ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡು ವಿಧಾನಸಭೆ ಚುನಾವಣೆ; ನಟಿ ಖುಷ್ಬೂ ನಾಮಪತ್ರ ಸಲ್ಲಿಕೆ

|
Google Oneindia Kannada News

ಚೆನ್ನೈ, ಮಾರ್ಚ್ 18: ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ತಮಿಳುನಾಡು ಚುನಾವಣೆಯಲ್ಲಿ ಕಣಕ್ಕಿಳಿದಿದ್ದು, ಥೌಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಿಂದ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರೊಂದಿಗೆ ವಲ್ಲುವರ್ ಕೊಟ್ಟಂ ಬಳಿ ರೋಡ್ ಶೋದಲ್ಲಿ ಆಗಮಿಸಿ ಖುಷ್ಬೂ ನಾಮಪತ್ರ ಸಲ್ಲಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು, ಪಕ್ಷದ ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ನಟಿ ಕಮ್ ರಾಜಕಾರಣಿ ಖುಷ್ಬು ಸುಂದರ್‌ಗೆ ಬಿಜೆಪಿ ಟಿಕೆಟ್ನಟಿ ಕಮ್ ರಾಜಕಾರಣಿ ಖುಷ್ಬು ಸುಂದರ್‌ಗೆ ಬಿಜೆಪಿ ಟಿಕೆಟ್

ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಖುಷ್ಬೂ, "ನಾನು ಗೆಲ್ಲುವ ಬಗ್ಗೆ ನನಗೆ ಆತ್ಮವಿಶ್ವಾಸವಿದೆ. ಎನ್‌ಡಿಎ ಹಾಗೂ ಇತರೆ ಮಿತ್ರ ಪಕ್ಷಗಳು ನಮ್ಮೊಂದಿಗಿವೆ. ಸೆಲ್ವಂ ಸರ್ ಅವರಿಗೆ ಧನ್ಯವಾದ. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ" ಎಂದು ಹೇಳಿದ್ದಾರೆ.

Khushbu Sundar Files Nomination From Thousand Lights Constituency Tamil Nadu

ನಟ ರಜನೀಕಾಂತ್ ಅವರ ಬೆಂಬಲವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, "ಅವರು ಸಾರ್ವಜನಿಕವಾಗಿ ನನಗೆ ಬೆಂಬಲ ವ್ಯಕ್ತಪಡಿಸಬೇಕಿಲ್ಲ. ರಜನಿ ನನಗೆ ಒಳ್ಳೆಯ ಸ್ನೇಹಿತ. ಹೃದಯದಿಂದ ನನಗೆ ಆಶೀರ್ವಾದ ನೀಡುತ್ತಾರೆ" ಎಂದು ಹೇಳಿದ್ದಾರೆ.

ಡಿಎಂಕೆ ಪಕ್ಷದಿಂದ ರಾಜಕೀಯಕ್ಕೆ ಕಾಲಿಟ್ಟಿದ್ದ ಖುಷ್ಬೂ 2014ರಲ್ಲಿ ಕಾಂಗ್ರೆಸ್ ಸೇರಿಕೊಂಡಿದ್ದರು. 2020 ಅಕ್ಟೋಬರ್ ತಿಂಗಳಿನಲ್ಲಿ ಬಿಜೆಪಿ ಸೇರಿ, ಇದೀಗ ಡಿಎಂಕೆ ಅಭ್ಯರ್ಥಿ ಡಾ. ಎಳಿಲನ್ ವಿರುದ್ಧ ಕಣದಲ್ಲಿದ್ದಾರೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಬಿಜೆಪಿ ಜೊತೆ ಮೈತ್ರಿಯಲ್ಲಿದ್ದು, ಸಿಎಂ ಪಳನಿಸ್ವಾಮಿ ಎಡಪ್ಪಾಡಿಯಿಂದ ಸ್ಪರ್ಧಿಸಲಿದ್ದಾರೆ.

ತ.ನಾಡು ಅಸೆಂಬ್ಲಿ ಚುನಾವಣೆ: ಡಿಎಂಕೆ ನಾಚಿಸುವಂತಹ ಬಿಜೆಪಿ ಮೈತ್ರಿಕೂಟದ ಚುನಾವಣಾ ಪ್ರಣಾಳಿಕೆತ.ನಾಡು ಅಸೆಂಬ್ಲಿ ಚುನಾವಣೆ: ಡಿಎಂಕೆ ನಾಚಿಸುವಂತಹ ಬಿಜೆಪಿ ಮೈತ್ರಿಕೂಟದ ಚುನಾವಣಾ ಪ್ರಣಾಳಿಕೆ

ತಮಿಳುನಾಡಿನಲ್ಲಿ ಏಪ್ರಿಲ್ 6ರಂದು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 2ಕ್ಕೆ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

English summary
Actor and politician Khushbu Sundar files nomination as bjp candidate from Thousand Lights constituency for tamil nadu election
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X