ಕರುಣಾನಿಧಿಯವರೇ ತಮ್ಮ ಮಗ ಸ್ಟಾಲಿನ್ನನ್ನು ನಂಬಲಿಲ್ಲ; ಪಳನಿಸ್ವಾಮಿ
ಚೆನ್ನೈ, ಮಾರ್ಚ್ 22: "ಕರುಣಾನಿಧಿಯವರೇ ತಮ್ಮ ಮಗ ಸ್ಟಾಲಿನ್ನನ್ನು ನಂಬುತ್ತಿರಲಿಲ್ಲ" ಎಂದು ತಮಿಳುನಾಡು ಸಿ.ಎಂ. ಎಡಪ್ಪಾಡಿ ಪಳನಿಸ್ವಾಮಿ ಅವರು ಡಿಎಂಕೆ ಅಧ್ಯಕ್ಷ ಎಂ.ಕೆ ಸ್ಟಾಲಿನ್ ಅವರನ್ನು ಟೀಕಿಸಿದ್ದಾರೆ.
ತಿರುವಣ್ಣಮಲೈನಲ್ಲಿ ಭಾನುವಾರ ಚುನಾವಣಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಕರುಣಾನಿಧಿಯವರೇ ಸ್ವತಃ ತಮ್ಮ ಮಗ ಸ್ಟಾಲಿನ್ ಅವರನ್ನು ನಂಬುತ್ತಿರಲಿಲ್ಲ. ಅವರು ಸಾಯುವ ಎರಡು ವರ್ಷದ ಮುನ್ನ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಆ ಸಂದರ್ಭದಲ್ಲಿಯೂ ಅವರ ಪಕ್ಷವನ್ನು ತಮ್ಮ ಮಗ ಸ್ಟಾಲಿನ್ಗೆ ನೀಡಲಿಲ್ಲ. ಹೀಗಿದ್ದಾಗ ಜನರು ಹೇಗೆ ಸ್ಟಾಲಿನ್ ಅವರನ್ನು ನಂಬಬೇಕು" ಎಂದು ಪ್ರಶ್ನಿಸಿದ್ದಾರೆ. ಮುಂದೆ ಓದಿ...

"ಮೋಸದಿಂದ ಕರುಣಾನಿಧಿ ಸಿಎಂ ಆದರು"
ಪಕ್ಷದ ಮುಖಂಡ ನೆಂದುಚೇಸಿಯನ್ ಅವರನ್ನು ಮೋಸಗೊಳಿಸುವ ಮೂಲಕ ದಿ.ಕರುಣಾನಿಧಿಯವರು ಸಿಎಂ ಆದರು ಎಂದು ಆರೋಪಿಸಿದ ಅವರು, ನಾನು ಅಂಥ ದಾರಿಯನ್ನು ಆಯ್ದುಕೊಂಡು ಬರಲಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ನನ್ನನ್ನು ಪಕ್ಷದ ಶಾಸಕರು ಚುನಾಯಿಸಿದ ನಂತರ ಪಕ್ಷಕ್ಕೆ ಬಂದೆ" ಎಂದು ಆರೋಪಿಸಿದರು.

"ಯಾವ ಅಧಿಕಾರಿಯನ್ನೂ ನಾನು ಬೆದರಿಸಿಲ್ಲ"
ಕಳೆದ ನಾಲ್ಕು ವರ್ಷದಿಂದ ನಾನು ಸಿಎಂ ಆಗಿದ್ದೇನೆ. ಯಾವೊಬ್ಬ ಅಧಿಕಾರಿಯನ್ನೂ ನಾನು ಬೆದರಿಸಿಲ್ಲ. ಆದರೆ ಸ್ಟಾಲಿನ್ ಹಾಗೂ ಅವರ ಮಗ ಉದಯನಿಧಿ ಸ್ಟಾಲಿನ್ ಅಧಿಕಾರಿಗಳಿಗೂ ಬೆದರಿಕೆ ಹಾಕುತ್ತಾರೆ ಎಂದು ದೂರಿದರು. ಯಾರಾದರೂ ಭಾಷಣ ಬರೆದುಕೊಟ್ಟರೆ, ಅದನ್ನು ಸ್ಟಾಲಿನ್ ಚೆನ್ನಾಗಿ ಉರು ಹೊಡೆಯುತ್ತಾರೆ ಎಂದು ಟೀಕಿಸಿದರು.

2,726 ನಾಮಪತ್ರಗಳು ತಿರಸ್ಕೃತ
ತಮಿಳುನಾಡು ಚುನಾವಣೆಗೆ ಪಳನಿಸ್ವಾಮಿ ಹಾಗೂ ಸ್ಟಾಲಿನ್ ಅವರ ನಾಮಪತ್ರ ಸಲ್ಲಿಕೆಯಾಗಿದ್ದು, ಅದನ್ನು ಸ್ವೀಕರಿಸಲಾಗಿದೆ. ಒಟ್ಟಾರೆ ಬಂದಿರುವ 7,255 ನಾಮಪತ್ರಗಳಲ್ಲಿ 4,526 ನಾಮಪತ್ರಗಳು ಸ್ವೀಕೃತವಾಗಿದ್ದು, 2,726 ನಾಮಪತ್ರಗಳು ತಿರಸ್ಕೃತಗೊಂಡಿವೆ. ಸೋಮವಾರ, ಮಾರ್ಚ್ 22 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಎಷ್ಟು ಮಂದಿ ವಿಧಾನಸಭೆ ಚುನಾವಣೆ ಸ್ಪರ್ಧೆಯಲ್ಲಿರುವರು ಎಂದು ಇಂದು ತಿಳಿದುಬರಲಿದೆ.

ತಮಿಳುನಾಡು ಚುನಾವಣೆ ವಿವರ...
ರಾಜ್ಯದ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನವನ್ನು ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ. ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ರಾಷ್ಟ್ರೀಯ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಅಖಾಡಕ್ಕೆ ಇಳಿದಿವೆ. ಎಐಎಡಿಎಂಕೆ-ಬಿಜೆಪಿ ಹಾಗೂ ಡಿಎಂಕೆ-ಕಾಂಗ್ರೆಸ್ ಮೈತ್ರಿಯ ಮೂಲಕ ಚುನಾವಣೆ ಎದುರಿಸಲು ಅಣಿಯಾಗಿವೆ.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ












Click it and Unblock the Notifications