ ಮಾಡಿದ ನಂತರ, ಮಾಧ್ಯಮಗಳಿಗೆ ತಮ್ಮ ನಿಲುವು ತಿಳಿಸಿದರು.
ಇದು ನಿಮ್ಮ ಅಧಿಕೃತ ರಾಜಕೀಯ ಪ್ರವೇಶವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಪನ್ನೀರ್ ಸೆಲ್ವಂ ಮಂಗಳವಾರ ಮತ್ತೆ ಜಯಲಲಿತಾ ಸಮಾಧಿ ಬಳಿ ಕಾಣಿಸಿಕೊಂಡು ಕುತೂಹಲ ಹುಟ್ಟಿಸಿದರು. ದೀಪಾ ಅವರು ಪನ್ನೀರ್ ಸೆಲ್ವಂಗೆ ತಮ್ಮ ಬೆಂಬಲ ಎಂಬುದನ್ನು ತಿಳಿಸಿದರು.
ಅಕ್ರಮ ಆಸ್ತಿ ಪ್ರಕರಣದಲ್ಲಿ ಜಯಲಲಿತಾ, ಶಶಿಕಲಾ, ಇಳವರಸಿ, ಸುಧಾಕರನ್ ತಪ್ಪಿತಸ್ಥರು ಎಂಬ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದ ದಿನವೇ ದೀಪಾ ಜಯಕುಮಾರ್ ತಮ್ಮ ನಿರ್ಧಾರ ಘೋಷಿಸಿದ್ದಾರೆ. ಜಯಲಲಿತಾ ಅವರ ನಿಧನದ ನಂತರ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ದೀಪಾ ಸುಳಿವು ಕೊಟ್ಟಿದ್ದರು.[ಶಶಿ-ಜಯಾ ಒಡವೆ ಲೆಕ್ಕ ಹಾಕಲು ಕೋರ್ಟ್ ತೆಗೆದುಕೊಂಡಿದ್ದು ಮೂರು ದಿನ!]

ಜಯಲಲಿತಾ ಜನ್ಮದಿನವಾದ ಫೆಬ್ರವರಿ 24ರಂದು ತಮ್ಮ ನಿಲುವು ಪ್ರಕಟಿಸುವುದಾಗಿ ದೀಪಾ ತಿಳಿಸಿದ್ದರು. ಸದ್ಯದ ತಮಿಳುನಾಡು ರಾಜಕೀಯ ಪರಿಸ್ಥಿತಿ ಆಕೆಯು ನಿರ್ಧಾರ ಬದಲಿಸಿಕೊಳ್ಳುವಂತೆ ಮಾಡಿದೆ. ಜಯಲಲಿತಾ ಅವರ ಸೋದರಳಿಯ ದೀಪಕ್ ಶಶಿಕಲಾ ಬಣದ ಜೊತೆ ಗುರುತಿಸಿಕೊಂಡಿದ್ದಾರೆ. ಆದರೆ ದೀಪಾ ಅವರು ಪನ್ನೀರ್ ಸೆಲ್ವಂ ಬಣವನ್ನು ಆರಿಸಿಕೊಂಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications