ಕೊರೊನಾ: ಜನರ ಭಯವೇ ನಿಮಗೆ ಬಂಡವಾಳ, ಹೈಕೋರ್ಟ್ ಛೀಮಾರಿ: ಪತಂಜಲಿಗೆ ಭಾರೀ ಹಿನ್ನಡೆ
ಚೆನ್ನೈ, ಆ 7: "ಕೊರೊನಾ ವೈರಸ್ ನಿಂದ ಸಾರ್ವಜನಿಕರು ಭಯಭೀತರಾಗಿರುವುದೇ ನಿಮಗೆ ಬಹುದೊಡ್ಡ ಬಂಡವಾಳ" ಎಂದು ಮದರಾಸು ಹೈಕೋರ್ಟ್, ಬಾಬಾ ರಾಮದೇವ್ ಒಡೆತನದ ಪತಂಜಲಿ ಸಂಸ್ಥೆಗೆ ಛೀಮಾರಿ ಹಾಕಿದೆ.
Recommended Video
ಕೊರೊನಾ ವೈರಸ್ ವಿರುದ್ಧ ಹೋರಾಡಲು 'ಕೊರೊನಿಲ್' ಎನ್ನುವ ಔಷಧವನ್ನು ಪತಂಜಲಿ ಸಂಸ್ಥೆ ಡೆಹ್ರಾಡೂನ್ ನಲ್ಲಿ ಜೂನ್ 22ರಂದು ಬಿಡುಗಡೆ ಮಾಡಿತ್ತು. "ಕೊರೊನಾ ಸೋಂಕಿಗೆ ಮೊದಲ ಔಷಧ ಕೊರೊನಿಲ್ ಅನ್ನು ಸಂಪೂರ್ಣ ವೈಜ್ಞಾನಿಕ ದಾಖಲೆಗಳೊಂದಿಗೆ ಬಿಡುಗಡೆ ಮಾಡುತ್ತಿದ್ದೇವೆ" ಎಂದು ಸಂಸ್ಥೆಯ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ಹೇಳಿದ್ದರು.
ಕೊರೊನಿಲ್, ಕೊರೊನಾ ಕಾಯಿಲೆಯನ್ನು ಗುಣಪಡಿಸುವ ಲಸಿಕೆ ಎಂದು ಪ್ರಚಾರ ಮಾಡುವುದನ್ನು ಮತ್ತು ಟ್ರೇಡ್ ಮಾರ್ಕ್ ಆಗಿ ಬಳಸುವುದನ್ನು ಮದರಾಸು ಹೈಕೋರ್ಟ್ ನಿಷೇಧಿಸಿದೆ. ಆ ಮೂಲಕ, ಪತಂಜಲಿ ಸಂಸ್ಥೆಗೆ ಬಹುದೊಡ್ಡ ಹಿನ್ನಡೆಯಾಗಿದೆ.
"ಕೊವಿಡ್ 19 ರೋಗದ ವಿರುದ್ಧ ಹೋರಾಡಲು ಮೊದಲ ಬಾರಿಗೆ ಆಯುರ್ವೇದದಲ್ಲಿ ಔಷಧಿ ಕಂಡುಹಿಡಿದಿದ್ದೇವೆ. ಮೂರು ದಿನಗಳಲ್ಲಿ ಶೇ.69ರಷ್ಟು ಗುಣಮುಖರಾಗುತ್ತಾರೆ. 7 ದಿನಗಳಲ್ಲಿ ಶೇ.100ರಷ್ಟು ರೋಗಿಗಳು ಗುಣಮುಖರಾಗಲಿದ್ದಾರೆ" ಎಂದು ಬಾಬಾ ರಾಮ್ದೇವ್ ಹೇಳಿಕೊಂಡಿದ್ದರು.

ಮದರಾಸು ಹೈಕೋರ್ಟ್ ಛೀಮಾರಿ
ಪತಂಜಲಿ ಸಂಸ್ಥೆ ಮತ್ತು ದಿವ್ಯ ಯೋಗ ಮಂದಿರ ಟ್ರಸ್ಟ್ ಮೇಲೆ ಅಸಮಾಧಾನ ವ್ಯಕ್ತ ಪಡಿಸಿರುವ ಮದರಾಸು ಹೈಕೋರ್ಟ್, "ಕೊರೊನಾ ವೈರಸ್ ನಿಂದ ಜನರು ಭಯಭೀತರಾಗಿದ್ದಾರೆ. ಈ ಪರಿಸ್ಥಿತಿಯ ದುರುಪಯೋಗ ಪಡೆದುಕೊಂಡು, ಲಾಭದ ಉದ್ದೇಶದಿಂದ ಕೊರೊನಿಲ್ ಲಸಿಕೆಯನ್ನು ಮಾರಾಟ ಮಾಡುತ್ತೀದ್ದೀರಾ" ಎಂದು ನ್ಯಾಯಾಲಯ ಛೀಮಾರಿ ಹಾಕಿದೆ.

ಪತಂಜಲಿ ಸಂಸ್ಥೆ ಮತ್ತು ದಿವ್ಯ ಯೋಗ ಮಂದಿರ ಟ್ರಸ್ಟ್
ಎರಡೂ ಸಂಸ್ಥೆಗಳಿಗೆ ಹತ್ತು ಲಕ್ಷ ರೂಪಾಯಿ ದಂಡ ವಿಧಿಸಿರುವ ಹೈಕೋರ್ಟ್, "ಕೊರೊನಿಲ್ ಲಸಿಕೆಯಿಂದ ಕೊರೊನಾ ಕಾಯಿಲೆಯಿಂದ ಗುಣಮುಖರಾಗುತ್ತಾರೆ ಎನ್ನುವುದು ಎಲ್ಲೂ ರುಜುವಾತು ಆಗಿಲ್ಲ. ಇದೊಂದು, ಜನರ ರೋಗ ನಿರೋಧಕ ಶಕ್ತಿಯನ್ನು ವೃದ್ದಿಸುವ ಲಸಿಕೆಯಷ್ಟೇ"ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಕೊರೊನಿಲ್ ಲಸಿಕೆ
ಚೆನ್ನೈ ಮೂಲದ ಆರುದ್ರಾ ಇಂಜಿನಿಯರ್ಸ್ ಪ್ರೈ.ಲಿ. ಸಲ್ಲಿಸಿರುವ ಅರ್ಜಿಯ ವಿಚಾರಣೆಯ ವೇಳೆ ಮೇಲಿನ ಅಭಿಪ್ರಾಯಕ್ಕೆ ಬಂದಿರುವ ನ್ಯಾಯಾಲಯ, "ಕೊರೊನಿಲ್ ಲಸಿಕೆಯ ಟ್ರೇಡ್ ಮಾರ್ಕ್ 1993ರಲ್ಲಿ ಆ ಸಂಸ್ಥೆಯ ಹೆಸರಿನಲ್ಲಿ ನೊಂದಾಯಿತವಾಗಿರುವುದು. ಕೊರೋನಿಲ್ -92ಬಿ, ಕೈಗಾರಿಕಾ ಬಳಕೆಗಾಗಿ ಭಾರೀ ಯಂತ್ರೋಪಕರಣಗಳು ಮತ್ತು ರಾಸಾಯನಿಕ ಸಿದ್ಧತೆಗಳನ್ನು ಸ್ವಚ್ಚಗೊಳಿಸುವ ಆಮ್ಲ ಪ್ರತಿರೋಧಕ ಉತ್ಪನ್ನವಾಗಿದೆ"ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಆದ್ಯಾರ್ ಕ್ಯಾನ್ಸರ್ ಸಂಸ್ಥೆ
ಬಾಬಾ ರಾಮದೇವ್ ಒಡೆತನದ ಪತಂಜಲಿ ಸಂಸ್ಥೆ ಮತ್ತು ದಿವ್ಯ ಯೋಗ ಮಂದಿರ ಟ್ರಸ್ಟ್, ತಲಾ ಐದು ಲಕ್ಷ ರೂಪಾಯಿಯನ್ನು ಆದ್ಯಾರ್ ಕ್ಯಾನ್ಸರ್ ಸಂಸ್ಥೆ ಮತ್ತು ಸರಕಾರೀ ಯೋಗ ಕಾಲೇಜಿಗೆ ಪಾವತಿಸುವಂತೆ ಮತ್ತು ಕೊರೊನಿಲ್ ಹೆಸರನ್ನು ಬಳಸದಂತೆ, ನ್ಯಾ. ಸಿ.ವಿ.ಕಾರ್ತಿಕೇಯನ್ ಆದೇಶ ಹೊರಡಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications