ಕನ್ನಡಿಗ ಎಂ.ಕೆ.ಸೂರಪ್ಪ ತ.ನಾಡಿನ ಅಣ್ಣಾ ವಿ.ವಿ. ಉಪಕುಲಪತಿಯಾಗಿ ನೇಮಕ
ಚೆನ್ನೈ, ಏಪ್ರಿಲ್ 5 : ಎರಡು ವರ್ಷಗಳ ನಂತರ ತಮಿಳುನಾಡಿನ ಅಣ್ಣಾ ವಿಶ್ವಾವಿದ್ಯಾಲಯಕ್ಕೆ ಉಪ ಕುಲಪತಿಗಳನ್ನು ನೇಮಕ ಮಾಡಲಾಗಿದೆ. ಕನ್ನಡಿಗರಾದ ಎಂ.ಕೆ.ಸೂರಪ್ಪ ಅವರನ್ನು ವಿಶ್ವವಿದ್ಯಾಲಯದ ಉಪ ಕುಲಪತಿಯಾಗಿ ನೇಮಿಸಿ, ಅಲ್ಲಿನ ರಾಜ್ಯಪಾಲರಾದ ಬನ್ವಾರಿಲಾಲ್ ಪುರೋಹಿತ್ ಆದೇಶ ಹೊರಡಿಸಿದ್ದಾರೆ.
ನೇಮಕವಾದ ದಿನದಿಂದ ಮೂರು ವರ್ಷದ ಅವಧಿಗೆ ಸೂರಪ್ಪ ಅವರು ಉಪ ಕುಲಪತಿ ಆಗಿರುತ್ತಾರೆ ಎಂದು ತಮಿಳುನಾಡು ರಾಜಭವನದ ಪ್ರಕಟಣೆ ತಿಳಿಸಿದೆ. 2016 ಮೇನಲ್ಲಿ ರಾಜಾರಾಮ್ ಅವರು ಅಣ್ಣಾ ವಿಶ್ವವಿದ್ಯಾಲಯದ ಉಪಕುಲಪತಿ ಸ್ಥಾನದಿಂದ ನಿರ್ಗಮಿಸಿದ ನಂತರ ಯಾರ ನೇಮಕಾತಿಯೂ ಆಗಿರಲಿಲ್ಲ.

ಸೂರಪ್ಪ ಅವರು ಐಐಟಿ- ರೋಪರ್ ನ ನಿರ್ದೇಶಕರಾಗಿ 2009ರಿಂದ 2015 ಕಾರ್ಯ ನಿರ್ವಹಿಸಿದ್ದರು. ಮೆಟಲರ್ಜಿಕಲ್ ಎಂಜಿನಿಯರಿಂಗ್ ನಲ್ಲಿ ಡಾಕ್ಟರೇಟ್ ಪಡೆದಿದ್ದಾರೆ.

ಮೂವತ್ತು ವರ್ಷಗಳ ಕಾಲ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಸೂರಪ್ಪ ಅವರು, ಆ ಪೈಕಿ ಇಪ್ಪತ್ನಾಲ್ಕು ವರ್ಷ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಹೆಸರಲ್ಲಿ ನೂರೈವತ್ತರಷ್ಟು ಸಂಶೋಧನಾ ಲೇಖನಗಳು ಪ್ರಕಟವಾಗಿವೆ.
-
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications