ಟಿಸಿಎಸ್ ಮಹಿಳಾ ಉದ್ಯೋಗಿ ವಜಾ ಆದೇಶಕ್ಕೆ ಹೈ ತಡೆ
ಚೆನ್ನೈ, ಜ. 13: ಸುಮಾರು 25 ಸಾವಿರಕ್ಕೂ ಅಧಿಕ ಇಂಜಿನಿಯರ್ಗಳನ್ನು ವಜಾಗೊಳಿಸಲು ನಿರ್ಧರಿಸಿರುವ ಟಿಸಿಎಸ್ ತನ್ನ ಮಹಿಳಾ ಉದ್ಯೋಗಿಯೋರ್ವರಿಗೆ ನೀಡಿದ್ದ ವಜಾ ಆದೇಶಕ್ಕೆ ಮದ್ರಾಸ್ ಹೈ ಕೋರ್ಟ್ ಮಂಗಳವಾರ ತಡೆಯೊಡ್ಡಿ ಆದೇಶ ನೀಡಿದೆ.
ಪ್ರಸ್ತುತ ಗರ್ಭಿಣಿಯಾಗಿರುವ ರೇಖಾ ಎಂಬುವರನ್ನು ವಜಾಗೊಳಿಸಿ ಕಂಪನಿ ಆದೇಶ ನೀಡಿತ್ತು. ಜನವರಿ 21ರಂದು ಅವರಿಗೆ ಬಿಡುಗಡೆ ಪತ್ರ ನೀಡಲಾಗುವುದು ಎಂದು ಟಿಸಿಎಸ್ ತಿಳಿಸಿತ್ತು. ಇದನ್ನು ವಿರೋಧಿಸಿ ಹೈ ಕೋರ್ಟ್ ಮೆಟ್ಟಿಲೇರಿದ್ದ ರೇಖಾ ಕಂಪನಿಯ ಕ್ರಮ 1947ರ ಕೈಗಾರಿಕಾ ವಿವಾದಗಳ ಕಾಯಿದೆಗೆ ವಿರುದ್ಧವಾಗಿದೆ ಎಂದು ವಾದಿಸಿದ್ದರು. [ಟಿಸಿಎಸ್ ರಹಸ್ಯ ಉದ್ಯೋಗಿಯಿಂದ ಆಡಿಯೋ ಲೀಕ್]
ಅವರ ವಾದ ಆಲಿಸಿದ ನ್ಯಾಯಮೂರ್ತಿ ಎಂ. ದುರೈಸ್ವಾಮಿ ಕಂಪನಿಯ ಕ್ರಮಕ್ಕೆ ನಾಲ್ಕು ವಾರಗಳ ತಾತ್ಕಾಲಿಕ ತಡೆಯೊಡ್ಡಿ ಆದೇಶ ನೀಡಿದ್ದಾರೆ.

ರೇಖಾ ಅವರು ಟಿಸಿಎಸ್ ಕಂಪನಿಗೆ ಚೆನ್ನೈನಲ್ಲಿ 2011ರ ಮಾರ್ಚ್ ತಿಂಗಳಲ್ಲಿ ಐಟಿ ಅನಾಲಿಸ್ಟ್ ಆಗಿ ಕೆಲಸಕ್ಕೆ ಸೇರಿದ್ದರು. ಕೈಗಾರಿಕಾ ವಿವಾದಗಳ ಕಾಯಿದೆ 1947ರ ಪ್ರಕಾರ ತಾವೊಬ್ಬ 'ಕೆಲಸಗಾರ' ಎಂದು ಅವರು ತಿಳಿಸಿದ್ದಾರೆ. [ಟಿಸಿಎಸ್ ವಿರುದ್ಧ ಉದ್ಯೋಗಿಗಳ ದಂಗೆ]
ತಮ್ಮ ಕರ್ತವ್ಯ ನಿರ್ವಹಣೆಗೆ ರೇಖಾ ಅವರು ಕಂಪನಿಯಿಂದ 'ಸಿ' ಗ್ರೇಡ್ ಪಡೆದಿದ್ದರು. ಇದರ ಪ್ರಕಾರ ರೇಖಾ ಅವರು ಕಂಪನಿಯ ಎಲ್ಲ ರೀತಿಯ ನಿರೀಕ್ಷೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದಾಗಿತ್ತು.
ಆದರೆ, ಸುಮಾರು 55,000 ನೂತನ ಸಿಬ್ಬಂದಿ ನೇಮಿಸಿಕೊಳ್ಳಲು ಮುಂದಾಗಿರುವ ಟಿಸಿಎಸ್ ಈಗಿರುವ ಸಹಾಯಕ ಸಲಹೆಗಾರ ಹಾಗೂ ಅದಕ್ಕಿಂತ ಮೇಲಿನ ಸ್ಥಾನದಲ್ಲಿರುವ 25,000 ಸಿಬ್ಬಂದಿಯನ್ನು ವಜಾಗೊಳಿಸಲು ತೀರ್ಮಾನಿಸಿದೆ. [ಪ್ರತಿಭಾನ್ವಿತರ ಸೆಳೆಯಲು ವೇತನ ಹೆಚ್ಚಿಸಿದ ಟಿಸಿಎಸ್]
ಆದರೆ, ಕಾನೂನು ಪ್ರಕಾರ ಟಿಸಿಎಸ್ ಕಂಪನಿಯು ಯಾವುದೇ ನೋಟಿಸ್ ನೀಡಿಲ್ಲ. ಅಲ್ಲದೆ, ವಜಾಗೊಳಿಸುವ ನೌಕರನಿಗೆ ವರ್ಷಕ್ಕೆ 15 ದಿನಗಳ ಸಂಬಳದಂತೆ ಪರಿಹಾರ ಧನವನ್ನೂ ನೀಡಿಲ್ಲ ಎಂದು ರೇಖಾ ಅವರು ವಾದಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications