ಅಮೆರಿಕಾದಲ್ಲಿ ಕಮಲಾ ಹ್ಯಾರಿಸ್ ಉಪಾಧ್ಯಕ್ಷರಾದರೆ ಭಾರತದಲ್ಲಿ ಸಂಭ್ರಮ!
ಚೆನ್ನೈ, ನವೆಂಬರ್.08: ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದ ಉಪಾಧ್ಯಕ್ಷರಾಗಿ ಆಯ್ಕೆಯಾದ ಕಮಲಾ ಹ್ಯಾರಿಸ್ ಗೆಲುವಿನ ಸಂಭ್ರಮವು ಭಾರತದವರೆಗೂ ವ್ಯಾಪಿಸಿದೆ. ತಮಿಳುನಾಡಿನಲ್ಲಿ ಇರುವ ಕಮಲಾ ಹ್ಯಾರಿಸ್ ಅವರ ಪೂರ್ವಜರ ಗ್ರಾಮದಲ್ಲಿ ಗೆಲುವನ್ನು ವಿಶೇಷವಾಗಿ ಆಚರಿಸಲಾಗಿದೆ.
ತಮಿಳುನಾಡಿನ ತಿರುವಾರೂರ್ ಜಿಲ್ಲೆಯ ತುಳಸೇಂದ್ರಪುರಂ ಗ್ರಾಮದಲ್ಲಿ ಕಮಲ ಹ್ಯಾರಿಸ್ ಅವರ ಗೆಲುವಿನ ಸಂಭ್ರಮವಾಗಿ ವಿಶೇಷ ರಂಗೋಲಿಯನ್ನು ಚಿತ್ರಿಸಲಾಗಿತ್ತು. "ಕಮಲಾ ಹ್ಯಾರಿ ಅವರಿಗೆ ಶುಭಾಷಯಗಳು, ಅವರು ನಮ್ಮ ಗ್ರಾಮದ ಹೆಮ್ಮೆಯಾಗಿದ್ದು, ಅಮೆರಿಕನ್ನರಿಗೆ ವಂದನೆಗಳು" ಎಂದು ರಂಗೋಲಿಯಲ್ಲಿ ಬರೆಯಲಾಗಿದೆ.
ಅಮೆರಿಕಾದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಮಲಾ ಹ್ಯಾರಿಸ್ ಪೂರ್ವಜರು ಮೂಲತಃ ತಮಿಳುನಾಡಿನ ತುಳಲೇಂದ್ರಪುರಂ ಗ್ರಾಮದವರು ಎನ್ನಲಾಗಿದೆ. ಈ ಹಿನ್ನೆಲೆ ಗ್ರಾಮದಲ್ಲಿ ಕಮಲಾ ಹ್ಯಾರಿಸ್ ಅವರ ಗೆಲುವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ತುಳಸೇಂದ್ರಪುರಂನಲ್ಲಿ ಸಿಹಿ ಹಂಚಿಕೆ:
ಅಮೆರಿಕಾದಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಭಾರತೀಯ ಮೂಲದ ಮೊದಲ ಮಹಿಳೆ ಎಂಬ ಖ್ಯಾತಿಗೆ ಕಮಲಾ ಹ್ಯಾರಿಸ್ ಪಾತ್ರರಾಗಿದ್ದಾರೆ. ಹಲವು ದಾಖಲೆಗಳನ್ನು ರೂಪಿಸಿರುವ ಕಮಲಾ ಹ್ಯಾರಿಸ್ ಅವರ ಗ್ರಾಮದ ಹಲವೆಡೆ ಪೋಸ್ಟರ್ ಬ್ಯಾನರ್ ಗಳನ್ನು ಹಾಕಲಾಗಿದೆ. ಇದರ ಜೊತೆಗೆ ಗ್ರಾಮದಾದ್ಯಂತ ಜನರಿಗೆ ಸಿಹಿ ತಿಂಡಿಯನ್ನು ಹಂಚಿ ಸಂಭ್ರಮಿಸಲಾಗಿದೆ.
ಕಮಲಾ ಹ್ಯಾರಿಸ್ ತಂದೆ ಜಮೈಕಾದವರಾಗಿದ್ದರೆ, ತಾಯಿ ಶ್ಯಾಮಲಾ ಗೋಪಾಲನ್ ಭಾರತದ ತಮಿಳುನಾಡು ಮೂಲದವರಾಗಿದ್ದಾರೆ. ತಮಿಳುನಾಡಿನ ರಾಜಧಾನಿ ಚೆನ್ನೈನಿಂದ 320 ಕಿಲೋಮೀಟರ್ ದೂರದಲ್ಲಿರುವ ಗ್ರಾಮವೇ ತುಳಸೇಂದ್ರಪುರಂ. ಉನ್ನತ ವಿದ್ಯಾಭ್ಯಾಸಕ್ಕಾಗಿ ಅಮೆರಿಕಾಗೆ ತೆರಳುವ ಮೊದಲು ಶ್ಯಾಮಲಾ ಗೋಪಾಲನ್ ಅವರು ತಮಿಳುನಾಡಿನ ಇದೇ ತುಳಸೇಂದ್ರಪುರಂ ಗ್ರಾಮದಲ್ಲಿ ವಾಸವಾಗಿದ್ದರು ಎನ್ನಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications