ಟಿಸಿಎಸ್ ಮಹಿಳಾ ಉದ್ಯೋಗಿ ವಜಾ ಆದೇಶಕ್ಕೆ ಹೈ ತಡೆ
ಚೆನ್ನೈ, ಜ. 13: ಸುಮಾರು 25 ಸಾವಿರಕ್ಕೂ ಅಧಿಕ ಇಂಜಿನಿಯರ್ಗಳನ್ನು ವಜಾಗೊಳಿಸಲು ನಿರ್ಧರಿಸಿರುವ ಟಿಸಿಎಸ್ ತನ್ನ ಮಹಿಳಾ ಉದ್ಯೋಗಿಯೋರ್ವರಿಗೆ ನೀಡಿದ್ದ ವಜಾ ಆದೇಶಕ್ಕೆ ಮದ್ರಾಸ್ ಹೈ ಕೋರ್ಟ್ ಮಂಗಳವಾರ ತಡೆಯೊಡ್ಡಿ ಆದೇಶ ನೀಡಿದೆ.
ಪ್ರಸ್ತುತ ಗರ್ಭಿಣಿಯಾಗಿರುವ ರೇಖಾ ಎಂಬುವರನ್ನು ವಜಾಗೊಳಿಸಿ ಕಂಪನಿ ಆದೇಶ ನೀಡಿತ್ತು. ಜನವರಿ 21ರಂದು ಅವರಿಗೆ ಬಿಡುಗಡೆ ಪತ್ರ ನೀಡಲಾಗುವುದು ಎಂದು ಟಿಸಿಎಸ್ ತಿಳಿಸಿತ್ತು. ಇದನ್ನು ವಿರೋಧಿಸಿ ಹೈ ಕೋರ್ಟ್ ಮೆಟ್ಟಿಲೇರಿದ್ದ ರೇಖಾ ಕಂಪನಿಯ ಕ್ರಮ 1947ರ ಕೈಗಾರಿಕಾ ವಿವಾದಗಳ ಕಾಯಿದೆಗೆ ವಿರುದ್ಧವಾಗಿದೆ ಎಂದು ವಾದಿಸಿದ್ದರು. [ಟಿಸಿಎಸ್ ರಹಸ್ಯ ಉದ್ಯೋಗಿಯಿಂದ ಆಡಿಯೋ ಲೀಕ್]
ಅವರ ವಾದ ಆಲಿಸಿದ ನ್ಯಾಯಮೂರ್ತಿ ಎಂ. ದುರೈಸ್ವಾಮಿ ಕಂಪನಿಯ ಕ್ರಮಕ್ಕೆ ನಾಲ್ಕು ವಾರಗಳ ತಾತ್ಕಾಲಿಕ ತಡೆಯೊಡ್ಡಿ ಆದೇಶ ನೀಡಿದ್ದಾರೆ.

ರೇಖಾ ಅವರು ಟಿಸಿಎಸ್ ಕಂಪನಿಗೆ ಚೆನ್ನೈನಲ್ಲಿ 2011ರ ಮಾರ್ಚ್ ತಿಂಗಳಲ್ಲಿ ಐಟಿ ಅನಾಲಿಸ್ಟ್ ಆಗಿ ಕೆಲಸಕ್ಕೆ ಸೇರಿದ್ದರು. ಕೈಗಾರಿಕಾ ವಿವಾದಗಳ ಕಾಯಿದೆ 1947ರ ಪ್ರಕಾರ ತಾವೊಬ್ಬ 'ಕೆಲಸಗಾರ' ಎಂದು ಅವರು ತಿಳಿಸಿದ್ದಾರೆ. [ಟಿಸಿಎಸ್ ವಿರುದ್ಧ ಉದ್ಯೋಗಿಗಳ ದಂಗೆ]
ತಮ್ಮ ಕರ್ತವ್ಯ ನಿರ್ವಹಣೆಗೆ ರೇಖಾ ಅವರು ಕಂಪನಿಯಿಂದ 'ಸಿ' ಗ್ರೇಡ್ ಪಡೆದಿದ್ದರು. ಇದರ ಪ್ರಕಾರ ರೇಖಾ ಅವರು ಕಂಪನಿಯ ಎಲ್ಲ ರೀತಿಯ ನಿರೀಕ್ಷೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದಾಗಿತ್ತು.
ಆದರೆ, ಸುಮಾರು 55,000 ನೂತನ ಸಿಬ್ಬಂದಿ ನೇಮಿಸಿಕೊಳ್ಳಲು ಮುಂದಾಗಿರುವ ಟಿಸಿಎಸ್ ಈಗಿರುವ ಸಹಾಯಕ ಸಲಹೆಗಾರ ಹಾಗೂ ಅದಕ್ಕಿಂತ ಮೇಲಿನ ಸ್ಥಾನದಲ್ಲಿರುವ 25,000 ಸಿಬ್ಬಂದಿಯನ್ನು ವಜಾಗೊಳಿಸಲು ತೀರ್ಮಾನಿಸಿದೆ. [ಪ್ರತಿಭಾನ್ವಿತರ ಸೆಳೆಯಲು ವೇತನ ಹೆಚ್ಚಿಸಿದ ಟಿಸಿಎಸ್]
ಆದರೆ, ಕಾನೂನು ಪ್ರಕಾರ ಟಿಸಿಎಸ್ ಕಂಪನಿಯು ಯಾವುದೇ ನೋಟಿಸ್ ನೀಡಿಲ್ಲ. ಅಲ್ಲದೆ, ವಜಾಗೊಳಿಸುವ ನೌಕರನಿಗೆ ವರ್ಷಕ್ಕೆ 15 ದಿನಗಳ ಸಂಬಳದಂತೆ ಪರಿಹಾರ ಧನವನ್ನೂ ನೀಡಿಲ್ಲ ಎಂದು ರೇಖಾ ಅವರು ವಾದಿಸಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications