ಬಂಧಿತ ನಕ್ಸಲರು ಕೇರಳದ ಮೇಲೆ ಕಣ್ಣಿಟ್ಟಿದ್ದರು
ಚೆನ್ನೈ, ಮೇ 6 : ಕೊಯಮತ್ತೂರಿನಲ್ಲಿ ಸೋಮವಾರ ರಾತ್ರಿ ಬಂಧಿಸಿದ ಐವರು ನಕ್ಸಲರ ವಿಚಾರಣೆ ಮುಂದುವರೆದಿದ್ದು, ಕೇರಳದಲ್ಲಿ ಸಂಘಟನೆಯನ್ನು ಬಲಪಡಿಸಲು ಯೋಜನೆ ರೂಪಿಸಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ಜಾರ್ಖಂಡ್ನಲ್ಲಿನ ನಕ್ಸಲರು ಇವರಿಗೆ ಬೆಂಬಲ ನೀಡುತ್ತಿದ್ದರು ಎಂಬುದು ಬಹಿರಂಗಗೊಂಡಿದೆ.
ಬಂಧಿತನಾದ ನಕ್ಸಲ್ ನಾಯಕ ರೂಪೇಶ್ ಮಾರ್ಗದರ್ಶನದಲ್ಲಿ ಕೇರಳದ ಉತ್ತರ ಭಾಗದಲ್ಲಿ ಚಟುವಟಿಕೆಯನ್ನು ಆರಂಭಿಸಲು ಯೋಜನೆ ರೂಪಿಸಲಾಗಿತ್ತು. ಅಲ್ಲಿನ ರೈತರು ಮತ್ತು ಆದಿವಾಸಿಗಳ ನೆರವು ಪಡೆದು ಹೋರಾಟ ಆರಂಭಿಸಲು ನಕ್ಸಲರು ಸಿದ್ಧತೆ ನಡೆಸಿದ್ದರು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. [ಕೊಯಮತ್ತೂರಿನಲ್ಲಿ ಸಿಕ್ಕಿಬಿದ್ದ ನಕ್ಸಲರು ಯಾರು?]

ಕೇರಳದಲ್ಲಿ ಕ್ಯಾಂಪ್ : ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕೇರಳದಲ್ಲಿ ಕ್ಯಾಂಪ್ ತೆರೆದು ಹೋರಾಟ ಆರಂಭಿಸಲು ನಕ್ಸಲರು ಸಿದ್ಧವಾಗಿದ್ದರು. ಜಾರ್ಖಂಡ್ನಲ್ಲಿನ ನಕಲ್ಸರು ಇದಕ್ಕೆ ಸಹಹಾರ ನೀಡುತ್ತಿದ್ದರು ಎಂದು ತನಿಖೆ ವೇಳೆ ಬಂಧಿತ ನಕ್ಸಲರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.[ಕೊಯಮುತ್ತೂರಿನಲ್ಲಿ ಐವರು ಶಂಕಿತ ನಕ್ಸಲರ ಬಂಧನ]
ಪಾಲಕ್ಕಾಡ್, ಕೊಚ್ಚಿ ಮುಂತಾದ ಸ್ಥಳಗಳಲ್ಲಿ ಭೂಮಿ ಇಲ್ಲದ ಜನರನ್ನು ಗುರುತಿಸಿ ಹೋರಾಟ ಸಂಘಟಿಸಲು ಸಿದ್ಧತೆ ನಡೆದಿತ್ತು. ಆದಿವಾಸಿಗಳು ವಾಸ ಮಾಡುತ್ತಿರುವ ಪ್ರದೇಶದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸುವ ಸರ್ಕಾರ ನಿರ್ಧಾರದ ವಿರುದ್ಧ ಹೋರಾಟ ಸಂಘಟಿಸಲು ಸಂಚು ರೂಪಿಸಿದ್ದರು.
ಮಂಗಳೂರು ಲಿಂಕ್ : ಮಂಗಳೂರಿನಲ್ಲಿಯೂ ಹೋರಾಟ ಆರಂಭಿಸಲು ನಕ್ಸಲರು ಸಿದ್ಧತೆ ಮಾಡಿಕೊಂಡಿದ್ದರು. ಮಂಗಳೂರಿನಲ್ಲಿ ಕೆಲವು ವರ್ಷಗಳಿಂದ ನಡೆಯುತ್ತಿರುವ ಆರ್ಥಿಕ ಚಟುವಟಿಗಳ ಮಾಹಿತಿ ಸಂಗ್ರಹಿಸಿದ್ದ ನಕ್ಸಲರು ರೈತರನ್ನು ಸರ್ಕಾರ ಲೂಟಿ ಮಾಡುತ್ತಿದೆ ಎಂದು ರೈತರನ್ನು ಸಂಘಟಿಸಲು ಸಿದ್ಧತೆ ಆರಂಭಿಸಿದ್ದರು.
ಕರ್ನಾಟಕ ಮತ್ತು ಕೇರಳದಲ್ಲಿ ದೊಡ್ಡದಾದ ನಕ್ಸಲ್ ದಾಳಿ ನಡೆದಿಲ್ಲ. ಆದರೆ, ಕರಪತ್ರಗಳನ್ನು ಹಂಚಿ ಮುಂದಿನ ದಿನಗಳಲ್ಲಿ ದೊಡ್ಡದಾದ ದಾಳಿ ಮಾಡುವ ಎಚ್ಚರಿಕೆಯನ್ನು ನಕ್ಸಲರು ರವಾನಿಸಿದ್ದರು. ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕವನ್ನು ಸಂಪರ್ಕಿಸುವ ಕಾರಿಡಾರ್ ನಿರ್ಮಿಸಲು ನಕ್ಸಲರು ಸಿದ್ಧವಾಗಿದ್ದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications