ಅಬ್ದುಲ್ ಕಲಾಂ ನಿವಾಸದಿಂದ ರಾಜಕೀಯ ಯಾತ್ರೆ ಆರಂಭಿಸಿದ ಕಮಲ್
ಚೆನ್ನೈ, ಫೆಬ್ರವರಿ 21: ತಮ್ಮ ಮಹತ್ವಾಕಾಂಕ್ಷಿ ರಾಜಕೀಯ ಪಕ್ಷಕ್ಕೆ ತಮಿಳು ಸೂಪರ್ ಸ್ಟಾರ್ ಕಮಲ್ ಹಾಸನ್ ಇಂದು ಸಂಜೆ ಚಾಲನೆ ನೀಡಲಿದ್ದಾರೆ.
ಇದಕ್ಕೂ ಮೊದಲು ಇಂದು ಕಮಲ್ ಹಾಸನ್ ರಾಮನಾಥಪುರಂನಲ್ಲಿರುವ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ನಿವಾಸಕ್ಕೆ ಭೇಟಿ ನೀಡಿದರು.
ಕಲಾಂ ನಿವಾಸಕ್ಕೆ ಭೇಟಿ ನೀಡಿ ಅವರ ಸಹೋದರರನ್ನು ಭೇಟಿಯಾದ ನಂತರ ಪ್ರತಿಕ್ರಿಯೆ ನೀಡಿದ ಕಮಲ್, "ಮನೆಗಳ ಸರಳತೆಯಿಂದ ಮಹತ್ವ ಬರುತ್ತದೆ; ಈ ಮನೆ ಅಂಥಹ ಮನೆಗಳಲ್ಲಿ ಒಂದು. ಇದು ನನ್ನ ಮನಸ್ಸಿಗೆ ನಾಟಿತು," ಎಂದು ಹೇಳಿದ್ದಾರೆ.

ಅಬ್ದುಲ್ ಕಲಾಂ ವಿದ್ಯಾಭ್ಯಾಸ ನಡೆಸಿದ ಶಾಲೆಗೂ ಕಮಲ್ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಶಾಲೆಯನ್ನು ರಾಜಕಾರಣದಿಂದ ಹೊರಗಿಡಬೇಕು ಎಂದು ಹೇಳಿ ಕಮಲ್ ಭೇಟಿಯನ್ನು ಎಐಎಡಿಎಂಕೆ ವಿರೋಧಿಸಿದ್ದರಿಂದ ತಮಿಳು ನಟ ಶಾಲೆಗೆ ಭೇಟಿ ನೀಡಿಲ್ಲ.
ರಾಮನಾಥಪುರಂನಲ್ಲಿ ಇಂದು ಸಂಜೆ ಬೃಹತ್ ಸಮಾವೇಶವನ್ನು ಕಮಲ್ ಹಾಸನ್ ಹಮ್ಮಿಕೊಂಡಿದ್ದು ಇಲ್ಲಿ ತಮ್ಮ ಪಕ್ಷದ ಹೆಸರು ಘೋಷಣೆ ಮಾಡಲಿದ್ದಾರೆ. ಜತೆಗೆ ಪಕ್ಷದ ಧ್ವಜವನ್ನೂ ಅವರು ಬಿಡುಗಡೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಭಾಗವಹಿಸಲಿದ್ದಾರೆ ಎಂದು ಕಮಲ್ ಆಪ್ತ ಮೂಲಗಳು ಹೇಳಿವೆ.
ಭ್ರಷ್ಟಾಚಾರದ ವಿರುದ್ಧ ಹೋರಾಡಲು ಮತ್ತು ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಹಾಗೂ ಜನರ ಪರವಾಗಿ ಕೆಲಸ ಮಾಡಲು ತಾವು ರಾಜಕೀಯಕ್ಕೆ ಬರುತ್ತಿರುವುದಾಗಿ ಈಗಾಗಲೇ ಕಮಲ್ ಹಾಸನ್ ಘೋಷಿಸಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications