ಎಐಎಡಿಎಂಕೆ ವಿರುದ್ಧ ಲಂಚದ ಪಟ್ಟಿ ಬಿಡುಗಡೆ ಮಾಡಿದ ಕಮಲ್ ಹಾಸನ್
ಚೆನ್ನೈ, ಡಿಸೆಂಬರ್ 28: ಮುಂದಿನ ತಮಿಳುನಾಡು ವಿಧಾನಸಭೆ ಚುನಾವಣೆಗೆ ಪ್ರಚಾರ ಕಾರ್ಯದಲ್ಲಿರುವ ಮಕ್ಕಳ್ ನೀತಿ ಮಯ್ಯಂ (ಎಂಎನ್ಎಂ) ಮುಖ್ಯಸ್ಥ, ನಟ ಕಮಲ ಹಾಸನ್ ಎಐಎಡಿಎಂಕೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ತಮಿಳುನಾಡು ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಲಂಚದ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಸೋಮವಾರ ಆಡಳಿತ ಸರ್ಕಾರದ ವಿರುದ್ಧ ಭ್ರಷ್ಟಾಚಾರದ "ರೇಟ್ ಕಾರ್ಟ್" ಬಿಡುಗಡೆಗೊಳಿಸಿದ ಅವರು, ಸರ್ಕಾರಿ ಕಚೇರಿಯಲ್ಲಿ ವಿವಿಧ ಸೇವೆಗಳಿಗೆ ಸಂಗ್ರಹಿಸಿದ ಲಂಚದ ಮಾಹಿತಿಯನ್ನು ಓದಿ ಹೇಳಿದರು. ತಮಿಳುನಾಡಿನಲ್ಲಿ ಲಂಚ ತೆಗೆದುಕೊಂಡ ನಂತರವಷ್ಟೇ ಎಲ್ಲಾ ಕೆಲಸಗಳು ನಡೆಯುವುದು ಎಂದು ಆರೋಪಿಸಿದರು.
ಜನನ ಪತ್ರದಿಂದ ಹಿಡಿದು ಮರಣ ಪತ್ರ ಪಡೆಯುವವರೆಗೂ ತಮಿಳುನಾಡಿನಲ್ಲಿ ಲಂಚ ನೀಡಬೇಕಾಗುತ್ತದೆ. ಯಾವುದೇ ಕೆಲಸ ಆಗಬೇಕೆಂದರೂ ಎಲ್ಲರಿಗೂ ಲಂಚ ಕೊಡುವ ಒತ್ತಾಯ ಕೇಳಿಬಂದಿದೆ ಎಂದರು. ಜನರೇ ಈ ವಿಷಯವನ್ನು ರಾಜ್ಯಪಾಲರವರೆಗೆ ಕೊಂಡೊಯ್ಯಬೇಕು ಎಂದು ಹೇಳಿದರು. ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಸರ್ಕಾರದ ಪ್ರತಿ ಕಾರ್ಯವನ್ನೂ ಡಿಜಿಟಲೈಸ್ ಹಾಗೂ ಕಾಗದರಹಿತ ಮಾಡಿ ಈ ಪರಿಸ್ಥಿತಿಯನ್ನು ಬದಲಾಯಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭ, ರಜನಿಕಾಂತ್ ಅವರ ಪಕ್ಷದೊಂದಿಗೆ ಮೈತ್ರಿ ಸಾಧ್ಯತೆ ಕುರಿತು ಪ್ರತಿಕ್ರಿಯಿಸಿದ ಕಮಲ ಹಾಸನ್, "ರಾಜಕೀಯ ಪ್ರವೇಶಿಸಿದ ನಂತರವೂ ನಾವು ಸ್ನೇಹಿತರಾಗಿ ಮುಂದುವರೆಯುತ್ತೇವೆ" ಎಂದಿದ್ದಾರೆ. ದೆಹಲಿಯಲ್ಲಿ ರೈತರ ನಿರಂತರ ಪ್ರತಿಭಟನೆ ಕುರಿತೂ ಮಾತನಾಡಿ, ರೈತರನ್ನು ಗೌರವಿಸದ ಸರ್ಕಾರ ಬೀಳುವುದು ಖಚಿತ ಎಂದು ಹೇಳಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications