ಲತಾ ರಜನಿಕಾಂತ್ ಒಡೆತನದ ಶಾಲೆ ಬಂದ್
ಚೆನ್ನೈ, ಆಗಸ್ಟ್ 16: ಸೂಪರ್ ಸ್ಟಾರ್ ರಜನಿಕಾಂತ್ ಅವರ ಪತ್ನಿ ಲತಾ ಅವರ ಒಡೆತನದ ಆಶ್ರಮ ಶಾಲೆಗಳು ಮತ್ತೆ ಕೆಟ್ಟ ಕಾರಣಕ್ಕೆ ಸುದ್ದಿಯಲ್ಲಿವೆ. ಆಶ್ರಮ ಶಾಲೆಗೆ ಬೀಗ ಮುದ್ರೆ ಹಾಕಲಾಗಿದೆ ಎಂಬ ಸುದ್ದಿ ಬಂದಿದೆ.
ಕಟ್ಟಡದ ಬಾಡಿಗೆದಾರರು ಸರಿಯಾಗಿ ಬಾಡಿಗೆ ಕಟ್ಟದ ಕಾರಣ ಪಾಲಿಕೆಯವರು ಶಾಲೆಗೆ ಬೀಗ ಹಾಕಿದ್ದಾರೆ ಎಂದು ವರದಿಯಾಗಿದೆ. ಆದರೆ, ಈ ವರದಿಯನ್ನು ಶಾಲಾ ಮಂಡಳಿ ಅಲ್ಲಗೆಳೆದಿದೆ.
ಸಮಾರು 10 ಕೋಟಿ ರು ಗೂ ಅಧಿಕ ಬಾಡಿಗೆ ಮೊತ್ತ ಬಾಕಿ ಉಳಿಸಿಕೊಂಡಿದ್ದರಿಂದ ಶಾಲೆಗೆ ಬೀಗ ಬಿದ್ದಿದೆ. ಗಿಂಡಿ ಪ್ರದೇಶದಲ್ಲಿರುವ ಶಾಲೆಯ ವಿದ್ಯಾರ್ಥಿಗಳನ್ನು ವೆಲಚ್ಚೆರಿ ವಲಯದಲ್ಲಿರುವ ಮತ್ತೊಂದು ಶಾಲೆಗೆ ವರ್ಗಾಯಿಸಲಾಗಿದೆ.

ಕಳೆದ ಡಿಸೆಂಬರ್ ನಲ್ಲಿ ಈ ಶಾಲೆಯ ಶಿಕ್ಷಕ ವರ್ಗದವರು ಸಂಬಳ ಸಿಗುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು. ಇದಕ್ಕೂ ಮುನ್ನ ಶಾಲಾ ವಾಹನ ಚಾಲಕರು ಪ್ರತಿಭಟನೆ ಮಾಡಿದ್ದರು.
ಆಶ್ರಮ ಸಮೂಹ ವಿದ್ಯಾಸಂಸ್ಥೆ ಅಲ್ಲದೆ ಶಿಶುವಿಹಾರ ಮಾದರಿಯಲ್ಲಿ ಆನಂದವನ ಎಂಬ ಶಾಲೆಯನ್ನು ಲತಾ ಅವರು ನಡೆಸುತ್ತಿದ್ದಾರೆ. 1996ರಿಂದ ಶಿಕ್ಷಣ ಕ್ಷೇತ್ರದಲ್ಲಿರುವ ಲತಾ ಅವರಿಗೆ 2011ರಲ್ಲಿ ಭೂ ಕಬಳಿಕೆ ಆರೋಪದ ಮೇಲೆ ಶಾಲಾ ಕಟ್ಟಡ ಮಾಲೀಕರೊಬ್ಬರು ನೋಟಿಸ್ ಜಾರಿ ಮಾಡಿದ್ದರು. ನಂತರ ಮೆಟ್ರಿಕ್ಯುಲೇಷನ್ ಶಾಲೆಯ ನಿಯಮ ಪಾಲಿಸದೆ ನವೀಕರಣಕ್ಕೆ ಮುಂದಾಗಿದ್ದಕ್ಕೆ ಆಕ್ಷೇಪಿಸಿ ಸಿವಿಲ್ ಕೇಸ್ ಹಾಕಲಾಗಿತ್ತು.
2008ರಲ್ಲಿ 4.52 ಲಕ್ಷ ರು ಪ್ರತಿ ತಿಂಗಳಿಗೆ ಎಂಬ ದರದಂತೆ 30 ವರ್ಷಕ್ಕೆ ಬೋಗ್ಯಕ್ಕೆ ಒಪ್ಪಂದ ಮಾಡಿಕೊಂಡಿದ್ದ ವೆಂಕಟೇಶ್ವರಲು ಅವರು ಬಾಡಿಗೆ ಸಿಗದ ಕಾರಣ ಕಟ್ಟಡವನ್ನು ವಶಕ್ಕೆ ಪಡೆದುಕೊಳ್ಳಲು ಮುಂದಾಗಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Karnataka Weather: ಕಲಬುರಗಿಯಲ್ಲಿ 41ಡಿಸೆ ತಾಪಮಾನ, ಉಷ್ಣಅಲೆ ಎಚ್ಚರಿಕೆ, ಕೆಲವೆಡೆ ಮಳೆ ಸಾಧ್ಯತೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications