ಎಂ.ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆ ಎದುರು ಜಮಾಯಿಸಿದ ಅಭಿಮಾನಿಗಳು
Recommended Video
ಚೆನ್ನೈ, ಜುಲೈ 28: ಅನಾರೋಗ್ಯದಿಂದ ಬಳಲುತ್ತಿರುವ ತಮಿಳುನಾಡಿನ ಎಂ ಕರುಣಾನಿಧಿ ಅವರನ್ನು ಶನಿವಾರ ಬೆಳಗ್ಗಿನ ಜಾವ 1:30 ಕ್ಕೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಜ್ವರ ಮತ್ತು ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದ 94 ವರ್ಷದ ಕರುಣಾನಿಧಿ ಅವರಿಗೆ ನಿನ್ನೆ ಅವರ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ರಾತ್ರಿ ಅವರ ರಕ್ತದೊತ್ತಡ ತೀರಾ ಕಡಿಮೆಯಾದ ಹಿನ್ನೆಲೆಯಲ್ಲ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಗಣ್ಯರು ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿ, ಅವರು ಬಹುಬೇಗನೆ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಆರೋಗ್ಯದಲ್ಲಿ ಏರುಪೇರು, ಗಣ್ಯರ ಭೇಟಿ
ಇದಕ್ಕೂ ಮುನ್ನ ಕರುಣಾನಿಧಿ ಆವರ ನಿವಾಸಕ್ಕೆ ಎಐಎಡಿಎಂಕೆ ಮುಖಂಡರು ಭೇಟಿ ನೀಡಿ ಡಿಎಂಕೆ ಮುಖಂಡ ಎಂ ಕೆ ಸ್ಟಾಲಿನ್ ಅವರ ಬಳಿ ಕರುಣಾನಿಧಿ ಅವರ ಆರೋಗ್ಯದ ಕುರಿತು ಚರ್ಚೆ ನಡೆಸಿದರು. ನಟ ಕಮಲೆ ಹಾಸನ್ ಸಹ ಸ್ಟಾಲಿನ್ ಅವರನ್ನು ಭೇಟಿ ಮಾಡಿದ್ದರು.