ಶಾಸ್ತ್ರೀಯ ಸಂಗೀತಗಾರ ಎಂ ಬಾಲಮುರಳಿಕೃಷ್ಣ ವಿಧಿವಶ
ಕರ್ನಾಟಕ ಶಾಸ್ತ್ರೀಯ ಸಂಗೀತಗಾರ, ಗಾಯಕ, ವಾಗ್ಗೇಯಕಾರ, ಡಾ. ಮಂಗಳಂಪಲ್ಲಿ ಬಾಲಮುರಳಿ ಕೃಷ್ಣ ಅವರು ಮಂಗಳವಾರ ವಿಧಿವಶರಾಗಿದ್ದಾರೆ
ಚೆನ್ನೈ, ನವೆಂಬರ್ 22: ಕರ್ನಾಟಕ ಶಾಸ್ತ್ರೀಯ ಸಂಗೀತಗಾರ, ಗಾಯಕ, ವಾಗ್ಗೇಯಕಾರ, ಡಾ. ಮಂಗಳಂಪಲ್ಲಿ ಬಾಲಮುರಳಿ ಕೃಷ್ಣ ಅವರು ಮಂಗಳವಾರ ವಿಧಿವಶರಾಗಿದ್ದಾರೆ. ಚೆನ್ನೈನ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವಾರು ಭಾಷೆಗಳಲ್ಲಿ ಬಾಲಮುರಳಿಕೃಷ್ಣ ಅವರು ತಮ್ಮ ಗಾನಸುಧೆ ಹರಿಸಿದ್ದರು. ಮೂಲತಃ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಶಂಕರಗುಪ್ತಮ್ ನವರು.

ಹೊಸ ರಾಗಗಳನ್ನು ರಚಿಸುವ ಮೂಲಕ ಸಂಗೀತ ವಿದ್ವಾನ್ ಎನಿಸಿಕೊಂಡ ಬಾಲಮುರಳಿ ಕೃಷ್ಣ ಅವರು ದೇಶ ವಿದೇಶಗಳಲ್ಲಿ ಸುಮಾರು 20ಸಾವಿರಕ್ಕೂ ಸಂಗೀತ ಕಚೇರಿಗಳನ್ನು ನೀಡಿ ಅಪಾರ ಪ್ರಮಾಣದ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಶಾಸ್ತ್ರೀಯ ಗಾಯನವಲ್ಲದೆ ಕನ್ನಡ, ತೆಲುಗು, ತಮಿಳು, ಮಲಯಾಳಂ ಚಲನಚಿತ್ರಗಳಲ್ಲೂ ಹಾಡಿದ್ದಾರೆ. ಸಂಗೀತಗಾರರಾಗಿ ಪಿಟೀಲು ವಾದನ, ಖಂಜಿರ, ಮೃದಂಗ ಬಾರಿಸುತ್ತಿದ್ದರು.
ಕನ್ನಡದಲ್ಲಿ ಸಂಧ್ಯಾರಾಗ, ಹಂಸಗೀತೆ, ಸುಬ್ಬಾಶಾಸ್ತ್ರಿ, ಮುತ್ತಿನಹಾರ ಮುಂತಾದ ಚಿತ್ರಗಳಲ್ಲಿ ಹಾಡಿದ್ದಾರೆ. ಇವರ ಗಾಯನ, ಸಂಗೀತ ಸೇವೆಯನ್ನು ಮೆಚ್ಚಿ ಭಾರತ ಸರ್ಕಾರದಿಂದ ಇವರಿಗೆ ಪದ್ಮಭೂಷಣ, ಪದ್ಮವಿಭೂಷಣ, ಕನ್ನಡ ಚಿತ್ರ ಹಂಸಗೀತೆಗಾಗಿ ಶ್ರೇಷ್ಠ ಹಿನ್ನಲೆ ಗಾಯಕ ಪ್ರಶಸ್ತಿ ಲಭಿಸಿದೆ. ಉಳಿದಂತೆ ಕಾಳಿದಾಸ್ ಸನ್ಮಾನ್, ಸಂಗೀತ ಕಲಾನಿಧಿ, ಆಂಧ್ರ ವಿವಿಯಿಂದ ಗೌರವ ಡಿ ಲಿಟ್, ವಿಸ್ಡಮ್ ಮ್ಯಾನ್ ಆಫ್ ದ ಇಯರ್ ಪ್ರಶಸ್ತಿ ಬಂದಿದೆ. ತಿರುಪತಿ ತಿರುಮಲದೇವಸ್ಥಾನ, ಶೃಂಗೇರಿ ಪೀಠ, ಮತ್ತು ನಂಜನಲ್ಲೂರಿನ ಆಂಜನೇಯಸ್ವಾಮಿ ದೇವಸ್ಥಾನದ ಆಸ್ಥಾನ ವಿದ್ವಾನ್ ಪಟ್ಟಕ್ಕೆ ಪಾತ್ರರಾದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications