ಪಟಾಕಿ ಸಿಡಿಸಿ ಕೊಲ್ಲಲು ಯತ್ನ: ಸಚಿವನ ಗಂಭೀರ ಆರೋಪ
ಚೆನ್ನೈ, ಮಾರ್ಚ್ 22: ತಮ್ಮ ಕಾರಿನ ಮುಂಭಾಗದಲ್ಲಿ ಪಟಾಕಿ ಸಿಡಿಸುವ ಮೂಲಕ ಎಎಂಎಂಕೆ ಕಾರ್ಯಕರ್ತರು ತಮ್ಮನ್ನು ಕೊಲೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ತಮಿಳುನಾಡಿನ ಮಾಹಿತಿ ಮತ್ತು ಪ್ರಸಾರ ಸಚಿವ ಕಡಂಬೂರ್ ರಾಜು ಆರೋಪಿಸಿದ್ದಾರೆ.
ಕಡಂಬೂರ್ ರಾಜು ಅವರು ಕೋವಿಲ್ಪಟ್ಟಿಯಲ್ಲಿ ಭಾನುವಾರ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಆಗ ಎಎಂಎಂಕೆ ಕಾರ್ಯಕರ್ತರು ಅವರ ವಾಹನದ ಮುಂಭಾಗದಲ್ಲಿ ಪಟಾಕಿ ಸರ ಹೊತ್ತಿಸಿದ್ದಾರೆ. ಇದರಿಂದ ಹಲವು ನಿಮಿಷಗಳವರೆಗೆ ಸತತವಾಗಿ ಪಟಾಕಿ ಸಿಡಿದಿದೆ. ಪಟಾಕಿಗಳ ರಾಶಿಯಿಂದಾಗಿ ತಮ್ಮ ವಾಹನಕ್ಕೆ ಬೆಂಕಿ ತಗುಲುವ ಸಾಧ್ಯತೆ ಇತ್ತು. ತಾವು ಸ್ವಲ್ಪದರಲ್ಲಿಯೇ ಅಪಾಯದಿಂದ ಪಾರಾಗಿರುವುದಾಗಿ ಅವರು ತಿಳಿಸಿದ್ದಾರೆ.
'ಯಾವುದೇ ಅನಗತ್ಯ ವಿವಾದಗಳು ಎದುರಾಗುವುದನ್ನು ತಡೆಯಲು ನಾನು ಒಬ್ಬಂಟಿಯಾಗಿ ನನ್ನ ಕಾರಿನಲ್ಲಿ ಪ್ರಚಾರಕ್ಕಾಗಿ ತೆರಳುತ್ತಿದ್ದೆ. ಒಂದು ಕಡೆ ಎಎಂಎಂಕೆ ಕಾರ್ಯಕರ್ತರು ತಮ್ಮ ಕಾರುಗಳ ಮೂಲಕ ನನ್ನ ಕಾರನ್ನು ಅಡ್ಡಗಟ್ಟಿದರು. ಬಳಿಕ ಸುಮಾರು 5000 ಪಟಾಕಿಗಳಿರುವ ಸರಗಳನ್ನು ನನ್ನ ಕಾರಿನ ಪಕ್ಕದಲ್ಲಿಯೇ ಹೊಡೆದರು. ಅವರು ಎರಡು ನಿಮಿಷ ತಡೆದು ಬಳಿಕ ಪಟಾಕಿ ಹೊಡೆಯಬಹುದಾಗಿತ್ತು. ಆದರೆ ನಾನು ಅಲ್ಲಿ ಸಾಗುವಾಗಲೇ ಉದ್ದೇಶಪೂರ್ವಕವಾಗಿ ಪಟಾಕಿ ಸಿಡಿಸಿದರು. ನಾನು ಒಳಗೆ ಇರುವಂತೆಯೇ ನನ್ನ ಕಾರು ಬೆಂಕಿಗೆ ಆಹುತಿಯಾಗುವ ಅಪಾಯವಿತ್ತು. ನಾನು ಜೀವವನ್ನೇ ಕಳೆದುಕೊಳ್ಳುವಂತಾಗುತ್ತಿತ್ತು' ಎಂದು ಕಡಂಬೂರ್ ರಾಜು ಆರೋಪಿಸಿದ್ದಾರೆ.

ಈ ವಿಚಾರವಾಗಿ ಎಐಎಡಿಎಂಕೆ ಕೇಂದ್ರ ಕಾರ್ಯದರ್ಶಿಯು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಇದುವರೆಗೂ ಪೊಲೀಸರು ಯಾರನ್ನೂ ಬಂಧಿಸಿಲ್ಲ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications