ವಾಟ್ಸಾಪ್ ಗ್ರೂಪ್ ಅಡ್ಮಿನ್ಗಳಿಗೆ ಶುಭ ಸುದ್ದಿ ಕೊಟ್ಟ ಹೈಕೋರ್ಟ್
ಚೆನ್ನೈ, ಡಿಸೆಂಬರ್ 27: ಅತ್ಯಂತ ಜನಪ್ರಿಯ ಚಾಟಿಂಗ್ ಅಪ್ಲಿಕೇಷನ್ ವಾಟ್ಸಾಪ್ ದುರ್ಬಳಕೆಯಾಗುತ್ತಿದೆ. ಸುರಕ್ಷತಾ ನಿಯಮ ಮೀರಿ ವಾಟ್ಸಾಪ್ ಗ್ರೂಪಿನ ಸದಸ್ಯನೊಬ್ಬ ಮಾಡುವ ಪ್ರಮಾದದಿಂದ ಗ್ರೂಪಿನ ಅಡ್ಮಿನ್ ಶಿಕ್ಷಾರ್ಹನಾಗುತ್ತಿದ್ದಾನೆ ಎಂಬ ಕೂಗು ಕೇಳಿ ಬಂದಿತ್ತು. ಇದಕ್ಕೆ ಬಾಂಬೆ ಹೈಕೋರ್ಟ್ ಈ ಮುಂಚೆ ಪರಿಹಾರ ಸೂಚಿಸಿತ್ತು. ಸದಸ್ಯರು ಮಾಡುವ ಪೋಸ್ಟ್ಗಳಿಗೆ ವಾಟ್ಸಾಪ್ ಗ್ರೂಪ್ ಅಡ್ಮಿನ್ ಅವರನ್ನು ಹೊಣೆ ಮಾಡುವುದು ಸರಿಯಲ್ಲ ಎಂಬ ಬಾಂಬೆ ಹೈಕೋರ್ಟ್ ತೀರ್ಪನ್ನು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಇತ್ತೀಚೆಗೆ ಪುನರುಚ್ಚರಿಸಿದೆ.
ಆರ್. ರಾಜೇಂದ್ರನ್ ವಿ ಮತ್ತು ಪೊಲೀಸ್ ಇನ್ಸ್ಪೆಕ್ಟರ್ ನಡುವಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಇತ್ತೀಚೆಗೆ ಆದೇಶ ನೀಡಿದ್ದು, ನಿರ್ದಿಷ್ಟ ಶಿಕ್ಷಾ ನಿಯಮಾವಳಿಗಳ ಅನುಪಸ್ಥಿತಿಯಲ್ಲಿ ಸದಸ್ಯರು ಮಾಡುವ ಪೋಸ್ಟ್ಗಳಿಗೆ ವಾಟ್ಸಾಪ್ ಗ್ರೂಪ್ ಅಡ್ಮಿನ್ ಅವರನ್ನು ಹೊಣೆ ಮಾಡುವುದು ದೋಷಪೂರಿತ ಹೊಣೆಗಾರಿಕೆಗೆ ಕಾರಣವಾಗಲಿದೆ ಎಂದಿದೆ.
ಗ್ರೂಪ್ನಲ್ಲಿ ಪೋಸ್ಟ್ ಮಾಡಿದ ಆಕ್ಷೇಪಾರ್ಹ ಸಂದೇಶಗಳಿಗೆ ಸಂಬಂಧಿಸಿದಂತೆ ಅದರ ನಿರ್ವಾಹಕರು (ಅಡ್ಮಿನ್) ಬೇರೆ ಯಾವುದೇ ಪಾತ್ರ ನಿರ್ವಹಿಸಿಲ್ಲ ಎಂದು ಕಂಡುಬಂದರೆ ಅವರನ್ನು ಆರೋಪಪಟ್ಟಿಯಿಂದ ತೆಗೆದುಹಾಕಬೇಕು ಎಂದು ತಿಳಿಸಿದೆ. ಈ ಸಂಬಂಧ ಕಿಶೋರ್ ಮತ್ತು ಮಹಾರಾಷ್ಟ್ರ ಸರ್ಕಾರ ನಡುವಣ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ತೀರ್ಪು ಅವಲಂಬಿಸಿ ನ್ಯಾ. ಜಿ ಆರ್ ಸ್ವಾಮಿನಾಥನ್ ಆದೇಶ ನೀಡಿದರು. ಆದರೆ, ಒಂದು ವೇಳೆ ಅಡ್ಮಿನ್ಗಳ ಪಾತ್ರ ಇರುವುದು ಕಂಡು ಬಂದರೆ, ಹಾಗೂ ಈ ಬಗ್ಗೆ ಅರ್ಜಿದಾರರು ಮಾಹಿತಿ ಕಲೆ ಹಾಕಿದರೆ ಆಗ ಅವರು ಪ್ರಕರಣ ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಮುದಾಯಗಳ ನಡುವೆ ಕೆಟ್ಟ ಭಾವನೆ ಮೂಡಿಸುವಂತಹ ಸಂದೇಶಗಳನ್ನು ಗ್ರೂಪ್ನಲ್ಲಿ ಹಂಚಿಕೊಳ್ಳಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಗುಂಪಿನ ಅಡ್ಮಿನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ಈ ಆದೇಶ ನೀಡಿದೆ.
ಅರ್ಜಿದಾರರು ಕೇವಲ ಗ್ರೂಪ್ ಅಡ್ಮಿನ್ ಆಗಿದ್ದು, ಗ್ರೂಪ್ನಲ್ಲಿ ಸದಸ್ಯರು ಪೋಸ್ಟ್ ಮಾಡುವ ಸಂದೇಶಗಳಿಗೆ ಯಾವುದೇ ರೀತಿಯಲ್ಲಿ ಜವಾಬ್ದಾರರಾಗಿರುವುದಿಲ್ಲ ಎಂದು ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅರ್ಜಿದಾರರ ವಾದದಲ್ಲಿ ಹುರುಳಿಲ್ಲ ಎಂದು ವಾದಿಸಿದ ದೂರುದಾರರು ವಾಟ್ಸಾಪ್ ಗುಂಪಿನಿಂದ ತೆಗೆದುಹಾಕಲಾಗಿದ್ದ ಸದಸ್ಯರನ್ನು ಮತ್ತೆ ಗುಂಪಿಗೆ ಸೇರಿಸಿದ್ದರಿಂದ ಅರ್ಜಿದಾರರ ನಡುವೆ ಒಪ್ಪಂದ ಏರ್ಪಟ್ಟಿತ್ತು ಎಂದು ವಾದಿಸಿದ್ದರು.
Recommended Video
ಆದರೂ, ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿದವರು ಯಾರು ಎಂಬುದನ್ನು ತೀರ್ಮಾನಿಸಲು ಸಹಾಯ ಮಾಡುವ ವಿಧಿ ವಿಜ್ಞಾನ ವರದಿ ಇನ್ನು ದೊರೆಯಬೇಕಿದೆ ಎಂದು ಹೆಚ್ಚುವರಿ ಸಾರ್ವಜನಿಕ ಪ್ರಾಸಿಕ್ಯೂಟರ್ ತಿಳಿಸಿದರು. ಇದರ ಆಧಾರದ ಮೇಲೆ ನ್ಯಾಯಾಲಯ ಅರ್ಜಿಯನ್ನು ಅಕಾಲಿಕ ಎಂಬುದಾಗಿ ಪರಿಗಣಿಸಿತು.
ವಾಟ್ಸಾಪ್ ಗ್ರೂಪ್ ರಚಿಸಿರುವವರಿಗೆ ಸದಸ್ಯರ ಅಪರಾಧ ಕೃತ್ಯಗಳ ಬಗ್ಗೆ ಮೊದಲೇ ತಿಳಿದಿರುತ್ತದೆ ಎಂದು ನಿರೀಕ್ಷಿಸಲಾಗದು ಎಂಬ ಬಾಂಬೆ ಹೈಕೋರ್ಟ್ನ ಅಭಿಪ್ರಾಯವನ್ನು ನ್ಯಾಯಾಲಯ ಈ ಸಂದರ್ಭದಲ್ಲಿ ಪ್ರಸ್ತಾಪಿಸಿ, ಅರ್ಜಿದಾರರು ಗ್ರೂಪ್ ಅಡ್ಮಿನ್ ಪಾತ್ರವನ್ನು ಮಾತ್ರ ನಿರ್ವಹಿಸಿದ್ದರೆ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವಾಗ ಅರ್ಜಿದಾರರ ಹೆಸರನ್ನು ತೆಗೆದುಹಾಕುವಂತೆ ಮದ್ರಾಸ್ ಹೈಕೋರ್ಟ್ ನಿರ್ದೇಶಿಸಿದೆ. (ಮಾಹಿತಿ ಕೃಪೆ: ಬಾರ್ ಅಂಡ್ ಬೆಂಚ್)
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications