ಕುಂಭಕೋಣಂ ಶಾಲೆ ಅಗ್ನಿ ದುರಂತ ಪ್ರಕರಣದ ಆರೋಪಿಗಳು ದೋಷಮುಕ್ತ
ಕುಂಭಕೋಣಂ ಶಾಲೆ ಅಗ್ನಿ ದುರಂತ ಪ್ರಕರಣದ ಎಲ್ಲಾ ಆರೋಪಿಗಳು ದೋಷಮುಕ್ತ. ಮದ್ರಾಸ್ ಹೈಕೋರ್ಟ್ ನಿಂದ ತೀರ್ಪು. 2004ರಲ್ಲಿ ನಡೆದಿದ್ದ ಪ್ರಕರಣ.
ಚೆನ್ನೈ, ಆಗಸ್ಟ್ 11: 2004ರಲ್ಲಿ ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಕುಂಭಕೋಣಂನ ಶಾಲೆಯ ಬೆಂಕಿ ಅನಾಹುತ ಪ್ರಕರಣದ ಎಲ್ಲಾ 10 ಆರೋಪಿಗಳನ್ನು ಮದ್ರಾಸ್ ಹೈಕೋರ್ಟ್ ದೋಷ ಮುಕ್ತಗೊಳಿಸಿದೆ.
ಪ್ರಕರಣ ಕುರಿತಂತೆ ಅಂತಿಮ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿಗಳಾದ ಎಂ. ಸತ್ಯನಾರಾಯಣನ್ ಹಾಗೂ ವಿ.ಎಂ. ವೇಲುಮಣಿ ಅವರುಳ್ಳ ನ್ಯಾಯಪೀಠ ಎಲ್ಲಾ ಆರೋಪಿಗಳನ್ನೂ ಬಿಡುಗಡೆ ಮಾಡುವಂತೆ ಆದೇಶಿಸಿದೆ.

2004ರ ಜುಲೈ 16ರಂದು, ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂನಲ್ಲಿದ್ದ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿ ಅವಗಢ ಸಂಭವಿಸಿತ್ತು. ಇದರಲ್ಲಿ 94 ಮಕ್ಕಳು ಸಾವನ್ನಪ್ಪಿದ್ದರು.
ಈ ಮೂಲಕ, ಇದೇ ಪ್ರಕರಣದ ವಿಚಾರಣೆಯಲ್ಲಿ ಕೆಳ ಹಂತದ ನ್ಯಾಯಾಲಯ ಈ ಆರೋಪಿಗಳಿಗೆ ವಿಧಿಸಿದ್ದ ಕಾರಾಗೃಹ ವಾಸದ ಶಿಕ್ಷೆಯನ್ನು ಅದು ತಳ್ಳಿಹಾಕಿದೆ.

ಇನ್ನು, ಇದೇ ಪ್ರಕರಣದಲ್ಲಿ ಪ್ರಮುಖ ಆರೋಪಿಯೆಂದು ಪರಿಗಣಿಸಲ್ಪಟ್ಟಿದ್ದ ಶಾಲೆಯ ಸಂಸ್ಥಾಪಕರ ಪತ್ನಿಯು ವಿಚಾರಣೆ ನಡೆಯುತ್ತಿರುವ ಹಂತದಲ್ಲೇ ಮರಣ ಹೊಂದಿರುವುದರಿಂದಾಗಿ ಅವರ ವಿರುದ್ಧದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications