ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಕಮಲ್
ಚೆನ್ನೈ, ಏಪ್ರಿಲ್ 24: ಯೂನಿವರ್ಸಲ್ ಸ್ಟಾರ್ ಕಮಲ್ ಹಾಸನ್ ಅವರು ತಮ್ಮ ಪಕ್ಷವು ಅಧಿಕೃತವಾಗಿ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿರುವುದಾಗಿ ಮಂಗಳವಾರದಂದು ಘೋಷಿಸಿದರು. ಕಮಲ್ ಅವರ ಮಕ್ಕಳ್ ನೀತಿ ಮಯ್ಯಂ ಪಕ್ಷವು ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.
ಚೆನ್ನೈನಲ್ಲಿ ನಡೆದ ಗ್ರಾಮ ಪಂಚಾಯಿತಿ ಸಭೆಯಲ್ಲಿಯಲ್ಲಿ ಈ ವಿಷಯವನ್ನು ಕಮಲ್ ಘೋಷಿಸಿದರು. ಭ್ರಷ್ಟಾಚಾರದ ವಿರುದ್ಧ ಹೋರಾಡಲು ಮತ್ತು ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಹಾಗೂ ಜನರ ಪರವಾಗಿ ಕೆಲಸ ಮಾಡಲು ತಾವು ರಾಜಕೀಯಕ್ಕೆ ಬಂದಿರುವುದಾಗಿ ಕಮಲ್ ಹಾಸನ್ ಅವರು ಮಕ್ಕಳ್ ನೀತಿ ಮಯ್ಯಂ ಪಕ್ಷ ಉದ್ಘಾಟನೆ ದಿನದಂದು ಹೇಳಿದ್ದರು.

2021ರ ವಿಧಾನಸಭೆ ಚುನಾವಣೆಯಲ್ಲೂ ಸ್ಪರ್ಧಿಸುವುದಾಗಿ ಈಗಾಗಲೇ ಹೇಳಿದ್ದಾರೆ. ಹೊಸ ತಮಿಳುನಾಡು ರಚಿಸಲು ನಾವಿಲ್ಲಿ ಬಂದಿದ್ದೇನೆ, ನಾನು ಕ್ಯಾಸ್ಟಿಂಗ್ ಕೋಚ್ ಬಗ್ಗೆ ಮಾತನಾಡಲಾರೆ. ಆದರೆ, ಪ್ರತಿ ಮಹಿಳೆಗೂ ತನ್ನದೆ ಆದ ಹಕ್ಕುಗಳಿವೆ, ಸ್ವಾತಂತ್ರ್ಯವಿದೆ ಎಂದರು.
We are going to contest in the upcoming local body elections: Kamal Haasan, Makkal Needhi Maiam at Maiam Gram Panchayat Meet in Chennai #TamilNadu pic.twitter.com/2YtbKvcZZo
— ANI (@ANI) April 24, 2018
ನಾನು ಸೋತರೆ ಸಿಡಿದೇಳುತ್ತೇನೆ. ನಾನು ನಿರ್ಧರಿಸಿದರೆ ನಾನೇ ಮುಖ್ಯಮಂತ್ರಿ. ಬನ್ನಿ, ಮೂರ್ಖರ ವಿರುದ್ಧ ಹೋರಾಡುವವನೇ ನಿಜವಾದ ನಾಯಕ'. ಎಂದು ಪಕ್ಷ ಆರಂಭಕ್ಕೂ ಮುನ್ನ ಕಮಲ್ ಅವರು ಟ್ವೀಟ್ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಮಧುರೈನಲ್ಲಿ ಫೆಬ್ರವರಿಯಲ್ಲಿ ಪಕ್ಷ ಉದ್ಘಾಟನೆ ಮಾಡಿದ ಬಳಿಕ ತಮಿಳುನಾಡು ಪ್ರವಾಸ ಮಾಡಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications