ಸಿಖ್ ದಂಗೆ, ಭೋಪಾಲ್ ದುರಂತಕ್ಕೆ ಯಾರು ನ್ಯಾಯ ಕೊಡುತ್ತಾರೆ?: ಮೋದಿ ಪ್ರಶ್ನೆ
ಚೆನ್ನೈ, ಏಪ್ರಿಲ್ 13: ದೇಶದ ಕಡು ಬಡವರಿಗೆ ವರ್ಷಕ್ಕೆ 72 ಸಾವಿರ ರೂಪಾಯಿ ನೆರವು ನೀಡುವ ಕಾಂಗ್ರೆಸ್ನ 'ನ್ಯಾಯ್' ಭರವಸೆಯನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನಡೆದ 1984ರ ಸಿಖ್ ವಿರೋಧಿ ದಂಗೆ ಮತ್ತು ಭೋಪಾಲ್ ಅನಿಲ ದುರಂತದ ಬಲಿಪಶುಗಳಿಗೆ ಯಾರು 'ನ್ಯಾಯ್' (ನ್ಯಾಯ) ಒದಗಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ತಮಿಳುನಾಡಿನ ಥೆನಿಯಲ್ಲಿ ಶನಿವಾರ ನಡೆದ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅವರು 'ನ್ಯಾಯ್' ಯೋಜನೆಯಡಿ ದೇಶದ ಶೇ 20ರಷ್ಟು ಬಡವರಿಗೆ ವಾರ್ಷಿಕ 72,000 ಕೋಟಿ ರೂ ಹಣಕಾಸಿನ ನೆರವು ನೀಡುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯನ್ನು ಪ್ರಸ್ತಾಪಿಸಿದರು.
'1984ರ ದಂಗೆಯ ಸಂತ್ರಸ್ತರಿಗೆ ಯಾರು ನ್ಯಾಯ ಕೊಡುತ್ತಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ನಾನು ಕೇಳಲು ಬಯಸಿದ್ದೇನೆ. ಒಂದು ಕುಟುಂಬ ಆ ನಾಯಕರನ್ನು ಇಷ್ಟಪಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ನಿಂದ ವಜಾಗೊಂಡ ಎಂಜಿಆರ್ ಅವರಂತಹ ಮಹಾನ್ ವ್ಯಕ್ತಿಗಳ ಸರ್ಕಾರಕ್ಕೆ ಯಾರು ನ್ಯಾಯ ಕೊಡುತ್ತಾರೆ? ದೇಶದ ಮೊದಲ ಪರಿಸರೀಯ ದುರ್ಘಟನೆಯಾದ ಭೋಪಾಲ್ ಅನಿಲ್ ದುರಂತದ ಬಲಿಪಶುಗಳಿಗೆ ಯಾರು ನ್ಯಾಯ ಕೊಡುತ್ತಾರೆ? ಇದು ಕೂಡ ಕಾಂಗ್ರೆಸ್ ಆಡಳಿತಾವಧಿಯಲ್ಲಿಯೇ ನಡೆದಿದ್ದು' ಎಂದು ಮೋದಿ ವಾಗ್ದಾಳಿ ನಡೆಸಿದರು.

'ಈಗ ನ್ಯಾಯ ಸಿಕ್ಕಿತು' ಎಂಬ ಕಾಂಗ್ರೆಸ್ ಚುನಾವಣಾ ಪ್ರಚಾರದ ಟ್ಯಾಗ್ಲೈನ್ಅನ್ನು ಪರಿಹಾಸ್ಯ ಮಾಡಿದ ಅವರು, ಕಳೆದ 60 ವರ್ಷಗಳಿಂದ ಕಾಂಗ್ರೆಸ್ ತಾನು ಅನ್ಯಾಯ ಎಸಗಿದ್ದನ್ನು ಈ ಮೂಲಕ ಒಪ್ಪಿಕೊಳ್ಳುತ್ತಿದೆ' ಎಂದರು.
'ಕಾಂಗ್ರೆಸ್ ಮತ್ತು ಅಪ್ರಾಮಾಣಿಕತೆ ಇಬ್ಬರೂ ಅತ್ಯುತ್ತಮ ಗೆಳೆಯರು. ಆದರೆ, ಕೆಲವೊಮ್ಮೆ ಅಪ್ಪಿತಪ್ಪಿ ಅವರು ಸತ್ಯ ಹೇಳಿಬಿಡುತ್ತಾರೆ. ಈಗ ಅವರು ಹೇಳುತ್ತಿದ್ದಾರೆ, 'ಈಗ ನ್ಯಾಯ ಸಿಕ್ಕಿತು' ಎಂದು. ಅವರಿಗೆ ಅದರ ಉದ್ದೇಶ ಇರದಿದ್ದರೂ ಇದುವರೆಗೂ ಅವರು ಅನ್ಯಾಯ ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ. ಇದರ ಅರ್ಥ ಅವರು 60ರಷ್ಟು ಸುದೀರ್ಘ ಸಮಯ ದೇಶಕ್ಕೆ ಅನ್ಯಾಸ ಎಸಗಿದ್ದಾರೆ ಎಂಬುದನ್ನು ಒಪ್ಪಿಕೊಂಡಿದ್ದಾರೆ' ಎಂದು ಟೀಕಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications