ತಮಿಳುನಾಡು ಸಿಎಂ ಪಳನಿಸ್ವಾಮಿ ವಿರುದ್ಧ ಸಿಬಿಐ ತನಿಖೆ
ಚೆನ್ನೈ, ಅಕ್ಟೋಬರ್ 12: ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ವಿರುದ್ಧ ಸಿಬಿಐ ತನಿಖೆಗೆ ಮದ್ರಾಸ್ ಹೈಕೋರ್ಟ್ ಇಂದು (ಅಕ್ಟೋಬರ್ 12) ಆದೇಶ ನೀಡಿದೆ. ರಾಜ್ಯ ಹೆದ್ದಾರಿ ಇಲಾಖೆ ಗುತ್ತಿಗೆ ಹಂಚಿಕೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಪಳನಿಸ್ವಾಮಿ ಅವರು ಆರೋಪಿಯಾಗಿದ್ದಾರೆ.
ರಾಜ್ಯ ಹೆದ್ದಾರಿ ಖಾತೆ ಸಚಿವಾಲಯದ ಜವಾಬ್ದಾರಿಯನ್ನು ಹೊಂದಿರುವ ಪಳನಿಸ್ವಾಮಿ ಅವರು ಸ್ವಜನಪಕ್ಷಪಾತ, ಅಧಿಕಾರ ದುರ್ಬಳಕೆ, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಹೆದ್ದಾರಿ ಕಾಮಗಾರಿಯ ಗುತ್ತಿಗೆ ಪ್ರಕಿಯೆ ಪಾರದರ್ಶಕವಾಗಿಲ್ಲ ಎಂದು ಆರೋಪಿಸಿ ಪ್ರತಿಪಕ್ಷ ಡಿಎಂಕೆ ದೂರು ಸಲ್ಲಿಸಿತ್ತು.
ಅಕ್ಟೋಬರ್ 09ರಂದು ಭ್ರಷ್ಟಾಚಾರ ನಿಗ್ರಹ ದಳದ ನಿರ್ದೇಶನಾಲಯ(DVAC)ವು ಮದ್ರಾಸ್ ಹೈಕೋರ್ಟಿಗೆ ಈ ಕೇಸಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಿತ್ತು. ಆದರೆ, ಆ ವರದಿಯಲ್ಲಿ ಸಿಎಂ ಪಳನಿಸ್ವಾಮಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿತ್ತು.

ಬಹುಕೋಟಿ ಗುತ್ತಿಗೆ ಹಗರಣದಲ್ಲಿ ಪಳನಿಸ್ವಾಮಿ ವಿರುದ್ಧ ತನಿಖೆ ನಡೆಸುವಂತೆ DVAC ಗೆ ಸೂಚಿಸುವಂತೆ ಕೋರಿ ಮದ್ರಾಸ್ ಹೈಕೋರ್ಟಿಗೆ ಡಿಎಂಕೆ ಅರ್ಜಿ ಹಾಕಿತ್ತು. ಆದರೆ, ಡಿವಿಎಸಿ ಇತ್ತೀಚೆಗೆ ಸಲ್ಲಿಸಿದ ವರದಿಯಲ್ಲಿ ಪಳನಿಸ್ವಾಮಿ ವಿರುದ್ಧ ಸಾಕ್ಷ್ಯಗಳಿರಲಿಲ್ಲ.
ಪಳನಿಗೆ ಕಂಟಕವಾದ ಐಟಿ ದಾಳಿ: ಕಳೆದ ಜುಲೈ ತಿಂಗಳಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ಗುತ್ತಿಗೆದಾರ, ಎಸ್ ಪಿ ಕೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಹಾಗೂ ಕೋ ಎಕ್ಸ್ ಪ್ರೆಸ್ ವೇ ಪೈ ಲಿ ಮಾಲೀಕ ನಾಗರಾಜನ್ ಸೆಯ್ಯದೊರೈ ಗೆ ಸೇರಿದ ಅಪಾರ ಆಸ್ತಿ ಪಾಸ್ತಿ ಜಪ್ತಿ ಮಾಡಲಾಗಿತ್ತು. ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ನಾಗರಾಜನ್ ಇಬ್ಬರು ಆಪ್ತರು ಎಂಬುದು ಗುಟ್ಟಾದ ವಿಷಯವಲ್ಲ.
ಸುಮಾರು 170 ಕೊಟಿ ರು ನಗದು, 100ಕೊಟಿ ರು ಗೂ ಅಧಿಕ ಮೌಲ್ಯದ ಚಿನ್ನಾಭರಣ ಪತ್ತೆಯಾಗಿತ್ತು.
ಹೀಗಾಗಿ, ಡಿಎಂಕೆ ಹೆಚ್ಚುವರಿ ಮನವಿ ಸಲ್ಲಿಸಿ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿತ್ತು. ಡಿಎಂಕೆ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್, ಒಂದು ವಾರದಲ್ಲಿ ಇಲ್ಲಿ ತನಕದ ವರದಿಯನ್ನು ಸಿಬಿಐಗೆ ವರ್ಗಾಯಿಸುವಂತೆ ಡಿವಿಎಸಿಗೆ ಕೋರ್ಟ್ ಸೂಚಿಸಿದೆ. ತನಿಖೆ ಕೈಗೊಂಡು ಮೊದಲ ವರದಿ ಸಲ್ಲಿಸಲು ಸಿಬಿಐಗೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications