ಕಂಚಿಶ್ರೀಗಳಿಗೆ ಮೋದಿ ಸೇರಿದಂತೆ ಗಣ್ಯರ ಸಂತಾಪ ಸಂದೇಶ
ಚೆನ್ನೈ, ಫೆಬ್ರವರಿ 28: ಕಳೆದ ಎರಡು ತಿಂಗಳ ಹಿಂದೆ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಕಂಚಿ ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ(82) ಚೆನ್ನೈನಲ್ಲಿ ಇಂದು(ಫೆ.28) ಇಹಲೋಕ ತ್ಯಜಿಸಿದರು.
ಅನಾರೋಗ್ಯದ ಹಿನ್ನೆಲೆಯಲ್ಲಿ ಫೆ.25 ರಂದು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದರು.
1994 ರಲ್ಲಿ ಕಂಚಿ ಕಾಮಕೋಟಿ ಪೀಠದ 69ನೇ ಜಗದ್ಗುರುಗಳಾಗಿ ಅವರು ಪೀಠಾರೋಹಣ ಮಾಡಿದ್ದರು. ಅವರ ದೇಹತ್ಯಾಗದ ನಂತರ ಶ್ರೀ ಶಂಕರ ವಿಜಯೇಂದ್ರ ಸರಸ್ವತಿಗಳು 70 ನೇ ಜಗದ್ಗುರುಗಳಾಗಿ ಪೀಠಾಲಂಕರಿಸಲಿದ್ದಾರೆ.
ಕಂಚಿ ಶ್ರೀಗಳ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ನಾನಾ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
|
ನರೇಂದ್ರ ಮೋದಿ
ಕಂಚಿ ಕಾಮಕೋಟಿ ಪೀಠದ ಜಗದ್ಗುರು ಪೂಜ್ಯ ಶ್ರೀ ಜಯೇಂದ್ರ ಸರಸ್ವತಿ ಶಂಕರಾಚಾರ್ಯ ಅವರ ಅಗಲಿಕೆಯಿಂದ ಬಹಳ ನೋವಾಗಿದೆ. ಅವರು ತಮ್ಮ ಅತ್ಯುನ್ನತ ಸೇವಾ ಕಾರ್ಯದಿಂದ ಎಂದಿಗೂ ನಮ್ಮೆಲ್ಲ ಹೃದಯದಲ್ಲಿ ನೆನಪಿನಲ್ಲುಳಿಯುತ್ತಾರೆ. ಓ ಶಾಂತಿ. ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಆರ್.ವಿ.ದೇಶಪಾಂಡೆ
"ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಮನುಕುಲದ ಸೇವೆಗೈದು ಮತ್ತು ಸಮಾಜವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಿ, ಇಂದು ದೇಹತ್ಯಾಗ ಮಾಡಿದ ಕಂಚಿ ಕಾಮಕೋಟಿ ಪೀಠದ ಶ್ರೀ ಜಯೇಂದ್ರ ಸರಸ್ವತಿಗಳ ನಿರ್ಗಮನದಿಂದ ಶೂನ್ಯಭಾವ ಸೃಷ್ಟಿಯಾಗಿದೆ. ಕಂಚಿಶ್ರೀಗಳು ತಮ್ಮ ನಿರಂತರ ಸೇವೆ ಮತ್ತು ತಪೋಬಲದ ಮೂಲಕ ಎಲ್ಲರಿಗೂ ದಾರಿದೀಪವಾಗಿದ್ದರು. ಪ್ರತೀ ಕ್ಷಣವೂ ದೀನದಲಿತರ ಒಳಿತಿನ ಬಗ್ಗೆ ಕಳಕಳಿಯಿಂದ ಯೋಚಿಸುತ್ತಿದ್ದ ಅವರು ಇಡೀ ದಕ್ಷಿಣ ಭಾರತದಲ್ಲಿ ಅಪಾರ ಭಕ್ತವೃಂದವನ್ನು ಹೊಂದಿದ್ದರು. ಶ್ರೀಗಳು ಭೌತಿಕವಾಗಿ ನಮ್ಮೊಂದಿಗಿಲ್ಲದಿದ್ದರೂ ಅವರು ನಡೆದ ಹಾದಿಯೇ ಸಮಾಜವನ್ನು ಮುನ್ನಡೆಸಲಿದೆ" ಎಂದು ಸಚಿವ ಆರ್ ವಿ ದೇಶಪಾಂಡೆ ಹೇಳಿದ್ದಾರೆ.
|
ವೆಂಕಯ್ಯ ನಾಯ್ಡು
ಮೋಕ್ಷ ಸಂಪಾದಿಸಿದ ಕಂಚಿ ಶ್ರೀಗಳಿಗೆ ನನ್ನ ಅನಂತ ಗೌರವಗಳು. ಅವರು ಮನುಕುಲಕ್ಕೆ ನೀಡಿದ ಕೊಡುಗೆ, ನಮಗೆ ಮತ್ತು ನಮ್ಮ ಮುಂದಿನ ಹಲವು ತಲೆಮಾರುಗಳಿಗೆ ಸ್ಫೂರ್ತಿ ಎಂದಿದ್ದಾರೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು.
|
ರವಿಶಂಕರ್ ಪ್ರಸಾದ್
ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿಗಳಿಗೆ ನನ್ನ ಪ್ರಣಾಮಗಳು. ಅಧ್ಯಾತ್ಮ, ಹಿಂದು ಸಂಸ್ಕೃತಿಯನ್ನು ಶ್ರೀಮಂತಗೊಳಿಸುವಲ್ಲಿ ಅವರ ಕೊಡುಗೆ ಅಪಾರ. ಬಡವರಿಗಾಗಿ ಅವರು ಕೈಗೊಂಡ ಸೇವಾ ಕಾರ್ಯಗಳು ಎಂದಿಗೂ ನೆನಪಿನಲ್ಲುಳಿಯುವಂಥವು ಎಂದಿದ್ದಾರೆ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications