ತಮಿಳುನಾಡು ವಿಧಾನಸಭೆ ಚುನಾವಣೆ: ನಟ ಕಮಲ ಹಾಸನ್ ಸ್ಪರ್ಧೆ ಖಚಿತ
ಚೆನ್ನೈ, ನವೆಂಬರ್ 6: ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತಿರುವುದಾಗಿ ನಟ, ರಾಜಕಾರಣಿ ಕಮಲ ಹಾಸನ್ ಖಚಿತಪಡಿಸಿದ್ದಾರೆ. ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ) ಮುಖ್ಯಸ್ಥರಾಗಿರುವ ಕಮಲ್, ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
2021ರ ಮೇ ತಿಂಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಬೇಕಿದೆ. ನಟ ರಜನಿಕಾಂತ್ ಅವರೊಂದಿಗೆ ತಾವು ಸಂಪರ್ಕದಲ್ಲಿದ್ದು, ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಅರಿವಿದೆ ಎಂದು ಕಮಲ ಹಾಸನ್ ತಿಳಿಸಿದ್ದಾರೆ.
ಪ್ರಾಮಾಣಿಕತೆ ಮತ್ತು ಭ್ರಷ್ಟಾಚಾರ ಮುಕ್ತ ಸಮಾಜ ತಮ್ಮ ಪಕ್ಷದ ಪ್ರಣಾಳಿಕೆ. ಒಳ್ಳೆಯ ವ್ಯಕ್ತಿಗಳ ಜತೆಗೆ ಮಾತ್ರವೇ ತಮ್ಮ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ನಮ್ಮದು ಹಗೆತನದ ರಾಜಕೀಯವಲ್ಲ. ನಮ್ಮದು ಸೂಕ್ತ ಮಾರ್ಗದರ್ಶನ ಅಥವಾ ದಿಕ್ಕು ಹೊಂದಿರುವ ರಾಜಕಾರಣ. ನಾವು ಎಂದಿಗೂ 'ಬಿ ತಂಡ' ಆಗುವುದಿಲ್ಲ, ಎಂದಿಗೂ ಎ ತಂಡವಾಗಿರುತ್ತೇವೆ ಎಂದಿದ್ದಾರೆ.

2021ರ ವಿಧಾನಸಭೆ ಚುನಾವಣೆಯಲ್ಲಿ ಎಂಎನ್ಎಂ ಮೂರನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಕಾರ್ಯಕ್ಷೇತ್ರ, ಸಮೀಕ್ಷೆಗಳು ಮತ್ತು ಆಂತರಿಕ ವಿಶ್ಲೇಷಣೆಗಳ ಅಂದಾಜಿನಲ್ಲಿ ಇದನ್ನು ಗ್ರಹಿಸಲಾಗಿದೆ. ಇತ್ತೀಚೆಗೆ ಸುಮಾರು ಒಂದು ಲಕ್ಷ ಸದಸ್ಯರು ಎಂಎನ್ಎಂ ಸೇರಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
'ಮನುಸ್ಮೃತಿ' ಬಗ್ಗೆ ಕೇಳಲಾದ ಪ್ರಶ್ನೆಗೆ ಕಮಲ್, ಇದು ಈಗ ಚರ್ಚೆಯ ವಿಷಯವೇ ಅಲ್ಲ. ಸಂವಿಧಾನಕ್ಕೆ ಬೆದರಿಕೆಯೊಡ್ಡುವ ಸಂದರ್ಭಗಳು ಕಂಡಾಗ ನಾನು ಅದರ ವಿರುದ್ಧ ಧ್ವನಿ ಎತ್ತುತ್ತೇನೆ ಎಂದು ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications