ಪರಪುರುಷನ ತೆಕ್ಕೆಗೆ ಬಿದ್ದ ಪತ್ನಿಯನ್ನು ಕೊಚ್ಚಿ ಕೊಂದ ಪತಿ
ಮದುರೈ, ಜುಲೈ 23: ಅಕ್ರಮ ಸಂಬಂಧದಲ್ಲಿ ಸುಖ ಕಾಣುತ್ತಿದ್ದ ಪತ್ನಿಯನ್ನು ಆಕೆಯ ಪತಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ದಂಪತಿಯ 10 ವರ್ಷದ ಮಗ ತನ್ನ ತಾಯಿಯನ್ನು ತಂದೆಯೇ ಕೊಚ್ಚಿ ಕೊಲೆ ಮಾಡಿದ ಭೀಕರ ದೃಶ್ಯವನ್ನು ಕಣ್ಣಾರೆ ಕಂಡಿದ್ದಾನೆ.
37 ವರ್ಷ ವಯಸ್ಸಿನ ಸೀಲೈಕ್ಕರಿ ಎಂಬುವವರನ್ನು ಕೊಂದ ಆರೋಪದ ಮೇಲೆ 47 ವರ್ಷ ವಯಸ್ಸಿನ ಕೆ ಪೆರಿಯಸ್ವಾಮಿ ಅವರನ್ನು ಬಂಧಿಸಲಾಗಿದೆ. ಪಕ್ಕದ ಮನೆಯಾತನೊಡನೆ ನನ್ನ ಪತ್ನಿ ಚಕ್ಕಂದವಾಡುತ್ತಿದ್ದಳು. ಅದಕ್ಕಾಗಿ ಆಕೆಯನ್ನು ನಾನು ಕೊಂದೆ ಎಂದು ಪೆರಿಯಾಸ್ವಾಮಿ ತನ್ನ ತಪ್ಪೊಪ್ಪಿಕೊಂಡಿದ್ದಾನೆ.
ಬೇಡ ನನಗೆ ಮೋಸ ಮಾಡಬೇಡ. ನಾನು ಎಷ್ಟೋ ಸಾರಿ ಅವಳಿಗೆ ಹೇಳಿದ್ದೆ ಆದರೆ, ಅವಳು ನನ್ನ ಮಾತನ್ನು ತಿರಸ್ಕರಿಸಿ ನೆರೆ ಮನೆಯವನೊಂದಿಗೆ ದೈಹಿಕ ಸಂಬಂಧ ಬೆಳೆಸಿದಳು ಎಂದು ಪೆರಿಯಾಸ್ವಾಮಿ ಹೇಳಿದ್ದಾನೆ.

ಈ ಘಟನೆಗೆ ಸಾಕ್ಷಿಯಾದ 10 ವರ್ಷದ ಮಗನಲ್ಲದೆ ಇನ್ನೂ ಇಬ್ಬರು ಹೆಣ್ಣು ಮಕ್ಕಳನ್ನು ಈ ದಂಪತಿ ಹೊಂದಿದ್ದಾರೆ. ಘಟನೆ ನಡೆದ ದಿನ ಸೀಲಕ್ಕಾರಿ ತನ್ನ 10 ವರ್ಷದ ಮಗನೊಂದಿಗೆ ಮನೆಯ ಸಾಕುಪ್ರಾಣಿಗಳನ್ನು ಮೇಯಿಸಲು ಹೊರಕ್ಕೆ ಕರೆದುಕೊಂಡು ಹೋಗಿದ್ದರು. ಸಂಜೆ ವೇಳೆಗೆ ಬಂದು ಸುಸ್ತಾಗಿ ಮಂಚದ ಮೇಲೆ ಮಲಗಿಬಿಟ್ಟರು. ಈ ಸಂದರ್ಭದಲ್ಲಿ ಬಾಲಕ ತಾಯಿಯ ಮೊಬೈಲ್ ಫೋನ್ ಹಿಡಿದುಕೊಂಡು ಆಟವಾಡುತ್ತಿದ್ದ. ಕೆಲಸದ ಮೇಲೆ ಹೊರಕ್ಕೆ ಹೋಗಿದ್ದ ಪೆರಿಯಾಸ್ವಾಮಿ ಮನೆಗೆ ಹಿಂತಿರುಗಿದ ತಕ್ಷಣವೇ ಪತ್ನಿಗೆ ಕಾಲಿನಿಂದ ಒದ್ದಿದ್ದಾನೆ. ಗಾಬರಿಯಿಂದ ಆಕೆ ಎಚ್ಚರಗೊಂಡಿದ್ದಾಳೆ.
ತಾಯಿಯನ್ನು ಹೊಡೆಯುವುದನ್ನು ಕಂಡ ಮಗ ಅಡ್ಡಬಂದಾಗ ಆತನಿಗೂ ಪೆಟ್ಟು ಬಿದ್ದಿದೆ. ಇಬ್ಬರ ನಡುವೆ ಜೋರು ಜಗಳವಾಗಿದೆ. ಅಲ್ಲೇ ಸಮೀಪದಲ್ಲಿದ್ದ ಮಚ್ಚು ತೆಗೆದುಕೊಂಡು ಪತ್ನಿಯನ್ನು ಕೊಚ್ಚಿ ಹಾಕಿ ಪರಾರಿಯಾಗಿದ್ದಾನೆ. ಈ ಘಟನೆಯಿಂದ ದಂಪತಿಯ ಮೂವರು ಮಕ್ಕಳು ತೀವ್ರವಾಗಿ ಗಾಬರಿಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications