ಲೋಕಸಭೆ ಚುನಾವಣೆಯಲ್ಲಿ ಯೂನಿವರ್ಸಲ್ ಸ್ಟಾರ್ ಸ್ಪರ್ಧೆಯಿಲ್ಲ
ಚೆನ್ನೈ, ಮಾರ್ಚ್ 25: ಅಭಿಮಾನಿಗಳ ಪಾಲಿನ 'ಯೂನಿವರ್ಸಲ್ ಸ್ಟಾರ್' ಕಮಲ್ ಹಾಸನ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಲೋಕಸಭೆ ಹಾಗೂ 18 ಕ್ಷೇತ್ರದ ವಿಧಾನಸಭೆ ಉಪ ಚುನಾವಣೆಗಾಗಿ ಕಮಲ್ ಅವರ ಮಕ್ಕಳ್ ನೀದಿ ಮಯ್ಯಂ(ಎಂಎನ್ಎಂ) ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ.
ಭಾನುವಾರ ರಾತ್ರಿ ನಡೆದ ಬೃಹತ್ ಸಮಾವೇಶದಲ್ಲಿ ಕಮಲ್ ಹಾಸನ್ ಅವರು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಿದರು. ಪ್ರತಿ ಕ್ಷೇತ್ರಕ್ಕೂ ಹೆಚ್ಚೆಚ್ಚು ಆಕಾಂಕ್ಷಿಗಳಿದ್ದರು ಹಾಗೂ ತಮಗಿಂತ ಹೆಚ್ಚಿನ ಅರ್ಹತೆಯುಳ್ಳ ಅನುಭವಿಗಳಿದ್ದರು ಹೀಗಾಗಿ, ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿಲ್ಲ ಎಂದರು.

ವರ್ಷದ ಹಿಂದೆ ಎಂಎನ್ಎಂ ಸ್ಥಾಪಿಸಿದ ಕಮಲ್ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಟ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯೇ ಪಕ್ಷದ ಮುಖ್ಯ ಉದ್ದೇಶ ಎಂದು ಘೋಷಿಸಿದ್ದರು.
#IndiaElects@ikamalhaasan not to contest Lok Sabha polls. Watch him in conversation with India Today's @Lokpria #ITVideo
— India Today (@IndiaToday) March 25, 2019
More videos: https://t.co/Nounxo6IKQ pic.twitter.com/UGDbagynyy
ಈ ಬಾರಿಯ ಲೋಕಸಭೆ ಚುನಾವಣೆ ಹಾಗೂ ವಿಧಾನಸಭಾ ಉಪ ಚುನಾವಣೆಗಾಗಿ ಅಡಳಿತಾರೂಢ ಎಐಎಡಿಎಂಕೆ ಹಾಗೂ ವಿಪಕ್ಷ ಡಿಎಂಕೆ ಜತೆಯಾಗಲಿ ಕಮಲ್ ಪಕ್ಷವು ಮೈತ್ರಿ ಮಾಡಿಕೊಂಡಿಲ್ಲ. ಪ್ರಧಾನಿ ಮೋದಿ ವಿರುದ್ಧ ಕಿಡಿಕಾರುತ್ತಾ ಬಂದಿರುವ ಕಮಲ್ ಅವರು ಬಿಜೆಪಿ ಜತೆ ಮೈತ್ರಿ ಎಂದಿಗೂ ಸಾಧ್ಯವಿಲ್ಲ ಎಂದು ಕಮಲ್ ಸ್ಪಷ್ಟಪಡಿಸಿದ್ದಾರೆ. (ಪಿಟಿಐ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications