'ಲುಕ್ಔಟ್ ನೋಟಿಸ್' ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಕಾರ್ತಿ ಚಿದಂಬರಂ
ತಮ್ಮ ವಿರುದ್ಧ 'ಲುಕ್ ಔಟ್ ನೋಟಿಸ್' ಜಾರಿಗೊಳಿಸಿದ ಸಿಬಿಐ ವಿರುದ್ಧ ಮದ್ರಾಸ್ ಹೈಕೋರ್ಟ್ ಮೊರೆ ಹೋದ ಕಾರ್ತಿ ಚಿದಂಬರಂ. ಕೇಂದ್ರದ ಮಾಜಿ ಸಚಿವರಾದ ಪಿ. ಚಿದಂಬರಂ ಅವರ ಪುತ್ರರಾಗಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಭ್ರಷ್ಟಾಚಾರ
ನವದೆಹಲಿ, ಆಗಸ್ಟ್ 4: ತಮ್ಮ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಜಾರಿಗೊಳಿಸಿರುವ 'ಲುಕ್ಔಟ್ ನೋಟಿಸ್' ವಿರುದ್ಧ ಕಾರ್ತಿ ಚಿದಂಬರಂ ಅವರು ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಇದರ ವಿರುದ್ಧ ಸಿಡಿದೆದ್ದಿರುವ ಕಾರ್ತಿ, ಈ ನೋಟಿಸ್ ಕಾನೂನು ಬಾಹಿರವಾಗಿದ್ದು, ಇದಕ್ಕೆ ತಡೆಯಾಜ್ಞೆ ನೀಡಬೇಕೆಂದು ಅವರು ನ್ಯಾಯಪೀಠದ ಮುಂದೆ ಮನವಿ ಸಲ್ಲಿಸಿದ್ದಾರೆಂದು ಕೆಲ ಸುದ್ದಿ ಮೂಲಗಳು ತಿಳಿಸಿವೆ.
ಕಾರ್ತಿ ಚಿದಂಬರ್ ಸಲ್ಲಿಸಿರುವ ಅರ್ಜಿಯನ್ನು ಸ್ವೀಕರಿಸಿರುವ ಸಾಲಿಸಿಟರ್ ಜನರಲ್, ಜಿ. ರಾಜಗೋಪಾಲನ್, ಈ ಬಗ್ಗೆ ಸಿಬಿಐ ಹಾಗೂ ಇತರ ತನಿಖಾ ಸಂಸ್ಥೆಗಳಿಗೆ ನೋಟಿಸ್ ಜಾರಿಯಾಗಿರುವ ಬಗ್ಗೆ ಮಾಹಿತಿ ಪಡೆದ ನಂತರ ವಿಚಾರಣೆ ಆರಂಭಿಸುವುದಾಗಿ ತಿಳಿಸಿದ್ದಾರೆ.
ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆಯ ಆರೋಪಗಳನ್ನು ಎದುರಿಸುತ್ತಿರುವ ಕಾರ್ತಿ ಚಿದಂಬರಂ, ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಪುತ್ರ.
ಇವರ ವಿರುದ್ಧ ತನಿಖೆ ನಡೆಸುತ್ತಿರುವ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ (ಇಡಿ), ಯಾವುದೇ ಕ್ಷಣದಲ್ಲಿ ದೇಶ ಬಿಟ್ಟು ಹೊರಟು ಹೋಗುವ ಸಾಧ್ಯತೆಗಳನ್ನು ಅಂದಾಜು ಮಾಡಿರುವ ಸಿಬಿಐ, ಮುನ್ನೆಚ್ಚರಿಕೆ ಕ್ರಮವಾಗಿ ಈ ನೋಟಿಸ್ ಜಾರಿಗೊಳಿಸಲಾಗಿದೆ.

ಸಿಬಿಐ ಕೂಡ ಕಣ್ಣು
ಆರ್ಥಿಕ ಅವ್ಯವಹಾರ, ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆ ವಿಚಾರದಲ್ಲಿ ಕಳೆದ ವರ್ಷ ಡಿಸೆಂಬರ್ ನಲ್ಲಿ ಕಾರ್ತಿ ಚಿದಂಬರಂ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ಇದೇ ವರ್ಷ, ಮೇ ತಿಂಗಳಲ್ಲಿ ಕಾರ್ತಿ ಚಿದಂಬರಂ ಹಾಗೂ ಮನೆಗಳ ಮೇಲೆ ಸಿಬಿಐ ಕೂಡಾ ದಾಳಿ ನಡೆಸಿತ್ತು.

ಅಪ್ಪಣೆ ಪಡೆದ ನಂತರವೇ ಪ್ರಯಾಣ
ಯಾವುದೇ ವ್ಯಾವಹಾರಿಕ, ಕೌಟುಂಬಿಕ, ವೈದ್ಯಕೀಯ ಮುಂತಾದ ಸಕಾರಣಗಳಿಂದ ದೇಶ ಬಿಟ್ಟು ಹೊರಹೋಗುವ ಸಂದರ್ಭ ಎದುರಾದಲ್ಲಿ, ಕಾರ್ತಿ ಚಿದಂಬರಂ ಅವರು, ಮೊದಲು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ (ಇಡಿ) ಗಮನಕ್ಕೆ ಈ ವಿಷಯವನ್ನು ತರಬೇಕಿದೆ. ಈ ತನಿಖಾ ಸಂಸ್ಥೆಗಳ ಒಪ್ಪಿಗೆ ಪಡೆದ ನಂತರವಷ್ಟೇ ಅವರು, ವಿದೇಶಕ್ಕೆ ತೆರಳಬಹುದಾಗಿದೆ ಎಂದು ಲುಕ್ ಔಟ್ ನೋಟಿಸ್ ನಲ್ಲಿ ಸೂಚನೆ ನೀಡಲಾಗಿದೆ.

ಏನಿದು ಲುಕ್ ಔಟ್ ನೋಟಿಸ್?
ಅಪರಾಧ ಪ್ರಕರಣಗಳಲ್ಲಿ ಪೊಲೀಸ್, ಸಿಬಿಐ, ಸಿಐಡಿ, ಇಡಿ, ಆದಾಯ ತೆರಿಗೆ ಇಲಾಖೆ ಅಥವಾ ಇನ್ಯಾವುದೇ ತನಿಖಾ ಸಂಸ್ಥೆಗಳಿಗೆ ಬೇಕಾದ ವ್ಯಕ್ತಿಯೊಬ್ಬರನ್ನು ಇತರ ಸಾಮಾನ್ಯ ಪ್ರಯಾಣಿಕರಂತೆ ಸುಲಭವಾಗಿ ವಿದೇಶಕ್ಕೆ ತೆರಳುವುದನ್ನು ನಿರ್ಬಂಧಗೊಳಿಸುವ ವಿಧಾನವೇ ಲುಕ್ ಔಟ್ ನೋಟಿಸ್.

ಇಲ್ಲಿ ತಪ್ಪಿಸಿಕೊಂಡರೂ ಅಲ್ಲಿ ಸಿಕ್ಕಿಹಾಕಿಕೊಳ್ತಾರೆ
ಈ ನೋಟಿಸ್ ಜಾರಿಗೊಂಡವರ ಬಗೆಗಿನ ಎಲ್ಲಾ ರೀತಿಯ ಮಾಹಿತಿಗಳು ಪ್ರಪಂಚದ ಎಲ್ಲಾ ವಿಮಾನ ನಿಲ್ದಾಣಗಳಿಗೆ, ಹಡಗುದಾಣಗಳಿಗೆ ರವಾನೆಯಾಗುತ್ತವೆ. ಹಾಗಾಗಿ, ಸಂಬಂಧಪಟ್ಟ ವ್ಯಕ್ತಿಗಳು ಭಾರತದಲ್ಲಿನ ತನಿಖಾ ಸಂಸ್ಥೆಗಳ ಕಣ್ತಪ್ಪಿಸಿ ವಿದೇಶಕ್ಕೆ ತೆರಳಿದರೂ, ಅಲ್ಲಿ ವಿದೇಶಗಳ ವಿಮಾನ ನಿಲ್ದಾಣಗಳಲ್ಲಿ ನಡೆಸಲಾಗುವ ವಲಸಿಗರ ತಪಾಸಣೆ ಕೇಂದ್ರಗಳಲ್ಲಿ ಇವರು ಸಿಕ್ಕಿಹಾಕಿಕೊಳ್ಳುವ ಸಾಧ್ಯತೆಗಳಿರುತ್ತವೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications