ಪಟಾಕಿ ಸಿಡಿಸಿ ಕೊಲ್ಲಲು ಯತ್ನ: ಸಚಿವನ ಗಂಭೀರ ಆರೋಪ
ಚೆನ್ನೈ, ಮಾರ್ಚ್ 22: ತಮ್ಮ ಕಾರಿನ ಮುಂಭಾಗದಲ್ಲಿ ಪಟಾಕಿ ಸಿಡಿಸುವ ಮೂಲಕ ಎಎಂಎಂಕೆ ಕಾರ್ಯಕರ್ತರು ತಮ್ಮನ್ನು ಕೊಲೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ತಮಿಳುನಾಡಿನ ಮಾಹಿತಿ ಮತ್ತು ಪ್ರಸಾರ ಸಚಿವ ಕಡಂಬೂರ್ ರಾಜು ಆರೋಪಿಸಿದ್ದಾರೆ.
ಕಡಂಬೂರ್ ರಾಜು ಅವರು ಕೋವಿಲ್ಪಟ್ಟಿಯಲ್ಲಿ ಭಾನುವಾರ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಆಗ ಎಎಂಎಂಕೆ ಕಾರ್ಯಕರ್ತರು ಅವರ ವಾಹನದ ಮುಂಭಾಗದಲ್ಲಿ ಪಟಾಕಿ ಸರ ಹೊತ್ತಿಸಿದ್ದಾರೆ. ಇದರಿಂದ ಹಲವು ನಿಮಿಷಗಳವರೆಗೆ ಸತತವಾಗಿ ಪಟಾಕಿ ಸಿಡಿದಿದೆ. ಪಟಾಕಿಗಳ ರಾಶಿಯಿಂದಾಗಿ ತಮ್ಮ ವಾಹನಕ್ಕೆ ಬೆಂಕಿ ತಗುಲುವ ಸಾಧ್ಯತೆ ಇತ್ತು. ತಾವು ಸ್ವಲ್ಪದರಲ್ಲಿಯೇ ಅಪಾಯದಿಂದ ಪಾರಾಗಿರುವುದಾಗಿ ಅವರು ತಿಳಿಸಿದ್ದಾರೆ.
'ಯಾವುದೇ ಅನಗತ್ಯ ವಿವಾದಗಳು ಎದುರಾಗುವುದನ್ನು ತಡೆಯಲು ನಾನು ಒಬ್ಬಂಟಿಯಾಗಿ ನನ್ನ ಕಾರಿನಲ್ಲಿ ಪ್ರಚಾರಕ್ಕಾಗಿ ತೆರಳುತ್ತಿದ್ದೆ. ಒಂದು ಕಡೆ ಎಎಂಎಂಕೆ ಕಾರ್ಯಕರ್ತರು ತಮ್ಮ ಕಾರುಗಳ ಮೂಲಕ ನನ್ನ ಕಾರನ್ನು ಅಡ್ಡಗಟ್ಟಿದರು. ಬಳಿಕ ಸುಮಾರು 5000 ಪಟಾಕಿಗಳಿರುವ ಸರಗಳನ್ನು ನನ್ನ ಕಾರಿನ ಪಕ್ಕದಲ್ಲಿಯೇ ಹೊಡೆದರು. ಅವರು ಎರಡು ನಿಮಿಷ ತಡೆದು ಬಳಿಕ ಪಟಾಕಿ ಹೊಡೆಯಬಹುದಾಗಿತ್ತು. ಆದರೆ ನಾನು ಅಲ್ಲಿ ಸಾಗುವಾಗಲೇ ಉದ್ದೇಶಪೂರ್ವಕವಾಗಿ ಪಟಾಕಿ ಸಿಡಿಸಿದರು. ನಾನು ಒಳಗೆ ಇರುವಂತೆಯೇ ನನ್ನ ಕಾರು ಬೆಂಕಿಗೆ ಆಹುತಿಯಾಗುವ ಅಪಾಯವಿತ್ತು. ನಾನು ಜೀವವನ್ನೇ ಕಳೆದುಕೊಳ್ಳುವಂತಾಗುತ್ತಿತ್ತು' ಎಂದು ಕಡಂಬೂರ್ ರಾಜು ಆರೋಪಿಸಿದ್ದಾರೆ.

ಈ ವಿಚಾರವಾಗಿ ಎಐಎಡಿಎಂಕೆ ಕೇಂದ್ರ ಕಾರ್ಯದರ್ಶಿಯು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಇದುವರೆಗೂ ಪೊಲೀಸರು ಯಾರನ್ನೂ ಬಂಧಿಸಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications