ಶಸ್ತ್ರಚಿಕಿತ್ಸೆಗೆ ಚುನಾವಣಾ ಪ್ರಚಾರದಿಂದ ಬಿಡುವು ಪಡೆದ ಕಮಲ ಹಾಸನ್
ಚೆನ್ನೈ, ಜನವರಿ 18: ವಿಧಾನಸಭೆ ಚುನಾವಣೆಗೆ ತಮಿಳುನಾಡು ಸಿದ್ಧವಾಗುತ್ತಿದ್ದು, ಚುನಾವಣಾ ಪ್ರಚಾರ ಕಾರ್ಯದಿಂದ ಸ್ವಲ್ಪ ದಿನಗಳ ಕಾಲ ಬಿಡುವು ತೆಗೆದುಕೊಳ್ಳುವುದಾಗಿ ನಟ, ಮಕ್ಕಳ ನೀದಿಮಯ್ಯಂ ಮುಖಂಡ ಕಮಲ್ ಹಾಸನ್ ತಿಳಿಸಿದ್ದಾರೆ.
ಕಾಲಿನ ಶಸ್ತ್ರಚಿಕಿತ್ಸೆ ಕಾರಣ ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದು, ತಂತ್ರಜ್ಞಾನದ ಸಹಾಯದಿಂದ ಚುನಾವಣಾ ಕೆಲಸಗಳನ್ನು ನಿರ್ವಹಿಸುತ್ತೇನೆ. ತಮಿಳುನಾಡಿನ ಬದಲಾವಣೆಗೆ ಏನೆಲ್ಲಾ ಬೇಕಿದೆಯೋ ಅದರ ಕುರಿತು ಚಿಂತನೆ ಮಾಡುತ್ತೇನೆ ಎಂದು ಸೋಮವಾರ ಟ್ವಿಟ್ಟರ್ ನಲ್ಲಿ ಘೋಷಣೆ ಮಾಡಿದ್ದಾರೆ.
"ಹದಿನೈದು ದಿನಗಳ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು ಐದು ಸಾವಿರ ಕಿಲೋಮೀಟರ್ ಗಳಷ್ಟು ಪ್ರಯಾಣ ಮಾಡಿ ಜನರನ್ನು ಭೇಟಿ ಮಾಡಿದ್ದೇನೆ. ಇಲ್ಲಿನ ಜನರು ಬದಲಾವಣೆ ಬಯಸುತ್ತಿದ್ದಾರೆ ಎಂಬುದೇ ಈ ಸಮಯದಲ್ಲಿ ನನಗೆ ತೀವ್ರವಾಗಿ ಅನಿಸಿದ್ದು. ಜನರನ್ನು ಭೇಟಿಯಾಗಬೇಕೆಂಬ ಹಂಬಲ ನನ್ನ ವೈಯಕ್ತಿಕ ಆರೋಗ್ಯವನ್ನು ಸ್ವಲ್ಪ ಸಮಯ ಕಡೆಗಣಿಸುವಂತೆ ಮಾಡಿತು" ಎಂದು ಹೇಳಿದ್ದಾರೆ.

ಕೆಲವು ವರ್ಷಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಕಾಲಿಗೆ ಗಾಯವಾಗಿದ್ದು, ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಅದರ ಮುಂದುವರಿದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿದೆ. ಶಸ್ತ್ರಚಿಕಿತ್ಸೆ ಸಲುವಾಗಿ ವೈದ್ಯರು ವಿರಾಮ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಕೆಲವೇ ದಿನಗಳಲ್ಲಿ ಮರಳಿ ಚುನಾವಣಾ ಕಾರ್ಯದಲ್ಲಿ ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ.
ತಮಿಳುನಾಡಿನ 2019ರ ಲೋಕಸಭಾ ಚುನಾವಣೆಯಲ್ಲಿ ಕಮಲ ಹಾಸನ್ ಅವರ ಮಕ್ಕಳ ನೀದಿಮಯ್ಯಂ ಪಕ್ಷ ಸ್ಪರ್ಧಿಸಿದ್ದು, 4,20,83,544 ರಲ್ಲಿ ಪಕ್ಷವು 15,73,620 ಮತಗಳನ್ನು ಪಡೆದುಕೊಂಡಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications