ವಿಧಾನಸಭೆಯಲ್ಲಿ ಗುಟ್ಕಾ ಗಲಾಟೆ: ಸ್ಟಾಲಿನ್ ಹಾಗೂ ಡಿಎಂಕೆ ಶಾಸಕರಿಗೆ ರಿಲೀಫ್
ಚೆನ್ನೈ, ಫೆಬ್ರವರಿ 10: ತಮಿಳುನಾಡು ವಿಧಾನಸಭೆಯೊಳಗೆ 2017ರಲ್ಲಿ ಗುಟ್ಕಾ ಪ್ಯಾಕೆಟ್ಗಳನ್ನು ತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಮತ್ತು ಪಕ್ಷದ ಇತರೆ ಶಾಸಕರ ವಿರುದ್ಧದ ಹಕ್ಕುಚ್ಯುತಿ ನಿರ್ಣಯದ ಹೊಸ ನೋಟಿಸ್ಗಳನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ತಮಿಳುನಾಡು ವಿಧಾನಸಭೆಯ ಹಕ್ಕುಚ್ಯುತಿ ನಿರ್ಣಯ ಸಮಿತಿಯು 2020ರ ಸೆಪ್ಟೆಂಬರ್ನಲ್ಲಿ ಹೊರಡಿಸಿದ ಹೊಸ ನೋಟಿಸ್ಗಳನ್ನು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಪುಷ್ಪಾ ಸತ್ಯನಾರಾಯಣ ಬುಧವಾರ ರದ್ದುಗೊಳಿಸಿದರು.
2013ರಲ್ಲಿ ತಮಿಳುನಾಡು ಸರ್ಕಾರವು ಗುಟ್ಕಾ ಉತ್ಪಾದನೆ, ಸಂಗ್ರಹ, ಸಾಗಾಣಿಕೆ ಮತ್ತು ಮಾರಾಟದ ಮೇಲೆ ನಿಷೇಧ ವಿಧಿಸಿ ಆದೇಶಿಸಿತ್ತು. 2017ರ ಆಗಸ್ಟ್ 28ರಂದು ವಿರೋಧಪಕ್ಷದ ನಾಯಕ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹಾಗೂ ಪಕ್ಷದ ಇತರೆ 20 ಶಾಸಕರು ವಿಧಾನಸಭೆಯೊಳಗೆ ಗುಟ್ಕಾ ಪ್ಯಾಕೇಟ್ಗಳನ್ನು ತಂದಿದ್ದರು. ಅದನ್ನು ಸರ್ಕಾರದ ಮುಂದೆ ಪ್ರದರ್ಶಿಸಿ, ನಿಷೇಧಿತ ವಸ್ತುಗಳು ಎಷ್ಟು ಸುಲಭವಾಗಿ ಕೈಗೆ ಎಟುಕುತ್ತಿವೆ ಎಂದು ಸರ್ಕಾರವನ್ನು ಟೀಕಿಸಿದ್ದರು.

ನಿಷೇಧಿತ ವಸ್ತುಗಳನ್ನು ಪವಿತ್ರ ಸದನದೊಳಗೆ ತಂದು ಪ್ರದರ್ಶಿಸಿದ್ದು ಅನುಚಿತ ವರ್ತನೆ ಎಂದು ಸ್ಟಾಲಿನ್ ಹಾಗೂ ಇತರೆ ಶಾಸಕರ ಮೇಲೆ ವಿಧಾನಸಭೆ ಹಕ್ಕುಚ್ಯುತಿ ನಿರ್ಣಯದ ನೋಟಿಸ್ ಜಾರಿ ಮಾಡಿತ್ತು. ಇದರ ವಿರುದ್ಧ ಶಾಸಕರು ಹೈಕೋರ್ಟ್ ಮೊರೆ ಹೋಗಿದ್ದರು. ಇಬ್ಬರು ಶಾಸಕರಾದ ಜೆ ಅಣ್ಬಳಗನ್ ಮತ್ತು ಕೆಪಿಪಿ ಸಾಮಿ ಅವರು ಈ ಅವಧಿಯಲ್ಲಿ ನಿಧನರಾಗಿದ್ದಾರೆ. 2018ರಲ್ಲಿ ಹೈಕೋರ್ಟ್ ಈ ಹಕ್ಕುಚ್ಯುತಿ ನಿರ್ಣಯಕ್ಕೆ ತಡೆ ನೀಡಿತ್ತು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications