154 ಕ್ಷೇತ್ರಗಳಲ್ಲಿ ಕಮಲ ಹಾಸನ್ ಪಕ್ಷ ಸ್ಪರ್ಧೆ: 80 ಸೀಟುಗಳು ಮಿತ್ರಪಕ್ಷಗಳಿಗೆ
ಚೆನ್ನೈ, ಮಾರ್ಚ್ 9: ತಮಿಳುನಾಡು ವಿಧಾನಸಭೆ ಚುನಾವಣೆಯ 234 ಕ್ಷೇತ್ರಗಳ ಪೈಕಿ 154 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಮ್ ಪಕ್ಷ ಪ್ರಕಟಿಸಿದೆ. ಉಳಿದ 80 ಸೀಟುಗಳಲ್ಲಿ ಎಂಎನ್ಎಂನ ಮಿತ್ರ ಪಕ್ಷಗಳಾದ ಆಲ್ ಇಂಡಿಯಾ ಸಮತುವ ಮಕ್ಕಳ್ ಕಚ್ಚಿ ಮತ್ತು ಇಂಧಿಯಾ ಜನನಾಯಗ ಕಚ್ಚಿ ಪಕ್ಷಗಳು ತಲಾ 40 ಸೀಟುಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
ಈ ಸೀಟು ಹಂಚಿಕೆ ಒಪ್ಪಂದವನ್ನು ಎಂಕೆಎಂ ಸೋಮವಾರ ರಾತ್ರಿ ಪ್ರಕಟಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಶೇ 4ರಷ್ಟು ಮತಗಳನ್ನು ಎಂಎನ್ಎಂ ಪಡೆದುಕೊಂಡಿತ್ತು. ನಗರ ಪ್ರದೇಶಗಳಲ್ಲಿ ಶೇ 10ರಷ್ಟು ಮತಗಳನ್ನು ಗಳಿಸಿತ್ತು.
'ದೀರ್ಘಕಾಲದಿಂದ ಬಾಕಿ ಉಳಿದಿರುವ ಜನರ ಮಹತ್ವಾಕಾಂಕ್ಷೆಗಳನ್ನು ಈಡೇರಿಸಲು ತಮಿಳುನಾಡನ್ನು ಪರಿವರ್ತಿಸುವ ಸಾಮಾನ್ಯ ಗುರಿಗೆ ಈ ಮೂರೂ ಪಕ್ಷಗಳು ಬದ್ಧವಾಗಿವೆ. ತಮಿಳುನಾಡಿನ ಹೆಮ್ಮೆ ಮತ್ತು ವೈಭವವನ್ನು ಮರಳಿ ತರುವುದು ನಮ್ಮ ಸಾಮಾನ್ಯ ಕಾರ್ಯಸೂಚಿಯಾಗಿದೆ. ಹೀಗಾಗಿ ದೀರ್ಘಕಾಲ ಉಳಿಯುವ ಸಹ ಪ್ರಯಾಣವನ್ನು ಸಾಗಿಸಲು ನಿರ್ಧರಿಸಿವೆ' ಎಂದು ಪಕ್ಷ ತಿಳಿಸಿದೆ.

'ತಮಿಳರು ಮಾರಾಟಕ್ಕಿಲ್ಲ, ಅವರ ಮತಗಳು ಕೂಡ ಮಾರಾಟಕ್ಕಿಲ್ಲ' ಎಂದು ಕಳೆದ ವಾರ ಎಐಎಡಿಎಂಕೆ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಕಮಲ ಹಾಸನ್, ಭ್ರಷ್ಟಾಚಾರಮುಕ್ತ ಸರ್ಕಾರಕ್ಕಾಗಿ ತಮ್ಮ ಪಕ್ಷಕ್ಕೆ ಬಹುಮತ ನೀಡುವಂತೆ ಕೋರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications