Get Updates
Get notified of breaking news, exclusive insights, and must-see stories!

ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆ ಸುತ್ತಮುತ್ತ ಬಿಗಿಭದ್ರತೆ

Recommended Video

      ಎಂ ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭೀರ | ಚೆನ್ನೈ ನ ಕಾವೇರಿ ಆಸ್ಪತ್ರೆಗೆ ದಾಖಲು | Oneindia Kannada

      ಚೆನ್ನೈ, ಜುಲೈ 30: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ, ಅವರು ಚಿಕಿತ್ಸೆಗೆ ಧನಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಚೆನ್ನೈನ ಕಾವೇರಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

      ಡಿಎಂಕೆ ಮುಖಂಡರೂ ಆಗಿರುವ ಎಂ ಕರುಣಾನಿಧಿ ಅವರು ಜ್ವರ ಮತ್ತು ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದರು. ಅವರನ್ನು ಜು.28 ರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಡಿಮೆ ರಕ್ತದೊತ್ತಡದಿಂದಾಗಿ ಅವರ ಆರೋಗ್ಯ ಏರುಪೇರಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ತದೊತ್ತಡ ಸದ್ಯಕ್ಕೆ ಸ್ಥಿರವಾಗಿದ್ದು, ಅವರು ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ.

      ಕರುಣಾನಿಧಿ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆ ಮುಂದೆ ಜಮಾಯಿಸಿರುವ ಅವರ ಅಭಿಮಾನಿಗಳು ಕಳೆದ ಮೂರು ದಿನಗಳಿಂದ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ. 'ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ, ಅವರ ಆರೋಗ್ಯ ಸ್ಥಿರವಾಗಿದೆ' ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರೂ, ಆಸ್ಪತ್ರೆ ಮುಂದೆ ನೂಕುನುಗ್ಗಲು ಹೆಚ್ಚಾಗಿದೆ. ಆಸ್ಪತ್ರೆ ಮುಂದೆ ಅಭಿಮಾನಿಗಳು ಜಮಾಯಿಸಿರುವ ಹಿನ್ನೆಲೆಯಲ್ಲಿ ಸುತ್ತ ಮುತ್ತ ಬಿಗಿಭದ್ರತೆ ಏರ್ಪಡಿಸಲಾಗಿದೆ.

      M Karunanidhi is being monitored by doctors in Kauvery hospital Chennai

      ಕೆಲವು ಸುಳ್ಳು ವದಂತಿಗಳಿಗೆ ಕಿವಿಗೊಟ್ಟು ಆಸ್ಪತ್ರೆಯ ಬ್ಯಾರಿಕೇಡ್ ಗಳನ್ನು ಮುರಿದು ನುಗ್ಗಲು ಪ್ರಯತ್ನಿಸಿದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆಯೂ ನಡೆದಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+