ತಮಿಳುನಾಡಿನ 4 ಜಿಲ್ಲೆ ಸಂಪೂರ್ಣ ಲಾಕ್ ಡೌನ್
ಚೆನ್ನೈ, ಜೂನ್ 15 : ತಮಿಳುನಾಡು ಸರ್ಕಾರ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ತರಲು 4 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಜೂನ್ 19ರಿಂದ 30ರ ತನಕ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಆಗಿರುತ್ತದೆ.
Recommended Video
ಚೆನ್ನೈ, ತಿರುವಳ್ಳೂರು, ಕಾಂಚಿಪುರಂ, ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ತಮಿಳುನಾಡು ಸರ್ಕಾರ ಸೋಮವಾರ ಈ ಕುರಿತು ಆದೇಶ ಹೊರಡಿಸಿದೆ. ಅಗತ್ಯ ಸೇವೆಗಳನ್ನು ಮಾರಾಟ ಮಾಡುವ ಅಂಗಡಿಗಳು ಮಾತ್ರ ಬಾಗಿಲು ತೆರೆಯಬಹುದಾಗಿದೆ.

ಈ ನಾಲ್ಕು ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ತನಕ ಮಾತ್ರ ಅಂಗಡಿಗಳನ್ನು ತೆರೆಯಬಹುದಾಗಿದೆ ಎಂದು ಸರ್ಕಾರ ಹೇಳಿದೆ. ಪೊಲೀಸರು ತಂಡಗಳನ್ನು ರಚನೆ ಮಾಡಿಕೊಂಡು ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಲಿದ್ದಾರೆ.
ದಿನಸಿ ಅಂಗಡಿ, ತರಕಾರಿ ಅಂಗಡಿ, ಪೆಟ್ರೋಲ್ ಬಂಕ್ ಮುಂತಾದ ಅಂಗಡಿಗಳು 6 ರಿಂದ 2 ಗಂಟೆ ತನಕ ಮಾತ್ರ ತೆರೆಯಬಹುದಾಗಿದೆ. ಖಾಸಗಿ ಕಾರು ಮತ್ತು ಬೈಕ್ನಲ್ಲಿ ಜನರು 2 ಕಿ. ಮೀ. ತನಕ ಮಾತ್ರ ಸಂಚಾರ ನಡೆಸಬಹುದಾಗಿದೆ.
ಈ ನಾಲ್ಕು ಜಿಲ್ಲೆಗಳಲ್ಲಿ ಕೋವಿಡ್ - 19 ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಪಳನಿಸ್ವಾಮಿ ಸಮಿತಿಯೊಂದನ್ನು ರಚನೆ ಮಾಡಿದ್ದಾರೆ. 4 ಜಿಲ್ಲೆಗಳಲ್ಲಿ ವೈದ್ಯಕೀಯ ಸೇವೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ತಮಿಳುನಾಡಿನಲ್ಲಿ ಪ್ರಸ್ತುತ ಕೋವಿಡ್ - 19 ಸೋಂಕಿತರ ಸಂಖ್ಯೆ 44,661. ಚೆನ್ನೈ ನಗರದಲ್ಲಿ 31,896 ಪ್ರಕರಣಗಳಿವೆ. ಕೊರೊನಾ ವೈರಸ್ ಸೋಂಕು ಹೆಚ್ಚಿರುವ 4 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications