ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ತಮಿಳುನಾಡು ಸಿಎಂ ಪಳನಿಸ್ವಾಮಿಗೆ ತಾತ್ಕಾಲಿಕ ರಿಲೀಫ್
ಚೆನ್ನೈ, ಸೆಪ್ಟೆಂಬರ್ 20: ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದಾರೆ.
ನ್ಯಾಯಾಲಯದ ಮೊರೆ ಹೋದ ಟಿಟಿವಿ ದಿನಕರನ್ ಬಣದ ಶಾಸಕರು
ಒಂದೆಡೆ ವಿಶ್ವಾಸಮತ ಯಾಚನೆಗೆ ನೀಡಿದ್ದ ತಡೆಯನ್ನು ಮದ್ರಾಸ್ ಹೈಕೋರ್ಟ್ ಮುಂದುವರಿಸಿದೆ. ಇನ್ನೊಂದೆಡೆ 18 ಟಿಟಿವಿ ದಿನಕರನ್ ಬಣದ ಶಾಸಕರ ಅನರ್ಹತೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಹೀಗಾಗಿ ಸದ್ಯ್ಕಕೆ ಎಡಪ್ಪಾಡಿ ಪಳನಿಸ್ವಾಮಿ ನಿರಾಳರಾಗಿದ್ದರೆ, ಹೈಕೋರ್ಟ್ ಮೆಟ್ಟಿಲೇರಿ ಟಿಟಿವಿ ದಿನಕರನ್ ಮುಖಭಂಗ ಅನುಭವಿಸಿದ್ದಾರೆ.
ಮುಂದಿನ ಆದೇಶದವರೆಗೆ ತಮಿಳುನಾಡಿನಲ್ಲಿ ವಿಶ್ವಾಸಮತ ಯಾಚನೆ ನಡೆಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದೆ.
ಇನ್ನು ಟಿಟಿವಿ ದಿನಕರನ್ ಬಣದ 18 ಶಾಸಕರ ಅನರ್ಹತೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೆ, ಈ 18 ಶಾಸಕರ ಕ್ಷೇತ್ರಗಳಿಗೆ ಚುನಾವಣಾ ಅಧಿಸೂಚನೆ ಹೊರಡಿಸದಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಅಕ್ಟೋಬರ್ 4ಕ್ಕೆ ಮುಂದೂಡಿದೆ.
Comments
aiadmk tamil nadu high court palanisamy panneerselvam ಎಐಎಡಿಎಂಕೆ ತಮಿಳುನಾಡು ಹೈಕೋರ್ಟ್ ಪಳನಿಸ್ವಾಮಿ ಪನ್ನೀರ್ ಸೆಲ್ವಂ
English summary
Madras High Court extends stay order on floor test in Tamil Nadu Assembly until further orders. And also Madras HC directs no election notification to seats of 18 disqualified MLAs. But, no stay on the disqualification of MLAs.
Story first published: Wednesday, September 20, 2017, 14:03 [IST]