ಕೂಡಂಕುಳಂ ವಿದ್ಯುತ್ ರಾಜ್ಯಕ್ಕೆ ಯಾವಾಗ ಸಿಗಲಿದೆ?
ಚೆನ್ನೈ, ಅ.22: ಕೂಡಂಕುಳಂ ಅಣು ವಿದ್ಯುತ್ ಸ್ಥಾವರದ ಮೊದಲ ಘಟಕವನ್ನು ದಕ್ಷಿಣ ವಿದ್ಯುತ್ ಜಾಲದೊಂದಿಗೆ ಬೆಸೆಯಲಾಗಿದೆ. ಭಾರತ-ರಷ್ಯ ಪರಮಾಣು ಸಹಯೋಗದಲ್ಲಿ ಕೈಗೊಳ್ಳಲಾಗಿರುವ ವಿದ್ಯುತ್ ಉತ್ಪಾದನೆ ತಮಿಳುನಾಡಿನ ಮಹತ್ವಾಕಾಂಕ್ಷೆ ಯೋಜನೆಯಾಗಿದೆ. ಕರ್ನಾಟಕ ಸೇರಿದಂತೆ ನೆರೆ ರಾಜ್ಯಗಳು ವಿದ್ಯುತ್ ಹಂಚಿಕೆ ಲೆಕ್ಕಾಚಾರ ಶುರು ಮಾಡಿಕೊಳ್ಳಬೇಕಿದೆ.
ಪ್ರಧಾನಿ ಮನಮೋಹನ್ ಸಿಂಗ್ ಅವರು ಎರಡು ದಿನಗಳ ರಷ್ಯ ಪ್ರವಾಸದಲ್ಲಿರುವ ಸಂದರ್ಭದಲ್ಲೇ ಕೂಡಂಕುಳಂ ಅಣು ವಿದ್ಯುತ್ ಸ್ಥಾವರದ ಮೊದಲ ಘಟಕವನ್ನು ದಕ್ಷಿಣ ವಿದ್ಯುತ್ ಜಾಲದೊಂದಿಗೆ ಬೆಸೆಯಲಾಗಿರುವುದು ವಿಶೇಷ. [ಮೋದಿ-ಪುಟಿನ್ ರಿಂದ ಅಣು ವಿದ್ಯುತ್ ಸ್ಥಾವರಕ್ಕೆ ಚಾಲನೆ, ಜಯಾ ಸಾಕ್ಷಿ]
ಮಾಸ್ಕೋದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ರಷ್ಯ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರು ಮಾತುಕತೆ ನಡೆಸಿ ಕೂಡಂಕುಳಂ ಅಣು ವಿದ್ಯುತ್ ಸ್ಥಾವರದಲ್ಲಿ ಇನ್ನೆರಡು ವಿದ್ಯುದುತ್ಪಾದನಾ ಘಟಕಗಳನ್ನು ಸ್ಥಾಪಿಸುವ ಭರವಸೆ ಹೊರ ಹಾಕಿದ್ದಾರೆ.
ಭಾರತ ಮತ್ತು ರಷ್ಯ ಸರ್ಕಾರಗಳ ಜಂಟಿ ಯೋಜನೆಯಾಗಿರುವ ತಮಿಳುನಾಡಿನ ಕೂಡಂಕುಳಂನ ಪರಮಾಣು ಸ್ಥಾವರಕ್ಕೆ ಇದ್ದ ಎಲ್ಲ ಅಡ್ಡಿ ಆತಂಕಗಳೂ ಕಳೆದ ಮೇ ತಿಂಗಳಿನಲ್ಲೇ ನಿವಾರಣೆಯಾಗಿತ್ತು. ಸುರಕ್ಷತೆ ಬಗ್ಗೆ ಸಾರ್ವಜನಿಕರಿಗೆ ಇದ್ದ ಆತಂಕ ದೂರವಾಗಿ, ಸ್ಥಾವರಕ್ಕೆ ಸುಪ್ರೀಂಕೋರ್ಟ್ ನ್ಯಾಯಪೀಠ ಗ್ರೀನ್ ಸಿಗ್ನಲ್ ನೀಡಿತ್ತು.

ಇದರ ಬೆನ್ನಲ್ಲೇ Atomic Energy Regulatory Board (AERB), Nuclear Power Corporation of India Ltd (NPCIL) ಹಾಗೂ Department of Atomic Energy (DAE) ಕೂಡಂಕುಳಂನ ಅಣು ಸ್ಥಾವರಕ್ಕೆ ಅಂತಿಮ ಕ್ಲಿಯರೆನ್ಸ್ ನೀಡಿತ್ತು.
ಕೂಡಂಕುಳಂನ ಮೊದಲ ಘಟಕವು ಜು.13ರಂದೇ ಕಾರ್ಯಾರಂಭಗೊಂಡಿತ್ತು. ಇದರಿಂದ ಕರ್ನಾಟಕಕ್ಕೆ ಏನು ಲಾಭ? ಏರುತ್ತಿರುವ ವಿದ್ಯುತ್ ದರ ಇಳಿಕೆ ಸಾಧ್ಯವೇ? ವಿದ್ಯುತ್ ಕ್ಷಾಮ ನೀಗುತ್ತದೆಯೇ? ಎಂಬ ಪ್ರಶ್ನೆಗಳು ಎದ್ದಿವೆ.
ಕೂಡಂಕುಳಂ ಯೋಜನೆಯಡಿ 1300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ನಿಯಮದ ಪ್ರಕಾರ ವಿದ್ಯುತ್ ಸ್ಥಾವರ ಇರುವ ರಾಜ್ಯಕ್ಕೆ ಉತ್ಪಾದನೆಯ ಶೇ 50 ರಷ್ಟು ಉತ್ಪನ್ನ ಸೇರಲಿದ್ದು, ಉಳಿದದ್ದು ಬೇಡಿಕೆ ಆಧಾರದ ಮೇಲೆ ಕೇಂದ್ರ ಸರ್ಕಾರ ಹಂಚಿಕೆ ಮಾಡಲಿದೆ. ಕರ್ನಾಟಕ 220 ಮೆ.ವ್ಯಾ ಹಾಗೂ ಕೇರಳ 133 ಮೆ.ವ್ಯಾ ವಿದ್ಯುತ್ ಬೇಡಿಕೆ ಇಟ್ಟಿದೆ.
2011 ರಿಂದ ಜೂನ್ 2012ಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಶೇ 24 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, 2013ರಲ್ಲೂ ಪರಿಸ್ಥಿತಿ ಬದಲಾಗಿಲ್ಲ. ವಿದ್ಯುತ್ ಸೋರಿಕೆ, ಪರ್ಯಾಯ ಇಂಧನ ಬಳಕೆಯತ್ತ ಸಾರ್ವಜನಿಕರು ಗಮನ ಹರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications