ಶಶಿಕಲಾರ 'ಬೇನಾಮಿ' ಸರಕಾರಕ್ಕೆ ಪೋಯಸ್ ಬಂಗಲೆ ಮೇಲೆ ಯಾವ ಹಕ್ಕಿದೆ?: ದೀಪಾ
ಚೆನ್ನೈ, ಮೇ 26 : ಪೋಯಸ್ ಗಾರ್ಡನ್ ನಲ್ಲಿರುವ ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ ಜಯಲಲಿತಾರ ಮನೆ ನಾನು ಹಾಗೂ ಸೋದರ್ ದೀಪಕ್ ಗೆ ಸೇರಿದ್ದು ಎಂದು ಜಯಾ ಸೋದರ ಸಂಬಂಧಿ ಹಾಗೂ ಎಂಜಿಆರ್ ಅಮ್ಮ ದೀಪಾ ಪೆರವೈನ ನಾಯಕಿ ದೀಪಾ ಜಯಕುಮಾರ್ ಶುಕ್ರವಾರ ಹೇಳಿದ್ದಾರೆ.
ಇದೇ ವೇಳೆ ಪೋಯಸ್ ಗಾರ್ಡನ್ ಮನೆಯನ್ನು ಸ್ಮಾರಕವಾಗಿ ಮಾಡುವ ಬಗ್ಗೆ ಎಐಎಡಿಎಂಕೆ ಎರಡೂ ಬಣದ ಯೋಜನೆಗಳು ಏನಿವೆ ಎಂದು ಕೂಡ ಪ್ರಶ್ನಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ದೀಪಾ, ಬಂಗಲೆಯನ್ನು ಸ್ಮಾರಕ ಮಾಡುವ ಹಿಂದೆ ಜಯಲಲಿತಾ ಅವರ ರಕ್ತ ಸಂಬಂಧಿಗಳಾದ ನಮ್ಮಿಬ್ಬರ ವಿರುದ್ಧ ದ್ವೇಷ ತೀರಿಸಿಕೊಳ್ಳುವ ಹುನ್ನಾರ ಇದೆ ಎಂದಿದ್ದಾರೆ.[ಪೋಯಸ್ ಗಾರ್ಡನ್ ಬಂಗಲೆಗಾಗಿ ಶುರುವಾಯಿತು ಮಹಾಕದನ!]

ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವುದಕ್ಕೆ ಇಂಥ ಯೋಜನೆ ಮಾಡಿದ್ದಾರೆ ಎಂದು ಆರೋಪಿಸಿರುವ ದೀಪಾ, ಆಕೆಯ ಎಲ್ಲ ಆಸ್ತಿಗಳ ಕಾನೂನುಬದ್ಧ ವಾರಸುದಾರರು ನಾನು ಹಾಗೂ ದೀಪಕ್. ಆ ಬಂಗಲೆಯನ್ನು ನಮ್ಮ ಒಪ್ಪಿಗೆ ಇಲ್ಲದೆ ಸ್ಮಾರಕವಾಗಿ ಮಾಡುವುದು ಕಾನೂನಾತ್ಮಕವಾಗಿ ಹಾಗೂ ನೈತಿಕವಾಗಿ ತಪ್ಪು ಎಂದಿದ್ದಾರೆ.[]
ಶಶಿಕಲಾರ 'ಬೇನಾಮಿ' ಆಗಿರುವ ಈ ಸರಕಾರಕ್ಕೆ ಇಂಥ ನಿರ್ಧಾರ ತೆಗೆದುಕೊಳ್ಳುವ ಯಾವ ಹಕ್ಕಿದೆ? ಶಶಿಕಲಾ ನಾಟಕ ಮಾಡಿದರೆ ನಾನು ಕಾನೂನು ಕ್ರಮ ತೆಗೆದುಕೊಳ್ಳಲು ಸಿದ್ಧಳಾಗಿದ್ದೇನೆ. ಜಯಲಲಿತಾ ಅವರಿಗಾಗಿ ಮತ ಹಾಕಿದ್ದಾರೆ. ಜನರಿಗಾಗಿ ಕೆಲಸ ಮಾಡಿ ಎಂದು ಈ ಬೇನಾಮಿ ಸರಕಾರಕ್ಕೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications