ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಕ್ಕೆ ಕಾರಣ ನೀಡಿದ ಖುಷ್ಬೂ
ಚೆನ್ನೈ, ಅಕ್ಟೋಬರ್ 13: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಮರುದಿನವೇ ನಟಿ ಖುಷ್ಬೂ, ತಮ್ಮ ಮಾಜಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಬುದ್ಧಿವಂತ ಮಹಿಳೆಯನ್ನು ಬಯಸುವುದಿಲ್ಲ ಮತ್ತು ಪಕ್ಷದೊಳಗೆ ಸತ್ಯವನ್ನು ಹೇಳುವ ಸ್ವಾತಂತ್ರ್ಯವಿಲ್ಲ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರರಾಗಿದ್ದ ಖುಷ್ಬೂ, ಪಕ್ಷವು ನಿಯಮಗಳನ್ನು ಹೇರುತ್ತಿತ್ತು ಮತ್ತು ತಮ್ಮನ್ನು ಹತ್ತಿಕ್ಕುತ್ತಿತ್ತು ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷವು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ವಕ್ತಾರರ ಸ್ಥಾನದಿಂದ ಖುಷ್ಬೂ ಅವರನ್ನು ಸೋಮವಾರ ಕಿತ್ತುಹಾಕಿತ್ತು. ಕೆಲವೇ ನಿಮಿಷಗಳಲ್ಲಿ ಖುಷ್ಬೂ ತಮ್ಮ ರಾಜೀನಾಮೆ ಪತ್ರ ಬಿಡುಗಡೆ ಮಾಡಿದ್ದರು. ಪಕ್ಷದ ಹಿರಿಯರು ಕೆಟ್ಟದಾಗಿ ನೋಡಿಕೊಂಡಿಕೊಂಡಿರುವುದರಿಂದ ಪಕ್ಷಕ್ಕೆ ಗುಡ್ ಬೈ ಹೇಳುವ ಒತ್ತಡಕ್ಕೆ ಸಿಕುವಂತಾಯಿತು ಎಂದು ಹೇಳಿದ್ದರು.
ಮಂಗಳವಾರ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರ ಹೇಳಿಕೆಗಳನ್ನು ಉಲ್ಲೇಖಿಸಿ, ಪಕ್ಷವು ಮಾನಸಿಕ ಅಸ್ವಸ್ಥರಿಂದ ಕೂಡಿದೆ ಎಂದು ಟೀಕಿಸಿದರು. ಮುಂದೆ ಓದಿ.

ಅಗೌರವ ತೋರಿಸಿದ ಕಾಂಗ್ರೆಸ್
'ನಾನು ಕಾಂಗ್ರೆಸ್ಗೆ ನಿಷ್ಠಳಾಗಿದ್ದೆ. ಆದರೆ ಕಾಂಗ್ರೆಸ್ ನನಗೆ ಅಗೌರವ ತೋರಿಸಿತು. ಅವರಿಗೆ ಬುದ್ಧಿವಂತ ಮಹಿಳೆ ಬೇಕಾಗಿಲ್ಲ. ನನ್ನನ್ನು ಅವರು ನಟಿಯಾಗಿಯಷ್ಟೇ ನೋಡಿದ್ದರು. ಇದು ಕಾಂಗ್ರೆಸ್ನ ಕೀಳು ಚಿಂತನೆಗಳನ್ನು ತೋರಿಸಿತು' ಎಂದಿದ್ದಾರೆ.

ಮೋದಿ ಮೇಲೆ ವಿಶ್ವಾಸ
"ಬಿಜೆಪಿಯಿಂದ ನನಗೇನು ಸಿಗುತ್ತದೆ ಎಂಬ ನಿರೀಕ್ಷೆಯನ್ನು ಇಟ್ಟುಕೊಂಡಿಲ್ಲ. ಬದಲಿಗೆ ಬಿಜೆಪಿಯಿಂದ ದೇಶಕ್ಕೇನು ಸಿಗುತ್ತದೆ ಎನ್ನುವುದರ ಬಗ್ಗೆ ನಾನು ಆಲೋಚಿಸುತ್ತೇನೆ. ದೇಶದ 128 ಕೋಟಿ ಜನರು ಒಬ್ಬ ವ್ಯಕ್ತಿಯ ಮೇಲೆ ಭರವಸೆಯಿಟ್ಟುಕೊಂಡಿದ್ದಾರೆ ಎಂದರೆ ಅದು ಪ್ರಧಾನಮಂತ್ರಿ ನರೇಂದ್ರ ಮೋದಿ ಒಬ್ಬರೇ. ಹಾಗಿದ್ದ ಮೇಲೆ ಅವರಿಂದ ಖಂಡಿತವಾಗಿಯೂ ದೇಶಕ್ಕೆ ಒಳಿತು ಆಗುತ್ತದೆ" ಎಂದು ನಟಿ ಖುಷ್ಬೂ ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.

ಶಿಕ್ಷಣ ನೀತಿ ಬೆಂಬಲಿಸಿದ್ದ ಖುಷ್ಬೂ
ಬಿಜೆಪಿ ಮತ್ತು ಆರೆಸ್ಸೆಸ್ನ ಕಟು ಟೀಕಾಕಾರರಾಗಿದ್ದ ಖುಷ್ಬೂ, ಇತ್ತೀಚೆಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬೆಂಬಲಿಸಿದ್ದು, ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಕಾರಣವಾಗಿತ್ತು. ಪಕ್ಷದಲ್ಲಿ ಅಶಿಸ್ತಿನ ನಡವಳಿಕೆಯ ಆರೋಪಕ್ಕೆ ಒಳಗಾಗಿದ್ದರು. ಬಳಿಕ ಅವರು ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕ್ಷಮೆ ಕೋರಿದ್ದರು.

ಡಿಎಂಕೆ, ಕಾಂಗ್ರೆಸ್
ಖುಷ್ಬೂ 2010 ರಿಂದ 2014ರ ಅವಧಿಯಲ್ಲಿ ಡಿಎಂಕೆಯಲ್ಲಿದ್ದರು. ಆಗ ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರದಲ್ಲಿತ್ತು. ಪಕ್ಷದ ನಾಯಕತ್ವದ ಜತೆಗಿನ ಜಗಳದ ಬಳಿಕ 2014ರಲ್ಲಿ ಕಾಂಗ್ರೆಸ್ ಸೇರಿಕೊಂಡಿದ್ದರು. 2001-2004ರ ಅವಧಿಯಲ್ಲಿ ಎಐಎಡಿಎಂಕೆ ಪರವೂ ಪ್ರಚಾರ ನಡೆಸಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications