LIVE: ಚೆನ್ನೈನಲ್ಲಿ ನಿಷೇಧಾಜ್ಞೆ ಶಾಲಾ, ಕಾಲೇಜುಗಳಿಗೆ ರಜೆ
ಚೆನ್ನೈನಲ್ಲಿ ಸೋಮವಾರದಂದು ಜಲ್ಲಿಕಟ್ಟು ಪರ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಚೆನ್ನೈನಐಸ್ ಹೌಸ್ ಪೊಲೀಸ್ ಠಾಣೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಮೇಲೂ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಚೆನ್ನೈ, ಜನವರಿ 23: ತಮಿಳುನಾಡಿನಲ್ಲಿ ಸೋಮವಾರದಂದು ಜಲ್ಲಿಕಟ್ಟು ಪರ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಚೆನ್ನೈನ
ಐಸ್ ಹೌಸ್ ಪೊಲೀಸ್ ಠಾಣೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಮೇಲೂ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಚೆನ್ನೈನ ಮರೀನಾ ಬೀಚಿನಲ್ಲಿದ್ದ ಪ್ರತಿಭಟನಕಾರರನ್ನು ತೆರವುಗೊಳಿಸಲು ಪೊಲೀಸರು ಮುಂದಾದ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸಲಾಗಿದೆ. ಇದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪೊಲೀಸರ ವಿರುದ್ಧ ಪ್ರತಿಭಟನಾಕಾರರು ತಿರುಗಿ ಬಿದ್ದಿದ್ದಾರೆ. ಶಾಂತ ರೀತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಏಕಾ ಏಕಿ ಹಿಂಸಾಸ್ವರೂಪ ಪಡೆದುಕೊಂಡಿದೆ.
* ಚೆನ್ನೈನಲ್ಲಿ ನಿಷೇಧಾಜ್ಞೆ ಶಾಲಾ, ಕಾಲೇಜುಗಳಿಗೆ ರಜೆ
* ಮೆಟ್ರೋ ರೈಲು ಸಂಚಾರ, ಸ್ಥಳೀಯ ರೈಲು ಸಂಚಾರ ವ್ಯತ್ಯಯ
* ಮಧುರೈನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ಆಂಭವಾಗಿದೆ.
* ಚೆನ್ನೈನಲ್ಲಿ ಪೊಲೀಸ್ ವಾಹನ ಸೇರಿ 20 ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
* ಪ್ರತಿಭಟನಾಕಾರರ ಮೇಲೆ ಪೆಟ್ರೋಲ್ ಬಾಂಬ್ ಬಳಕೆ ಮಾಡಲಾಗುತ್ತಿದೆ.
(ಒನ್ ಇಂಡಿಯಾ ಸುದ್ದಿ)

ಶಾಂತ ರೀತಿಯಿಂದ ನಡೆದಿದ್ದ ಪ್ರತಿಭಟನೆ
ಜಲ್ಲಿಕಟ್ಟು ಪರ ಶಾಂತ ರೀತಿಯಿಂದ ನಡೆದಿದ್ದ ಪ್ರತಿಭಟನೆ ಈಗ ಎಲ್ಲೆಡೆ ಹಿಂಸಾರೂಪಕ್ಕೆ ತಿರುಗಿದೆ. ಪೊಲೀಸರು ಲಾಠಿಚಾರ್ಜ್ ಮಾಡುತ್ತಿದ್ದಂತೆ, ಐಸ್ ಹೌಸ್ ಪೊಲೀಸ್ ಠಾಣೆಗೆ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ.

ಐಸ್ ಹೌಸ್ ಠಾಣೆ ಸುತ್ತಾ ಮುತ್ತಾ ಉದ್ವಿಗ್ನ
ಚೆನ್ನೈನ ಐಸ್ ಹೌಸ್ ಪೊಲೀಸ್ ಠಾಣೆ ಸುತ್ತಾ ಮುತ್ತಾ ಉದ್ವಿಗ್ನ ಪರಿಸ್ಥಿತಿ ಮುಂದುವರೆರೆದಿದೆ. ಠಾಣೆಯ ಬಳಿ ಇದ್ದ 20ಕ್ಕೂ ಅಧಿಕ ವಾಹನಗಳಿಗೆ ಬೆಂಕಿ ಇಡಲಾಗಿದೆ.

ಪೊಲೀಸರಿಂದ ಬಲ ಪ್ರಯೋಗ
ಚೆನ್ನೈನ ಮರೀನಾ ಬೀಚ್ ಗೆ ತೆರಳುವ ಎಲ್ಲಾ ರಸ್ತೆಗಳು ಬಂದ್ ಮಾಡಿರುವ ಪೊಲೀಸರು, ಭಾಗಶಃ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಆದರೆ, ಹಿಂಸಾಚಾರ ಮುಂದುವರೆದಿದ್ದು, ಪೊಲೀಸರು ಲಾಠಿಚಾರ್ಜ್, ಅಶ್ರುವಾಯು ಬಳಸಿದ್ದಾರೆ.
|
ಜನಗಣಮನ ಹಾಡಿದ ಪ್ರತಿಭಟನಾಕಾರರು
ಮರೀನಾ ಬೀಚ್ ನಲ್ಲಿದ್ದ ಪ್ರತಿಭಟನಾಕಾರರನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದ ಪೊಲೀಸರು ಕಕ್ಕಾಬಿಕ್ಕಿಯಾದ ಘಟನೆ ನಡೆಯಿತು. ಪ್ರತಿಭಟನಾಕಾರರು ಜನಗಣಮನ ಎಂದು ರಾಷ್ಟ್ರಗೀತೆ ಹಾಡುವ ಮೂಲಕ ಪೊಲೀಸರ ಕೈಕಟ್ಟಿಹಾಕಿದರು.

ತಿರುಚ್ಚಿ, ಸೇಲಂ, ಪುದುಕೋಟೈ
ತಿರುಚ್ಚಿ, ಸೇಲಂ, ಪುದುಕೋಟೈನಲ್ಲಿ ಪ್ರತಿಭಟನೆ ಮುಂದುವರಿಕೆ
ಕೊಯಮತ್ತೂರಿನಲ್ಲಿ ಪರಿಸ್ಥಿತಿ ಶಾಂತವಾಗಿದೆ : ಪೊಲೀಸ್
ಚೆನ್ನೈನ ಐಸ್ ಹೌಸ್ ಠಾಣೆಗೆ ವಿದ್ಯಾರ್ಥಿಗಳು ಬೆಂಕಿ ಇಟ್ಟಿಲ್ಲ: ಡಿಸಿಪಿ ರಾಧಾಕೃಷ್ಣ
ಸೋಮವಾರ ಸಂಜೆ 5 ಗಂಟೆಗೆ ವಿಶೇಷ ಅಧಿವೇಶನ
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications