ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಗುಡ್ಡ ಕುಸಿತ, ಹಳಿ ತಪ್ಪಿದ ಯಶವಂತಪುರ-ಕಣ್ಣೂರು ರೈಲು

|
Google Oneindia Kannada News

ಚೆನ್ನೈ, ನವೆಂಬರ್ 12; ಗುಡ್ಡ ಕುಸಿದ ಪರಿಣಾಮ ಕಣ್ಣೂರು-ಯಶವಂತಪುರ ನಡುವಿನ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದೆ. ಘಟನೆಯಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಹಲವು ರೈಲುಗಳ ಮಾರ್ಗ ಬದಲಾವಣೆಯಾಗಿದೆ.

ಶುಕ್ರವಾರ ಮುಂಜಾನೆ 3.45ರ ಸುಮಾರಿಗೆ ತಮಿಳುನಾಡಿನ ಧರ್ಮಾವರಂ ಜಿಲ್ಲೆಯ ತೆಪ್ಪೊಡಿ-ಸಿವಾಡಿ ನಡುವಿನ ಪ್ರದೇಶದಲ್ಲಿ ಕಣ್ಣೂರು- ಯಶವಂತಪುರ (07390) ನಡುವಿನ ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿವೆ.

2022ರ ಆರಂಭದಲ್ಲೇ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ2022ರ ಆರಂಭದಲ್ಲೇ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ

Kannur- Yeshwantpur Express Train Derailed

ರೈಲಿನಲ್ಲಿದ್ದ ಎಲ್ಲಾ 2,348 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ರೈಲು ಹಳಿ ತಪ್ಪಿದ್ದು, ಯಾವುದೇ ಅನಾಹುತವಾಗಿಲ್ಲ.

ವರ್ಷಗಳ ಬೇಡಿಕೆಗೆ ಮನ್ನಣೆ; ನ.10ರಿಂದ ಕಾರಟಗಿಗೆ ರೈಲು ವರ್ಷಗಳ ಬೇಡಿಕೆಗೆ ಮನ್ನಣೆ; ನ.10ರಿಂದ ಕಾರಟಗಿಗೆ ರೈಲು

ರೈಲು ಹಳಿ ತಪ್ಪಿದ್ದರಿಂದ ಯಾವುದೇ ಅನಾಹುತವಾಗಿಲ್ಲ. ಎಲ್ಲಾ 2348 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾರೂ ಸಹ ಗಾಯಗೊಂಡಿಲ್ಲ ಎಂದು ನೈಋತ್ಯ ರೈಲ್ವೆ ಹೇಳಿದೆ.

ಕಣ್ಣೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಾಗುವಾಗ ಗುಡ್ಡ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಕಲ್ಲುಗಳು ಹಳಿಗೆ ಸಿಲುಕಿದ್ದು, ರೈಲು ಹಳಿ ತಪ್ಪಿದೆ. ರೈಲಿನ 5 ಬೋಗಿ ಹಳಿ ತಪ್ಪಿದ್ದರಿಂದ ಈ ಮಾರ್ಗದಲ್ಲಿ ಸಾಗಬೇಕಾದ ಕೆಲವು ರೈಲುಗಳ ಮಾರ್ಗ ಬದಲಾಗಿದೆ.

ಬೆಂಗಳೂರು; 8 ಡೆಮು ರೈಲು ಸಂಚಾರ ಆರಂಭ, ವೇಳಾಪಟ್ಟಿ ಬೆಂಗಳೂರು; 8 ಡೆಮು ರೈಲು ಸಂಚಾರ ಆರಂಭ, ವೇಳಾಪಟ್ಟಿ

ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ರೈಲಿನಲ್ಲಿದ್ದ ಪ್ರಯಾಣಿಕರ ಸಂಚಾರಕ್ಕಾಗಿ ಬಸ್‌ಗಳ ವ್ಯವಸ್ಥೆಯನ್ನು ಇಲಾಖೆ ಮಾಡಿದೆ.

ನೈಋತ್ಯ ರೈಲ್ವೆ ಬುಲೆಟಿನ್

ರೈಲು ನಂಬರ್ 07390 ಕಣ್ಣೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ಕುರಿತು ನೈಋತ್ಯ ರೈಲ್ವೆ ಬುಲೆಟಿನ್ ಬಿಡುಗಡೆ ಮಾಡಿದೆ.

* ಕಣ್ಣೂರಿನಿಂದ ಗುರುವಾರ ಸಂಜೆ 6.05ಕ್ಕೆ ರೈಲು ಹೊರಟಿತ್ತು. ನವೆಂಬರ್ 12ರಂದು ಮುಂಜಾನೆ 3.50ರ ಸುಮಾರಿಗೆ ರೈಲು ಸಾಗುತ್ತಿದ್ದಾಗ ಗುಡ್ಡ ಕುಸಿದಿದೆ. ಚಲಿಸುತ್ತಿದ್ದ ರೈಲಿನ ಚಕ್ರಕ್ಕೆ ಕಲ್ಲುಗಳು ಸಿಲುಕಿವೆ.

* ಬಿ 1, ಬಿ 2 (3ನೇ ಎಸಿ), ಸ್ಲೀಪರ್ ಕೋಚ್‌ಗಳಾದ ಎಸ್‌ 6, ಎಸ್ 7, ಎಸ್‌ 8, ಎಸ್‌ 9, ಎಸ್ 10 ಬೋಗಿಗಳು ಹಳಿ ತಪ್ಪಿವೆ.

* ಬೆಂಗಳೂರು ರೈಲು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ಯಾಂ ಸಿಂಗ್‌ ಮತ್ತು ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿದೆ. ಸೇಲಂನ ರೈಲ್ವೆ ವಿಭಾಗದ ತಂಡ ಸಹ ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸುತ್ತಿದೆ.

* ರೈಲಿನಲ್ಲಿ ಸಂಚಾರ ನಡೆಸುತ್ತಿದ್ದ ಜನರ ಸಂಚಾರಕ್ಕೆ ಸೇಲಂನಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಅಪಘಾತ ನಡೆದ ಸ್ಥಳದಿಂದ ಪ್ರಯಾಣಿಕರನ್ನು ಕರೆತರಲು 5 ಬಸ್ ವ್ಯವಸ್ಥೆ ಮಾಡಲಾಗಿದೆ.

* ಅಪಘಾತ ನಡೆದ ಸ್ಥಳದಲ್ಲಿ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ.

* ಸಹಾಯವಾಣಿ ಸಂಖ್ಯೆಗಳು ಹೊಸೂರು 04344-222603, ಬೆಂಗಳೂರು 080-22156554 ಧರ್ಮಪುರಿ 04342-232111

English summary
Kannur- Yeshwantpur Express derailed in Dharmapuri district in Tamil Nadu on Friday morning. No casualties found.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X