"ಕಮಲ್ ಹಾಸನ್ 'ಸೂಪರ್ ನೋಟಾ'; ಒಂದೇ ಒಂದು ಸೀಟ್ ಕೂಡ ಗೆಲ್ಲಲ್ಲ"
ನವದೆಹಲಿ, ಏಪ್ರಿಲ್ 02: ನಟ, ಮಕ್ಕಳ ನೀದಿಮಯ್ಯಂ ಮುಖಂಡ ಕಮಲ್ ಹಾಸನ್ ಅವರನ್ನು "ಸೂಪರ್ ನೋಟಾ" ಎಂದು ಕರೆದಿರುವ ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ, ಕಮಲ್ ಹಾಸನ್ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಒಂದು ಸೀಟನ್ನೂ ಗೆಲ್ಲುವುದಿಲ್ಲ. ಅವರದ್ದು ಉಳಿದುಕೊಳ್ಳುವಂಥ ರಾಜಕೀಯ ಪಕ್ಷವಲ್ಲ ಎಂದು ಹೇಳಿದ್ದಾರೆ.
ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿ ಕುರಿತು ಮಾತನಾಡಿರುವ ಅವರು, ಬಿಜೆಪಿ ನೆರಳಿನಲ್ಲಿರುವ ಪಕ್ಷವನ್ನು ತಮಿಳುನಾಡು ಜನರು ಬಯಸುವುದಿಲ್ಲ. ಬಿಜೆಪಿಯ ಹಿಂದಿ ಹಿಂದುತ್ವ ಅಜೆಂಡಾ ಇಲ್ಲಿನ ಜನರಿಗೆ ಕಿರಿಕಿರಿ ತರುತ್ತದೆ ಎಂದು ಟೀಕಿಸಿದ್ದಾರೆ.

ಪಿಟಿಐ ಜೊತೆ ಸಂದರ್ಶನದಲ್ಲಿ ಮಾತನಾಡಿರುವ ಅವರು, "ತಮಿಳುನಾಡಿನಲ್ಲಿ 234 ಕ್ಷೇತ್ರಗಳಲ್ಲಿ 200 ಕ್ಷೇತ್ರಗಳಲ್ಲಿ ಡಿಎಂಕೆ ಗೆಲುವು ಸಾಧಿಸುತ್ತದೆ" ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
"ತಮಿಳರ ಭಾವನೆಗಳನ್ನು, ತಮಿಳು ಭಾಷೆಯನ್ನು ಹಾಗೂ ತಮಿಳು ಸಂಸ್ಕೃತಿಯನ್ನು ಗೌರವಿಸದ ಸರ್ಕಾರವನ್ನು ಜನರು ಬಯಸುವುದಿಲ್ಲ. ಬಿಜೆಪಿಯ ನೆರಳಲ್ಲಿರುವ ಯಾವುದೇ ಪಕ್ಷವನ್ನು ಜನರು ಒಪ್ಪಿಕೊಳ್ಳುವುದಿಲ್ಲ" ಎಂದು ಕಾರ್ತಿ ಚಿದಂಬರಂ ಟೀಕಿಸಿದ್ದಾರೆ. ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿಯವರು ಎಷ್ಟು ಸಲ ಬೇಕಾದರೂ ಬರಲಿ. ಆದರೆ ಹಿಂದಿ-ಹಿಂದುತ್ವ ನೀತಿಗಳನ್ನು ಜನರು ಒಪ್ಪಲು ತಯಾರಿಲ್ಲ ಎಂದಿದ್ದಾರೆ.
ಮಕ್ಕಳ ನೀದಿ ಮಯ್ಯಂ ಪಕ್ಷದ ಕುರಿತು ಮಾತನಾಡಿದ ಅವರು, "ಹಾಸನ್ ಅವರದ್ದು ಸೂಪರ್ ನೋಟಾ. ಅವರು ಒಂದು ಸೀಟನ್ನೂ ಗೆಲ್ಲುವುದಿಲ್ಲ. ಅದು ಉಳಿದುಕೊಳ್ಳುವಂಥ ಪಕ್ಷವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications